ಕೆರೆ ಅಭಿವೃದ್ಧಿ ಯೋಜನೆಯ ಪರಿ; ಪ್ರಧಾನಿ ಮೆಚ್ಚಿದ ಬಿಲ್‌ಕೆರೂರ ಸರೋವರ!

ಬಾಗಲಕೋಟೆ ಮತಕ್ಷೇತ್ರದದಲ್ಲಿ ಸಾಕಷ್ಟು ಕೆರೆ ಅಭಿವೃದ್ಧಿ ಮಾಡಲಾಗುತ್ತಿದೆ.

Team Udayavani, Aug 29, 2022, 5:39 PM IST

ಕೆರೆ ಅಭಿವೃದ್ಧಿ ಯೋಜನೆಯ ಪರಿ; ಪ್ರಧಾನಿ ಮೆಚ್ಚಿದ ಬಿಲ್‌ಕೆರೂರ ಸರೋವರ!

ಬಾಗಲಕೋಟೆ: ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷವಾದ ಹಿನ್ನೆಲೆಯಲ್ಲಿ ಜಿಲ್ಲೆಯ 75 ಕೆರೆಗಳ ಸಮಗ್ರ ಅಭಿವೃದ್ಧಿಗೆ ಜಿಲ್ಲಾ ಪಂಚಾಯಿತಿ ಕಾರ್ಯ ಯೋಜನೆ ಸಾಧಿಸಿದ್ದು, ಕೇಂದ್ರದ ಮಹತ್ವಾಕಾಂಕ್ಷಿ ಅಮೃತ ಸರೋವರ ಯೋಜನೆಯಡಿ ಅಭಿವೃದ್ಧಿಪಡಿಸಿದ ತಾಲೂಕಿನ ಬಿಲ್‌ಕೆರೂರ ಕೆರೆಯ ಕಂಡು ಸ್ವತಃ ಪ್ರಧಾನಿ ನರೇಂದ್ರ ಮೋದಿ ಮೆಚ್ಚಿಕೊಂಡಿದ್ದಾರೆ.

ಹೌದು, ಬಾಗಲಕೋಟೆ ತಾಲೂಕಿನ ಬಿಲ್‌ ಕೆರೂರ ಗ್ರಾಮದಲ್ಲಿ ಪ್ರಧಾನಮಂತ್ರಿ ಅಮೃತ ಸರೋವರ ಯೋಜನೆ ಅಡಿ ಕೆರೆ ಅಭಿವೃದ್ಧಿಪಡಿಸಲಾಗಿದೆ. ಗ್ರಾಮದ ಕೆರೆಯನ್ನು ಆಕರ್ಷಕವಾಗಿ ಪುನರುಜ್ಜೀವನಗೊಳಿಸಲಾಗಿದೆ. ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನಿರ್ಮಾಣ ಮಾಡಿರುವ ಈ ಕೆರೆಯು ರಾಜ್ಯದಲ್ಲಿಯೇ ಮಾದರಿಯಾಗಿದೆ. ಹೀಗಾಗಿ ಕೆರೆಯ ಬಗ್ಗೆ ರವಿವಾರದ ಮನ್‌ ಕೀ ಬಾತ್‌ನಲ್ಲಿ ಪ್ರಧಾನಿ ಮೋದಿ ಪ್ರಸ್ತಾಪಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಾಗಲಕೋಟೆ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬಿಲ್‌ ಕೆರೂರು ಗ್ರಾಮದಲ್ಲಿ ಪ್ರಧಾನ ಮಂತ್ರಿ ಅಮೃತ ಸರೋವರ ಯೋಜನೆ ಅಡಿ ಸುಮಾರು 28 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಈ ಕೆರೆಯು ಇಡೀ ರಾಜ್ಯ ಹಾಗೂ ದೇಶದಲ್ಲಿಯೇ ಆಕರ್ಷಣೆಯ ಕೇಂದ್ರವಾಗಿದೆ. ಮೊದಲು ಈ ಸ್ಥಳದಲ್ಲಿ ನೀರು ಸಂಗ್ರಹವಾಗಿ ಕೆಸರುಮಯವಾಗಿತ್ತು. ಈ ಹಿನ್ನೆಲೆ ಗ್ರಾಮ ಪಂಚಾಯಿತಿ ವತಿಯಿಂದ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಅಭಿವೃದ್ಧಿಪಡಿಸಿ, ಆಗಸ್ಟ್‌ 15ರಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಸ್ವತಃ ಭೇಟಿ ನೀಡಿ, ಅಭಿವೃದ್ಧಿಗೊಂಡ ಕೆರೆಯನ್ನು ಲೋಕಾರ್ಪಣೆಗೊಳಿಸಿ, ಅವರೂ ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ಈ ಕಾರ್ಯ ಶ್ಲಾಘಿಸಿದ್ದನ್ನು ಹರ್ಷ ವ್ಯಕ್ತಪಡಿಸಿದ ಶಾಸಕ ಡಾ|ವೀರಣ್ಣ ಚರಂತಿಮಠ, ನೀರು ನಿಲ್ಲುವುದಕ್ಕೆ ಸುಮಾರು 6 ರಿಂದ 7 ಅಡಿ ಉದ್ದ ಹಾಗೂ ಸುಮಾರು 100 ಅಡಿಗೂ ಅಗಲವಾಗಿ ಅಗೆಯುವ ಕಾರ್ಯವನ್ನು ಉದ್ಯೋಗ ಖಾತ್ರಿ ಯೋಜನೆ ಅಡಿ ಮಾಡಿಸಲಾಗಿದೆ. ಇದರ ಜೊತೆಗೆ ಕೆರೆಯ ಸುತ್ತಲೂ ಕಲ್ಲಿನಿಂದ ತಡೆಗೋಡೆ ನಿರ್ಮಾಣ ಮಾಡಲಾಗಿದೆ. ನಂತರ ಸುತ್ತಲೂ ಕಬ್ಬಿಣದ ಕಾಂಪೌಂಡ್‌ ನಿರ್ಮಾಣ ಮಾಡಿದ್ದು, ಸುಂದರವಾಗಿ ಕೆರೆ ಕಂಗೊಳಿಸುತ್ತಿದೆ ಎಂದು ತಿಳಿಸಿದ್ದಾರೆ.

