Rabkavi Banhatti ಪೊಲೀಸ್ ಠಾಣೆ ಸ್ಥಾಪನೆಗೆ ಹೋರಾಟದ ಕೊರತೆ

1973ರಲ್ಲಿ ಠಾಣೆ ನಿರ್ಮಾಣಕ್ಕೆ ಆಗ್ರಹ; ಸ್ಪಂದಿಸದ ಇಲಾಖೆ, ಸರ್ಕಾರ

Team Udayavani, Jun 1, 2023, 8:06 PM IST

1-sdsadsad

ರಬಕವಿ-ಬನಹಟ್ಟಿ: ರಬಕವಿ-ಬನಹಟ್ಟಿ ಅವಳಿ ನಗರಗಳು ಒಂದೇ ನಗರಸಭೆಯ ವ್ಯಾಪ್ತಿಯಲ್ಲಿ ಬರುತ್ತವೆ. ಅದೇ ರೀತಿಯಾಗಿ ಸರ್ಕಾರ ಕೂಡಾ ರಬಕವಿ-ಬನಹಟ್ಟಿ ನಗರಗಳನ್ನು ಒಂದೇ ಎಂದು ಪರಿಗಣಿಸಿ ತಾಲ್ಲೂಕು ಎಂದು ಘೋಷಣೆ ಮಾಡಿವೆ. ತೇರದಾಳ ಕೂಡಾ ಪ್ರತ್ಯೇಕ ತಾಲ್ಲೂಕು ಆಗಿ ಘೋಷಣೆಯಾಗಿದೆ. ಆದರೆ ರಬಕವಿಯ ಜನರು ಪೊಲೀಸ್ ಠಾಣೆಯ ಕಾರ್ಯಗಳಿಗೆ ಒಂದೇ ಕಿ.ಮೀ ದೂರದಲ್ಲಿರುವ ಬನಹಟ್ಟಿಯ ಠಾಣೆಗೆ ಬರದೆ, ೧೦ ಕಿ. ಮೀ. ತೇರದಾಳ ಪೊಲೀಸ್ ಠಾಣೆಗೆ ಹೋಗಬೇಕಾದ ಅನಿವಾರ್ಯತೆ ಉಂಟಾಗಿದೆ.

ನಾಲ್ಕುವರೆ ದಶಕಗಳ ಹಿಂದಿನ ಬೇಡಿಕೆಯನ್ನು ಈಡೇರಿಸುವಲ್ಲಿ ಸರ್ಕಾರ ಮತ್ತು ಇಲಾಖೆಗಳು ಗಮನ ನೀಡುತ್ತಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ರಬಕವಿಯ ಜನರಲ್ಲಿ ಪೊಲೀಸ್ ಠಾಣೆಯ ಸ್ಥಾಪನೆಗೆ ಹೋರಾಟದ ಕೊರತೆಯಾಗಿದೆ. ಈ ಭಾಗಕ್ಕೆ ಬರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ, ಸಚಿವರಿಗೆ ಮತ್ತು ಶಾಸಕರಿಗೆ ಮನವಿ ಪತ್ರಗಳನ್ನು ನೀಡುವ ಕಾರ್ಯ ನಡೆದಿದೆ. ಆದರೆ ಠಾಣೆಯ ಸ್ಥಾಪನೆಗೆ ನಿರಂತರದ ಹೋರಾಟ ನಡೆಯದೆ ಇರುವುದು ವಿಳಂಬಕ್ಕೆ ಕಾರಣವಾಗಿದೆ.

ರಬಕವಿ ಬನಹಟ್ಟಿಯ ಪೊಲೀಸ್ ಠಾಣೆಯ ಮಧ್ಯದಲ್ಲಿ ಕೇವಲ ಒಂದು ಕಿ.ಮೀ ಅಂತರವಿದೆ. ಆದರೆ ರಬಕವಿಯ ಜನರು ಏಳೆಂಟು ಕಿ.ಮೀ ದೂರದ ತೇರದಾಳ ಪಟ್ಟಣಕ್ಕೆ ಹೋಗುವ ಅನಿವಾರ್ಯತೆ ಉಂಟಾಗಿದೆ.

ರಬಕವಿಯಲ್ಲಿ ಠಾಣೆಯ ನಿರ್ಮಾಣಕ್ಕಾಗಿ ಇಲ್ಲಿನ ದುರಡಿ ಸಹೋದರರು ಹೊಸ ಬಸ್ ನಿಲ್ದಾಣದ ಮಾರ್ಗದಲ್ಲಿ ಒಂದು ಎಕರೆಗಿಂತ ಹೆಚ್ಚಿನ ಭೂಪ್ರದೇಶವನ್ನು ದಾನವಾಗಿ ನೀಡಿದ್ದಾರೆ. ಸದ್ಯ ಇಲ್ಲಿ ರಬಕವಿ ಔಟ್ ಪೋಸ್ಟ್ ಸ್ಥಳ ಎಂದು ನಾಮಫಲಕ ಮಾತ್ರವಿದೆ. ಈ ಪ್ರದೇಶ ಗಿಡಗಂಟಿಗಳಿಂದ ತುಂಬಿದೆ. ಇದು ನಗರದ ಮಧ್ಯ ಭಾಗದಲ್ಲಿದೆ.

