ಮುಂಗಾರು ಹಂಗಾಮಿಗೆ ಕೂರಿಗೆ ಪೂಜೆ ಸಂಭ್ರಮ 

­ಕೂರಿಗೆಗೆ ಸೀರೆಯುಡಿಸಿ ಸಿಂಗಾರ! ­ಪೂಜೆ-ಭಕ್ಷ್ಯಗಳ ನೈವೇದ್ಯ ಸಮರ್ಪಣೆ! ­ಐದು ಮಂದಿ ಮುತ್ತೈದೆಯರಿಗೆ ಉಡಿ

Team Udayavani, May 31, 2021, 7:03 PM IST

27gld2a

ವರದಿ: ಮಲ್ಲಿಕಾರ್ಜುನ ಕಲಕೇರಿ

ಗುಳೇದಗುಡ್ಡ: ಮುಂಗಾರು ಬಂತೆಂದರೆ ವರುಣನ ಸಿಂಚನಕ್ಕೆ ಭೂತಾಯಿ ನಸುನಗುವ ಸಮಯ. ಭೂಮಿಯ ತುಂಬೆಲ್ಲ ಹಸಿರು ಆವರಿಸುವ ಕಾಲ ಆರಂಭ. ರೈತನ ಮೊಗದಲ್ಲಂತೂ ಎಲ್ಲಿಲ್ಲದ ಸಂತಸ. ಈ ಸಂತಸಕ್ಕೆ ಮತ್ತೂಂದು ಮೆರಗು ಎಂದರೆ ಕೂರಿಗೆ ಪೂಜೆ.

ಕೂರಿಗೆ ಪೂಜೆ ಮಾಡುವುದೆಂದರೆ ಗ್ರಾಮೀಣ ಪ್ರದೇಶಗಳಲ್ಲಿ ಹಬ್ಬದ ವಾತಾವರಣವೇ ಸೃಷ್ಟಿಯಾಗುತ್ತದೆ. ಮುಂಗಾರು ಆರಂಭವಾದರೆ ಸಾಕು ಬಿತ್ತನೆ ಕಾರ್ಯಕ್ಕೆ ಅಣಿಯಾಗುವ ಕಾಲವದು. ಈ ಸಮಯದಲ್ಲಿ ಬಿತ್ತಿದರೆ ಬೆಳೆ ಹುಲುಸಾಗಿ ಬರುತ್ತೆ. ಅಲ್ಲದೇ ಆ ಭೂ ತಾಯಿ ನಂಬಿದವರನ್ನು ಎಂದಿಗೂ ಕೈಬಿಡಲ್ಲ ಎಂಬುವುದು ವಾಡಿಕೆ. ಆ ಕಾರಣಕ್ಕಾಗಿಯೇ ರೈತರು ಮೊದಲು ಕೂರಿಗೆ ಪೂಜೆ ಮಾಡುತ್ತಾರೆ. ಈ ಕೂರಿಗೆ ಪೂಜೆ ಮಾಡದೇ ರೈತರು ಬಿತ್ತನೆ ಕೆಲಸಕ್ಕೆ ಮುಂದಾಗುವುದಿಲ್ಲ. ಅಡಿಗುಡ್ಡ ಪೂಜೆ: ನಮ್ಮದು ಪರಂಪರೆಗಳ ತಾಣ. ಇಲ್ಲಿ ಪ್ರತಿಯೊಂದು ಪ್ರದೇಶವೂ ತನ್ನದೇಯಾದ ವೈಶಿಷ್ಟತೆ, ಆಚರಣೆಗಳನ್ನು ಹೊಂದಿದೆ. ಈ ಆಚರಣೆಗಳು ಆಯಾ ಕಾಲ ಘಟ್ಟದಲ್ಲಿ ಅಭಿವ್ಯಕ್ತಗೊಳ್ಳುತ್ತವೆ.

