ಅಜವಾನಕ್ಕಿಲ್ಲ ಮಾರುಕಟ್ಟೆ: ರೈತ ಕಂಗಾಲು

ಔಷಧಿ ಗುಣವುಳ್ಳ ಬೆಳೆಗೆ ರಾಜ್ಯದಲ್ಲಿಲ್ಲ ಮಾರಾಟ ಕೇಂದ್ರ,ಪ್ರತಿ ಕ್ವಿಂಟಲ್‌ಗೆ 20-25 ಸಾವಿರ ರೂ. ಬೆಲೆ

Team Udayavani, Feb 17, 2021, 5:54 PM IST

ಅಜವಾನಕ್ಕಿಲ್ಲ ಮಾರುಕಟ್ಟೆ: ರೈತ ಕಂಗಾಲು

ಹುನಗುಂದ: ಔಷಧಿ ಗುಣವುಳ್ಳ ಕಡಿಮೆ ಖರ್ಚಿನಲ್ಲಿ ರೈತರಿಗೆ ಹೆಚ್ಚಿನ ಆದಾಯ ತರುವ ಬೆಳೆ ಅಜವಾನ್‌. ಆದರೆ, ತಾಲೂಕಿನ ನೂರಾರು ಎಕರೆಯಲ್ಲಿ ಬೆಳೆದ ಅಜವಾನ್‌ ಮಾರಾಟಕ್ಕೆ ಸೂಕ್ತ ಸ್ಥಳೀಯ ಮಾರುಕಟ್ಟೆಯ ಸೌಲಭ್ಯವಿಲ್ಲದೇ ರೈತರು ಕಂಗಾಲಾಗಿದ್ದಾರೆ.

ತಾಲೂಕಿನಲ್ಲಿ ಆಂದಾಜು 20-30 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯುವ ಅಜವಾನ್‌ಗೆರಾಜ್ಯದಲ್ಲಿ ಸೂಕ್ತ ಮಾರುಕಟ್ಟೆಗಳೇ ಇಲ್ಲ. ಇಲ್ಲಿಯ ಬೆಳೆಗಾರರು ಹೊರರಾಜ್ಯದ ಮಾರುಕಟ್ಟೆಯನ್ನು ಅವಲಂಬಿಸುವಂತಾಗಿದೆ.

ಧನ್ನೂರ ಗ್ರಾಮ ರೈತ ವಿಜಯಕುಮಾರ ಕೂಡ್ಲಪ್ಪ ಹುದ್ದಾರ ಎಂಬುವರು ಕಳೆದ ನಾಲ್ಕು ವರ್ಷಗಳಿಂದ ಅಜಿವಾನ್‌ ಬೆಳೆ ಬೆಳೆಯುತ್ತಿದ್ದು, ಪ್ರತಿ ವರ್ಷ 10ರಿಂದ 12 ಎಕರೆ ಜಮೀನನಲ್ಲಿ ಸುಮಾರು 15 ರಿಂದ 20 ಕ್ವಿಂಟಲ್‌ ಅಜವಾನ್‌ ಬೆಳೆಯುತ್ತಿದ್ದಾರೆ.

ಉತ್ಕೃಷ್ಟ ಇಳುವರಿ ಬರುತ್ತಿದ್ದರೂ ಸ್ಥಳೀಯ ಮಾರುಕಟ್ಟೆಯ ಸಮಸ್ಯೆ ಇರುವುದರಿಂದ ಹೊರರಾಜ್ಯ ಆಂಧ್ರಪ್ರದೇಶದ ಕರ್ನೂಲ್‌ ಮಾರುಕಟ್ಟೆಗೆತೆಗೆದುಕೊಂಡು ಹೋಗಬೇಕಾದ ಅನಿವಾರ್ಯತೆಸೃಷ್ಟಿಯಾಗಿದೆ. ಇದರಿಂದ ಬೆಳೆದ ಬೆಳೆಯಅರ್ಧದಷ್ಟು ಹಣ ಟ್ರಾನ್ಸ್‌ಪೊàರ್ಟ್‌ಗೆ ಖರ್ಚಾಗಲಿದೆ ಎನ್ನುತ್ತಾರೆ ರೈತರು.

ಅಜವಾನ್‌ ಮುಂಗಾರು ಬೆಳೆ: ಸಾಂಬರ್‌ ಪದಾರ್ಥ ಬೆಳೆಯಾದ ಅಜವಾನ್‌ ಬೆಳೆಯನ್ನು ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಲಾಗುತ್ತದೆ. ಬಿತ್ತನೆಯ ಸಂದರ್ಭದಲ್ಲಿ ಉತ್ತಮ ಮಳೆ ಅವಶ್ಯಕತೆಯಿದೆ.ಬಿತ್ತನೆ ಬಳಿಕ ಮಳೆಯಾಗದಿದ್ದರೂ ಉತ್ತಮ ಇಳುವರಿ ಬರುತ್ತದೆ. ಚಳಿಗಾಲದಲ್ಲಿ ಬೆಳೆ ಕಟಾವಿಗೆಬರುತ್ತದೆ. ಪ್ರತಿ ಎಕರೆಗೆ 3ರಿಂದ 3.5 ಕ್ವಿಂಟಲ್‌ ಇಳುವರಿ ಸಿಗಲಿದೆ. ನಾಲ್ಕು ವರ್ಷದಿಂದ 10 ಎಕರೆ ಜಮೀನನಲ್ಲಿ 20 ಕ್ವಿಂಟಲ್‌ ಅಜವಾನ್‌ ಬೆಳೆದಿದ್ದೇವೆ. 2.50ರಿಂದ 3 ಲಕ್ಷ ಆದಾಯ ಪಡೆದುಕೊಂಡಿದ್ದೇನೆ. ಉಳಿದ ಬೆಳೆಯಲ್ಲಿ ನಷ್ಟ ಅನುಭವಿಸಿದರೂ ಕೂಡಾ ಅಜವಾನ್‌ ಬೆಳೆ ಪ್ರತಿ ವರ್ಷ ಕೈ ಹಿಡಿಯುತ್ತಿದೆ. ಆದರೆ, ಈ ವರ್ಷ 12 ಎಕರೆ ಜಮೀನನಲ್ಲಿ ಬಿತ್ತನೆ ಮಾಡಿದ್ದೆ. ಆದರೆ, ಅತೀಯಾದ ಮಳೆಯಿಂದ ಸ್ವಲ್ಪ ಪ್ರಮಾಣದ ಇಳುವರಿ ಕಡಿಮೆಯಾಗಿದ್ದರೂ ಸಹ 15ರಿಂದ 16 ಕ್ವಿಂಟಲ್‌ ಅಜಿವಾನ್‌ ಇಳುವರಿ ಬಂದಿದೆ ಎನ್ನುತ್ತಾರೆ ರೈತರು.