ಇಲ್ಲಿಯ ಜನರು ಚಿಕ್ಕ ಪುಟ್ಟ ಕಾರ್ಯಗಳು, ಮೊಬೈಲ್ ಕಳವು, ಪಾಸ್ ಪೋರ್ಟ್ ಅರ್ಜಿ ಪರಿಶೀಲನೆ, ದಾಖಲೆಗಳ ಕಳುವಿನ ಕುರಿತು ದೂರು ಸೇರಿದಂತೆ ಪ್ರತಿಯೊಂದಕ್ಕೂ ತೇರದಾಳ ಪಟ್ಟಣಕ್ಕೆ ಹೋಗಬೇಕಾಗಿದೆ. ಇದರಿಂದಾಗಿ ಈ ಭಾಗದ ನೇಕಾರರಿಗೆ, ನದಿ ತೀರದ ರೈತರಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ, ವ್ಯಾಪಾರಸ್ಥರಿಗೆ ಮತ್ತು ಮಹಿಳೆಯರಿಗೆ ಬಹಳಷ್ಟು ತೊಂದರೆಯಾಗಿದೆ. ತೇರದಾಳ ಪೊಲೀಸ್ ಠಾಣೆಯಲ್ಲಿ ಸಂಬಂಧಪಟ್ಟ ಸಿಬ್ಬಂದಿ ಇರದೆ ಇದ್ದರೆ ಮತ್ತೆ ಮರು ದಿವಸ ಹೋಗಬೇಕಾಗುತ್ತದೆ. ಇದು ಇಲ್ಲಿಯ ಜನರಿಗೆ ಆರ್ಥಿಕವಾಗಿ ಹೊರೆಯಾಗಿದೆ. ಇದರಿಂದಾಗಿ ಬಹುತೇಕ ಪ್ರಕರಣಗಳನ್ನು ದಾಖಲಿಸಲು ಇಲ್ಲಿಯ ಜನರು ತೇರದಾಳಕ್ಕೆ ಹೋಗುವುದೇ ಇಲ್ಲ. ರಬಕವಿ ನಗರದಲ್ಲಿ ಔಟ್ ಪೊಸ್ಟ್ ಠಾಣೆ ಇದ್ದರೂ ಯಾವುದೆ ಪ್ರಯೋಜನವಿಲ್ಲವಾಗಿದೆ ಎನ್ನುತ್ತಾರೆ ರಬಕವಿ-ಬನಹಟ್ಟಿ ನಗರಸಭೆ ಸದಸ್ಯ ಬಸವರಾಜ ಗುಡೋಡಗಿ

ರಬಕವಿಯ ಜನರು ಮನೆಯಂಗಳದಲ್ಲಿರುವ ಠಾಣೆಯ ಸೌಲಭ್ಯ ಪಡೆದುಕೊಳ್ಳದೆ ದೂರದ ತೇರದಾಳಕ್ಕೆ ಅಲೆಡಾಡುವಂತಾಗಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟಅಧಿಕಾರಿಗಳು ಇಲಾಖೆಯ ಮೇಲಾಧಿಕಾರಿಗಳ ಗಮನ ಸೆಳೆಯುವುದು ಒಂದು ಕಡೆಯಾದರೆ, ಪ್ರತ್ಯೇಕವಾದ ಠಾಣೆಗಾಗಿ ನಿರಂತರ ಮತ್ತು ಗಟ್ಟಿ ಹೋರಾಟದ ಅವಶ್ಯಕತೆ ಇದೆ. ಹೋರಾಟದ ಕೊರತೆಯಿಂದಾಗಿ ಠಾಣೆ ಸ್ಥಾಪನೆಯಾಗುತ್ತಿಲ್ಲ. ಈ ನಿಟ್ಟಿನಲ್ಲಿ ಸ್ಥಳೀಯ ಮುಖಂಡರು ಗಮನ ನೀಡಬೇಕಾಗಿದೆ.

ರಬಕವಿ ಬನಹಟ್ಟಿ ತಾಲ್ಲೂಕು ವ್ಯಾಪ್ತಿ ವಿಶಾಲವಾಗಿದೆ. ಆದ್ದರಿಂದ ರಬಕವಿಯಲ್ಲಿ ಗ್ರಾಮೀಣ ಪೊಲೀಸ್ ಠಾಣೆ ಸ್ಥಾಪನೆಗಾದರೂ ಕ್ರಮ ತೆಗೆದುಕೊಳ್ಳಬೇಕಾಗಿದೆ. ರಬಕವಿಯಲ್ಲಿ ಠಾಣೆ ನಿರ್ಮಾಣ ಮಾಡುವುದು ಸಾಧ್ಯವಾಗದೆ ಇದ್ದರೆ, ರಬಕವಿಯ ವ್ಯಾಪ್ತಿಯನ್ನು ಬನಹಟ್ಟಿ ಪೊಲೀಸ್ ಠಾಣೆಗೆ ಸೇರಿಸುವ ನಿಟ್ಟಿನಲ್ಲಿ ಗಮನ ನೀಡಬೇಕು. ರಬಕವಿಯಲ್ಲಿ ಠಾಣೆಯ ನಿರ್ಮಾಣದಿಂದ ಇಲ್ಲಿಯ ಜನರಿಗೆ ಬಹಳಷ್ಟು ಅನುಕೂಲವಾಗಲಿದೆ. ತೇರದಾಳ ಠಾಣೆಯು ಬನಹಟ್ಟಿ ನ್ಯಾಯಾಲಯದ ವ್ಯಾಪ್ತಿಯಲ್ಲಿ ಬರುವುದರಿಂದ ವಕೀಲರಿಗೂ ಮತ್ತು ಕಕ್ಷಿದಾರರಿಗೂ ಅನುಕೂಲವಾಗಲಿದೆ.
-ವಿಜಯ ಹೂಗಾರ, ವಕೀಲರು ರಬಕವಿ

ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.