ಕೂರಿಗೆ ಪೂಜೆಯೂ ರೈತರು ಸಂಭ್ರಮದಿಂದ ಆಚರಿಸುವ ಆಚರಣೆಗಳಲ್ಲೊಂದು. ಬಿತ್ತನೆ ಕಾರ್ಯ ಮಾಡುವ ಮುಂಚಿತವಾಗಿ ಮುಂಗಾರುಮಳೆ ಆರಂಭದ ದಿನದಂದು ಅಡಿಗುಡ್ಡ ಪೂಜೆ ಮಾಡುತ್ತಾರೆ. ತದ ನಂತರ ರೈತರು ತಾವು ತಂದ ಮೂರು ಕಟ್ಟಿಗೆಗಳನ್ನು ತಾಳು ಕೆತ್ತುವ ಮೂಲಕ ಹೊಸ ಕೂರಿಗೆ ತಯಾರಿಸುತ್ತಾರೆ. ಹೀಗೆ ಪದ್ಧತಿ ಪ್ರಕಾರ ಪೂಜೆಗೊಳ್ಳುವ ಕೂರಿಗೆಗೆ ರೈತರು ಸುಣ್ಣ-ಬಣ್ಣ ಹಚ್ಚುವುದರ ಮೂಲಕ ಅಲಂಕರಿಸುತ್ತಾರೆ.

ಪೂಜೆ ಮಾಡುವ ಸಮಯದಲ್ಲಿ ಅದಕ್ಕೆ ಸೀರೆಯನ್ನುಡಿಸಿ ಮದುಮಗಳಂತೆ ಅಲಂಕರಿಸುತ್ತಾರೆ. ನೈವೇದ್ಯಕ್ಕಾಗಿ ಹುಗ್ಗಿ- ಹೋಳಿಗೆ, ಅನ್ನ-ಸಾಂಬಾರು ಸೇರಿದಂತೆ ನಾನಾ ತರಹದ ಅಡುಗೆ ಮಾಡಿ ನೈವೇದ್ಯ ಅರ್ಪಿಸುತ್ತಾರೆ. ಇದೇ ಸಂದರ್ಭದಲ್ಲಿ ಐದು ಮಂದಿ ಮುತ್ತೈದೆಯರಿಗೆ ಉಡಿ ತುಂಬಲಾಗುತ್ತದೆ. ನಂತರ ಎಲ್ಲರೂ ಪ್ರಸಾದ ಸ್ವೀಕರಿಸುತ್ತಾರೆ.

ಕೂರಿಗೆಯನ್ನು ಊರಿನ ಮುಖ್ಯ ರಸ್ತೆ ಮುಖಾಂತರ ತಮ್ಮ ತಮ್ಮ ಹೊಲಗಳಿಗೆ ಬಿತ್ತನೆಗೆ ತೆಗೆದುಕೊಂಡು ಹೋಗುತ್ತಾರೆ. ಮುಂಗಾರು ಆರಂಭವಾದರೆ ಸಾಕು ಗುಳೇದಗುಡ್ಡ ತಾಲೂಕಿನ ನಾಗರಾಳ ಎಸ್‌. ಪಿ.,ಕೋಟೆಕಲ್‌, ಕೆಲವಡಿ, ಹಾನಾಪೂರ, ತೋಗುಣಶಿ, ಆಸಂಗಿ, ಲಾಯದಗುಂದಿ, ಹಳದೂರ, ಅಲ್ಲೂರ, ಪಾದನಕಟ್ಟಿ ಸೇರಿದಂತೆ ನಾನಾ ಗ್ರಾಮಗಳಲ್ಲಿನ ರೈತರು ಕೂರಿಗೆ ಪೂಜೆ ಸಲ್ಲಿಸಿಯೇ ಕೃಷಿ ಕೆಲಸಕ್ಕೆ ಮುಂದಾಗುತ್ತಾರೆ.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.