3 ನದಿಗಳ ಮಡಿಲಲ್ಲಿದ್ದರೂ ಶುದ್ಧ ನೀರಿಲ್ಲ


Team Udayavani, Mar 21, 2020, 1:14 PM IST

3 ನದಿಗಳ ಮಡಿಲಲ್ಲಿದ್ದರೂ ಶುದ್ಧ ನೀರಿಲ್ಲ

ಸಾಂದರ್ಭಿಕ ಚಿತ್ರ

ಹುನಗುಂದ: ಕೃಷ್ಣೆ, ಮಲಪ್ರಭೆ ಸಂಗಮಗೊಳ್ಳುವ ಹುನಗುಂದ ತಾಲೂಕು ಮೂರು ನದಿಗಳ ಮಡಿಲಿನಲ್ಲಿದೆ. ಆದರೂ, ಇಲ್ಲಿನ ಜನರಿಗೆ ಕುಡಿಯಲು ಶುದ್ಧ ನೀರಿಲ್ಲ. ಸರ್ಕಾರ ಕೋಟ್ಯಂತರ ಖರ್ಚು ಮಾಡಿದರೂ ಅದು ಸದ್ಭಳಕೆಯಾಗುತ್ತಿಲ್ಲ ಎಂಬ ಅಸಮಾಧಾನ ತಾಲೂಕಿನಲ್ಲಿ ಕೇಳಿ ಬರುತ್ತಿದೆ.

ಲಕ್ಷಾಂತರ ಖರ್ಚು ಮಾಡಿ ನಿರ್ಮಿಸಿದ ಶುದ್ಧ ಕುಡಿಯುವ ನೀರಿನ ಘಟಕದ ವಸ್ತುಗಳು ತುಕ್ಕು ಹಿಡಿದಿವೆ. ಘಟಕದ ಸುತ್ತಲೂ ಮುಳ್ಳು-ಕಂಟಿ ಬೆಳೆದಿವೆ. ಆದರೂ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ನನಗೆ ಸಂಬಂಧವಿಲ್ಲ ಎಂಬಂತೆ ಗಾಢ ನಿದ್ರೆಯಲ್ಲಿದೆ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

ತಾಲೂಕಿನ ಚಿತ್ತರಗಿ ಗ್ರಾಪಂ ವ್ಯಾಪ್ತಿಯ ಗಂಗೂರ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅನುದಾನದಡಿ ಲಕ್ಷಾಂತರ ಹಣವನ್ನು ಖರ್ಚು ಮಾಡಿ, ನಿರ್ಮಾಣ ಮಾಡಿದ ಘಟಕ ಮಾತ್ರ ನಾಲ್ಕೈದು ವರ್ಷ ಕಳೆದರೂ ಘಟಕ ಆರಂಭಿಸಿಲ್ಲ. ಹೀಗಾಗಿ ಈ ಗ್ರಾಮದ ಜನತೆಗೆ ಒಂದು ತೊಟ್ಟು ನೀರು ಕಂಡಿಲ್ಲ.

ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸಿದಾಗ ಗ್ರಾಮಸ್ಥರು ನಮ್ಮೂರಲ್ಲಿ ಒಂದು ಶುದ್ಧ ಕುಡಿಯುವ ನೀರಿನ ಘಟಕವಾಗುತ್ತದೆ. ಬೋರ್‌ವೆಲ್‌ ನೀರು ಕುಡಿಯೋದು ತಪ್ಪುತ್ತದೆ, ಪ್ಲೋರೈಡ್‌ಯುಕ್ತ ನೀರಿನಿಂದ ಬರುವ ಸಾಂಕ್ರಾಮಿಕ ರೋಗಗಳಿಂದ ಮುಕ್ತಿ ಸಿಗುತ್ತದೆ ಎಂದುಕೊಂಡಿದ್ದ ಗ್ರಾಮಸ್ಥರ ಬಹುದೊಡ್ಡ ಆಸೆಗೆ ಅಧಿಕಾರಿಗಳು ಎಳ್ಳು ನೀರು ಬಿಟ್ಟಿದ್ದಾರೆ.

ಘಟಕದ ಸುತ್ತ ಮುಳ್ಳು-ಕಂಟಿ: ಶುದ್ಧ ನೀರಿನ ಘಟಕ ನಿರ್ಮಾಣವಾಗಿ ನಾಲ್ಕೈದು ವರ್ಷವಾಗಿವೆ. ಅದರ ಸುತ್ತಮುತ್ತ ಮುಳ್ಳು ಕಂಟಿಗಳು ಬೆಳೆದು ಹಂದಿ, ನಾಯಿಗಳ ವಾಸದ ತಾಣವಾಗಿದೆ. ಈ ಸ್ಥಳವಂತೂ ಮದ್ಯ ವ್ಯಸನಿಗಳಿಗೆ ಆಶ್ರಯವೂ ಆಗಿದೆ. ಈ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಅಳವಡಿಸಿದ ಸುಮಾರು 250 ಲೀಟರ್‌ ಹೆಚ್ಚಿನ ಸಾಮರ್ಥ್ಯದ ನೀರಿನ ಟ್ಯಾಂಕ್‌ ಮತ್ತು ಶುದ್ಧೀಕರಣದ ಯಂತ್ರಗಳು ಧೂಳ ತುಂಬಿ ಸಂಪೂರ್ಣ ತುಕ್ಕು ಹಿಡಿದಿದೆ. ಘಟಕದ ಸುತ್ತಲಿನ ನಿರ್ಮಾಣದ ಕ್ಯಾಬಿನ್‌ದ ಬಾಗಿಲು ಕಿಟಕಿಗಳ ಗಾಜುಗಳು ಪುಂಡರ ಹಾವಳಿಗೆ ಪುಡಿ-ಪುಡಿಯಾಗಿ ಹೋಗಿವೆ.