ಮೂರು ಕೆರೆ ನಿರ್ಮಾಣ: ಮಳೆ ಬಂದಾಗ ಬೆಟ್ಟದಿಂದ ನೀರು ಬಂದು ಈ ಕೆರೆಗೆ ಸಂಗ್ರಹವಾಗುತ್ತದೆ. ಇದೇ ನೀರು ಜಾನುವಾರುಗಳಿಗೆ ಹಾಗೂ ಅಕ್ಕಪಕ್ಕದ ಜಮೀನುಗಳಿಗೆ ಬಳಕೆ ಆಗುತ್ತಿದ್ದು, ಸ್ಥಳೀಯ ರೈತರಿಗೆ ಅನುಕೂಲವಾಗುತ್ತಿದೆ. ಈ ಕೆರೆಯಿಂದ ಅಂತರ್‌ ಜಲಮಟ್ಟ ಹೆಚ್ಚಾಗುತ್ತಿದ್ದು, ಸ್ಥಳೀಯರು ಸಹ ಹರ್ಷ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿ ಅಮೃತ ಯೋಜನೆ ಅಡಿ, ಬಾಗಲಕೋಟೆ ತಾಲೂಕಿನಲ್ಲಿ ಮೂರು ಕೆರೆ ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿದರು.

ಬಾಗಲಕೋಟೆ ಮತಕ್ಷೇತ್ರದದಲ್ಲಿ ಸಾಕಷ್ಟು ಕೆರೆ ಅಭಿವೃದ್ಧಿ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ ಮೊದಲು 20 ಲಕ್ಷ ರೂಪಾಯಿಗಳ ಅನುದಾನ ನಂತರ, 8 ಲಕ್ಷ ರೂಪಾಯಿಗಳಿಂದ ಸುತ್ತಲೂ ಕಾಂಪೌಂಡ್‌ ಹಾಗೂ ಉದ್ಯಾನವನ ನಿರ್ಮಾಣ ಮಾಡಲಾಗುತ್ತಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಲ್ಮೇಶಗೌಡ ಗೌಡರ ತಿಳಿಸಿದರು.

ಗ್ರಾಮಸ್ಥರಿಂದ ಕೆರೆ ಅಭಿವೃದ್ಧಿ: ಕೆರೆಯ ಪಕ್ಕದಲ್ಲೇ ಹಳೆಯ ಭಾವಿ ಇದ್ದು, ಕೆರೆಯಿಂದ ಇದರಲ್ಲಿಯೂ ಸಹ ಜಲಮಟ್ಟ ಹೆಚ್ಚಾಗಿದೆ. ಇದರಿಂದ ಇಡೀ ಪ್ರದೇಶ ಸುಂದರ ವನದಂತೆ ಕಾಣುತ್ತಿದೆ ಎಂದು ಗ್ರಾಮಸ್ಥ ಬಿ.ಎಲ್‌. ಪಾಟೀಲ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಮೆಚ್ಚುಗೆ
ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ದಿನದಂದು ಸಚಿವ ಸಿ.ಸಿ. ಪಾಟೀಲ, ಸ್ಥಳೀಯ ಶಾಸಕ ವೀರಣ್ಣ ಚರಂತಿಮಠ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ್‌ ಸೇರಿದಂತೆ ಇತರ ಗಣ್ಯರು ಈ ಕೆರೆಗೆ ಬಾಗಿನ ಅರ್ಪಿಸುವ ಮೂಲಕ  ಲೋಕಾರ್ಪಣೆ ಮಾಡಿದ್ದರು. ಇಂತಹ ಕೆರೆಯು ಇಡೀ ರಾಜ್ಯದಲ್ಲಿ ಮಾದರಿಯಾಗಿದ್ದರಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಮನ್‌ ಕೀ ಬಾತ್‌ ನಲ್ಲಿ ಬಿಲ್‌ ಕೆರೂರು ಗ್ರಾಮದಲ್ಲಿ ಅಭಿವೃದ್ಧಿ ಮಾಡಿರುವ ಈ ಕೆರೆಯನ್ನು ಪ್ರಸ್ತಾವನೆ ಮಾಡಿ, ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಕಾರ್ಯ ಶ್ಲಾಘಿಸಿರುವುದು ಜಿಲ್ಲೆಯ ಹೆಮ್ಮೆ ಎಂದು ಬಣ್ಣಿಸಲಾಗಿದೆ.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.