ಐಹೊಳೆಯಲ್ಲಿ ಸೌಲಭ್ಯ ಮರೀಚಿಕೆ


Team Udayavani, Sep 27, 2019, 12:23 PM IST

bk-tdy-3

ಅಮೀನಗಡ: ಭಾರತೀಯ ದೇವಾಲಯಗಳ ತೊಟ್ಟಿಲು ಖ್ಯಾತಿಯ ಐಹೊಳೆ ರಾಷ್ಟ್ರೀಯ ಪ್ರವಾಸಿ ತಾಣ. ಬಾದಾಮಿ ಚಾಲುಕ್ಯರ ಕಾಲದಲ್ಲಿ ನಿರ್ಮಾಣಗೊಂಡ ಇಲ್ಲಿನ ಹಲವು ಸ್ಮಾರಕಗಳು ವಿಶ್ವದ ಜನರ ಗಮನ ಸೆಳೆದಿವೆ.

ಆದರಿಲ್ಲಿ ಪ್ರವಾಸಿಗರಿಗೆ ಕನಿಷ್ಠ ಸೌಲಭ್ಯಗಳನ್ನು ಒದಗಿಸಿಲ್ಲ. ಪ್ರವಾಸಿಗರು ಬಿಡಿ ಇಲ್ಲಿ ವಾಸಿಸುವ ಜನರಿಗೂ ಬಿದ್ದ ಮನೆ ಕಟ್ಟಿಕೊಳ್ಳುವ ಸ್ವಾತಂತ್ರ್ಯವೂ ಇಲ್ಲ. ಐಹೊಳೆಯ ಸೌಂದರ್ಯ ವೀಕ್ಷಿಸಲು ಇಲ್ಲಿಗೆ ಲಕ್ಷಾಂತರ ಪ್ರವಾಸಿಗರು ಆಗಮಿಸುತ್ತಾರೆ.ಆದರೆ ಕುಡಿಯಲು ಶುದ್ಧ ನೀರಿಲ್ಲ. ಸುಲಭ ಶೌಚಾಲಯಗಳಿಲ್ಲ. ಸ್ವತ್ಛತೆಯಂತೂ ಇಲ್ಲವೇ ಇಲ್ಲ. ಇದರಿಂದ ಇಲ್ಲಿ ಆಗಮಿಸುವ ಪ್ರವಾಸಿಗರ ಸಂಖ್ಯೆ ಕ್ಷೀಣಿಸುತ್ತಿದೆ ಎನ್ನಲಾಗಿದೆ.

ಪ್ರವಾಸಿಗರಿಗೆ ನೀರಿಲ್ಲ: ಐಹೊಳೆ ನೋಡಲು ದೇಶವಿದೇಶಗಳಿಂದ ಬರುವ ಪ್ರವಾಸಿಗರು ಶುದ್ಧ ಕುಡಿಯುವ ನೀರಿಲ್ಲದೇ ಪರದಾಡುವಂತಾಗಿದೆ. ಇಲ್ಲಿಗೆ ಬರುವ ಭಾರತೀಯ ಪ್ರಜೆಗಳಿಗೆ 30ರೂ., ವಿದೇಶ ಪ್ರವಾಸಿಗರಿಗೆ 300ರೂ ಶುಲ್ಕವಿದೆ. ಆದರೆ ಅವರಿಗೆ ಶುದ್ಧ ಕುಡಿಯುವ ನೀರು ಪೂರೈಸಿಲ್ಲ. ನೀರು ಪೂರೈಸುವ ಸಾಮಗ್ರಿಗಳಿದ್ದರೂ ಹಲವಾರು ವರ್ಷಗಳಿಂದ ಅದರಲ್ಲಿ ನೀರು ಮಾತ್ರ ಬಂದಿಲ್ಲ. ಹೀಗಾಗಿ ಅವುಗಳು ತುಕ್ಕು ಹಿಡಿದಿವೆ. ಕೇವಲ ತೋರಿಕೆಗೆ ಮಾತ್ರ ಅದನ್ನು ಇಡಲಾಗಿದೆ. ಇದರಿಂದಪ್ರವಾಸಿಗರು ಹಿಡಿಶಾಪ ಹಾಕುತ್ತಿದ್ದಾರೆ.