ಅಜವಾನ್‌ಗೆ ಉತ್ತಮ ಬೆಲೆ: ಅಜವಾನ್‌ನನ್ನು ಔಷಧಿಯ ವಸ್ತು ತಯಾರಿಕೆಯಲ್ಲಿ ಬಳಕೆ ಮಾಡುತ್ತಿರುವುದರಿಂದ ಅಜವಾನ್‌ ಬೆಲೆ ಹೆಚ್ಚಾಗಿದ್ದು, ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್‌ಗೆ 20ರಿಂದ 25ಸಾವಿರ ರೂ.ಗೆ ಮಾರಾಟವಾಗಲಿದೆ.

ಮಾರುಕಟ್ಟೆಯ ಸಮಸ್ಯೆ: ಅಜವಾನ್‌ ಬೆಳೆಯನ್ನು ತಾಲೂಕಿನಲ್ಲಿಯೇ ಮೊದಲಿಗೆ ಧನ್ನೂರ ಗ್ರಾಮದ ರೈತ ವಿಜಯಕುಮಾರ ಹುದ್ದಾರ ಬೆಳೆದಿದ್ದು ವಿಶೇಷ. ಅವರು ಅಜವಾನ್‌ನನ್ನು ಹೆಚ್ಚಿನ ಇಳುವರಿಯಲ್ಲಿ ಬೆಳೆದಿರುವುದನ್ನು ಕಂಡು ತಾಲೂಕಿನ ಹಿರೇಬಾದವಾಡಗಿ,ಬೇವಿನಮಟ್ಟಿ, ಚಿಕ್ಕಬಾದವಾಡಗಿ, ಚಿತ್ತವಾಡಗಿ ಸೇರಿದಂತೆ ತಾಲೂಕಿನ ವಿವಿಧ ಕಡೆಗಳಲ್ಲಿ ನೂರಾರು ಎಕರೆಯಲ್ಲಿ ಬೆಳೆಯುತ್ತಾರೆ. ಆದರೆ, ರಾಜ್ಯದಲ್ಲಿಯೇ ಮಾರುಕಟ್ಟೆಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ. ಅಜವಾನ್‌ ಮಾರುಕಟ್ಟೆ ಸ್ಥಾಪಿಸುವಂತೆ ರೈತರ ಒತ್ತಾಯವಾಗಿದೆ.

ಅಜವಾನ್‌ ಬೆಳೆ ಅತಿ ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಇಳುವರಿ ಪಡೆಯುವ ಬೆಳೆ. ಕರ್ನಾಟಕದ ಹುಬ್ಬಳ್ಳಿ ಮತ್ತು ಬೆಂಗಳೂರನಲ್ಲೂ ಅಜವಾನ್‌ ಮಾರುಕಟ್ಟೆಯಿಲ್ಲ. ಆಂಧ್ರದ ಕರ್ನೂಲ ಮಾರುಕಟ್ಟೆಗೆ ತೆಗೆದುಕೊಂಡು ಹೋಗಬೇಕಾದ ಅನಿವಾರ್ಯತೆ ಇದೆ. -ವಿಜಯಕುಮಾರ ಕೆ ಹುದ್ದಾರ್‌, ಧನ್ನೂರದ ಅಜವಾನ್‌ ಬೆಳೆಗಾರ

ಅಜವಾನ್‌ ಬೆಳೆಗೆ ಬೆಳಗಾವಿ ವಿಭಾಗದಲ್ಲೂ ಮಾರುಕಟ್ಟೆಯ ವ್ಯವಸ್ಥೆಯಿಲ್ಲ. ಈಕುರಿತು ಸರ್ಕಾರದ ಗಮನಕ್ಕೆ ತರಬೇಕು. ಈ ಕುರಿತು ಕೃಷಿ ಮಾರಾಟ ಮಂಡಳಿಯೊಂದಿಗೆ ಮಾತನಾಡುತ್ತೇನೆ. -ನಜೀರ ಅಹ್ಮದ್‌ ಲಕ್ಕುಂಡಿ, ಜಿಲ್ಲಾ ವ್ಯವಸ್ಥಾಪಕರು ಎಪಿಎಂಸಿ ಬಾಗಲಕೋಟೆ.

 

-ಮಲ್ಲಿಕಾರ್ಜುನ ಎಂ ಬಂಡರಗಲ್ಲ

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

Fetoside

Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

4-

Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.