ನೀರಿಗಾಗಿ ಹಾಹಾಕಾರ: ಬೇಸಿಗೆಯಲ್ಲಿ ಗ್ರಾಮೀಣ ಜನರು ನೀರಿಗಾಗಿ ಹಾಹಾಕಾರ ಪಡಬಾರದು ಎನ್ನುವ ದೃಷ್ಟಿಯಿಂದ ಸರ್ಕಾರ ಗ್ರಾಮೀಣ ಜನರ ಕುಡಿಯುವ ನೀರಿಗಾಗಿ ಕೋಟಿ-ಕೋಟಿ ಹಣ ವ್ಯಯ ಮಾಡಿ ಒಂದು ಹಳ್ಳಿಗೆ ಇಲ್ಲವೇ ಎರಡು ಮೂರು ಹಳ್ಳಿಗೆ ಸೇರಿಸಿ ಒಂದೊಂದು ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸುವಂತೆ ಅನುದಾನ ನೀಡಲಾಗಿದೆ. ಆದರೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಘಟಕಗಳು ಆರಂಭವಾಗದೇ ಸ್ಥಗಿತಗೊಂಡಿವೆ. ಸದ್ಯ ಬೇಸಿಗೆ ಆರಂಭವಾಗಿದ್ದು ಗ್ರಾಮೀಣ ಜನರು ಮತ್ತೆ ನೀರಿಗಾಗಿ ಪರದಾಡುವ ಸ್ಥಿತಿ ಮಾತ್ರ ತಪ್ಪುತ್ತಿಲ್ಲ. ಕಣ್ಣಿದ್ದು ಕುರುಡಾದ ಅಧಿಕಾರಿಗಳು: ಗಂಗೂರ ಗ್ರಾಮದಲ್ಲಿ ನೀರಿನ ಘಟಕದ ಆರಂಭಿಸುವಂತೆ ಗ್ರಾಮಸ್ಥರು ಸಾಕಷ್ಟು ಬಾರಿ ಗ್ರಾಪಂ ಪಿಡಿಒ ಕೇಳಿದರೇಅದು ನನಗೆ ಸಂಬಂಧಿಸಿಲ್ಲ. ಭೂ ಸೇನಾ ನಿಗಮಕ್ಕೆ ಸೇರಿದೆ. ಅದನ್ನು ಇಲ್ಲಿವರಿಗೆ ಗ್ರಾಪಂಗೆ ಹಸ್ತಾಂತರಿಸಿಲ್ಲ. ಅದರ ಬಗ್ಗೆ ನನ್ನನ್ನು ಏನು ಕೇಳಬೇಡಿ ಎಂದು ಹಾರಿಕೆ ಉತ್ತರ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಒಟ್ಟಾರೆಯಾಗಿ ನಾಲ್ಕೈದು ವರ್ಷದಿಂದ ಆರಂಭವಾಗದೇ ತುಕ್ಕು ಹಿಡಿದು ಹಾಳಾಗುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಈಗಲಾದರೂ ಸಂಬಂಧಿಸಿದ ಅಧಿಕಾರಿಗಳು ಆರಂಭಿಸಿ ಗ್ರಾಮದ ಜನತೆ ಶುದ್ಧ ಜೀವ ಜಲ ಒದಗಿಸಬೇಕಿದೆ.

ಗಂಗೂರ ಗ್ರಾಮದಲ್ಲಿ ನಾಲ್ಕೈದು ವರ್ಷದ ಹಿಂದೆಯೇ ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಲಾಗಿದೆ. ಅದು ಸದ್ಯ ಪ್ರಾರಂಭವಿಲ್ಲದೇ ಯಂತ್ರಗಳು ತುಕ್ಕು ಹಿಡಿಯುವ ಸ್ಥಿತಿಗೆ ತಲುಪಿದ್ದು. ಹಂದಿ-ನಾಯಿಗಳ ವಾಸ ಸ್ಥಾನವಾಗಿದ್ದಲ್ಲದೇ ಅದು ಮದ್ಯ ವ್ಯಸನಿಗಳ ಅಡ್ಡೆಯಾಗಿದೆ. -ಸೋಮು ಚಲವಾದಿ, ಗಂಗೂರ ಗ್ರಾಮಸ್ಥ

 

ಮಲ್ಲಿಕಾರ್ಜುನ ಬಂಡರಗಲ್ಲ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.