ಸುಲಭ ಶೌಚಾಲಯವಿಲ್ಲ: ಇಲ್ಲಿ ಸುಲಭ ಶೌಚಾಲಯವಿಲ್ಲ. ಪ್ರವಾಸಿ ಕೇಂದ್ರಗಳ ಒಳಗಡೆಯಿರುವ ಶೌಚಾಲಯಗಳಿಗೆ ಹೋಗಬೇಕಾದರೆ ಪ್ರವಾಸಿ ಇಲಾಖೆ ಸಿಬ್ಬಂದಿ ಅವಕಾಶ ನೀಡಲ್ಲ. ಮೊದಲು ಟಿಕೆಟ್‌ ತೆಗೆದುಕೊಂಡು ಹೋಗಬೇಕೆಂಬ ನಿಯಮ ಅಳವಡಿಸಿಕೊಂಡಿದೆ. ಕೆಲ ಸಂದರ್ಭದಲ್ಲಿ ಪ್ರವಾಸಿಗರಿಗೆ ಬೇಗನೆ ಶೌಚಾಲಯಕ್ಕೆ ಹೋಗಲು ಸ್ಥಳಾವಕಾಶವೇ ಇಲ್ಲ.ಇದರಿಂದ ಪ್ರವಾಸಿಗರು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಗಬ್ಬೆದ್ದ ಚರಂಡಿ: ದುರ್ಗಾ ದೇವಾಲಯದ ಮುಂಭಾಗದ 200 ಮೀ. ಉದ್ದದ ಚರಂಡಿ ಗಬ್ಬೆದ್ದು ನಾರುತ್ತಿದೆ. ಈ ಚರಂಡಿಯ ಅಸ್ವಚ್ಛತೆ ಯಿಂದ ಪ್ರವಾಸಿಗರು ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ಇದೆ. ಪ್ರಾಚ್ಯ ಇಲಾಖೆಯವರು ಸ್ವತ್ಛ ಭಾರತ ಎಂದು ತಿಂಗಳಿಗೊಂದು ಕಾರ್ಯಕ್ರಮ ಮಾಡುತ್ತಾರೆ. ಆದರೆ ಆ ಚರಂಡಿ ಮಾತ್ರ ಸ್ವತ್ಛ ಆಗುತ್ತಿಲ್ಲ. ಇತ್ತ ಗ್ರಾಪಂ ಕೂಡಾ ಈ ಬಗ್ಗೆ ವಿಚಾರ ಕೂಡಾ ಮಾಡುತ್ತಿಲ್ಲ. ಈ ಚರಂಡಿ ನಮ್ಮ ವ್ಯಾಪ್ತಿಗೆ ಬರಲ್ಲ ಎನ್ನುತ್ತಾರೆ ಗ್ರಾಪಂ ಸಿಬ್ಬಂದಿ.ಈ ಗೊಂದಲಗಳಿಂದ ಚರಂಡಿ ಮಾತ್ರ ಸ್ವತ್ಛತೆ ಕಾಣುತ್ತಿಲ್ಲ.

ಬೆಳಕು ಬೇಕು: ಐತಿಹಾಸಿಕ ಪ್ರವಾಸಿ ಕೇಂದ್ರಗಳಿಲ್ಲಿ ವಿದ್ಯುತ್‌ ಸಮಸ್ಯೆ ಇದೆ. ಇಲ್ಲಿರುವ ಪ್ರವಾಸಿ ತಾಣಗಳಿಗೆ ವಿದ್ಯುತ್‌ ಸೌಕರ್ಯವಿಲ್ಲ. ಹೀಗಾಗಿ ಪ್ರವಾಸಿ ತಾಣಗಳು ಬೆಳಕಿನಿಂದ ವಂಚಿತವಾಗಿವೆ. ಸಂಬಂಧಪಟ್ಟ ಇಲಾಖೆಯವರು ಕೂಡಲೇ ವಿದ್ಯುತ್‌ ಒದಗಿಸಿ ಸೌಂದರ್ಯಿಕರಣಕ್ಕೆ ಒತ್ತು ನೀಡಬೇಕೆಂಬುದು ಪ್ರವಾಸಿಗರ ಆಗ್ರಹ. ಗೈಡ್‌ಗಳಿಗಿಲ್ಲ ಜೀವನಾಧಾರ: ಲಕ್ಷಾಂತರ ಪ್ರವಾಸಿಗರಿಗೆ ಪ್ರವಾಸಿ ಸ್ಥಳಗಳ ಇತಿಹಾಸ ತಿಳಿಸುವ ಗೈಡ್‌ಗಳಿಗೆ ಸರ್ಕಾರದಿಂದ ಯಾವದೇ ರೀತಿಯ ಆದಾಯವಿಲ್ಲ.ಯಾವುದೇ ಸೌಲಭ್ಯಗಳೂ ಇಲ್ಲ. ತರಬೇತಿ ಕೊಟ್ಟಿರುವುದು ಬಿಟ್ಟರೆ ಬೇರ್ಯಾವ ಅನುಕೂಲ ಕಲ್ಪಿಸಿಲ್ಲ.ಯುನಿಫಾರಮ್‌ ಕೂಡಾ ವಿತರಿಸಿಲ್ಲ. ಪ್ರವಾಸಿಗರು ಕೊಡುವ ಬಿಡಿಗಾಸು ಹಣವೇ ಅವರಿಗೆ ಜೀವನಾಧಾರ.ಇತ್ತೀಚಿನ ದಿನಗಳಲ್ಲಿ ತರಬೇತಿ ಕೂಡ ಇಲ್ಲಾ. ಇದರಿಂದ ಗೈಡ್‌ಗಳ ಪರಿಸ್ಥಿತಿ ಅತಂತ್ರವಾಗಿದೆ. ಅವರ ಕುಟುಂಬಗಳ ಜೀವನ ನಿರ್ವಹಣೆ ಕಷ್ಟವಾಗಿದೆ.

 

-ಎಚ್‌.ಎಚ್‌. ಬೇಪಾರಿ

ಟಾಪ್ ನ್ಯೂಸ್

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.