12 ಗಂಟೆ ಸತತ ಮಳೆ: 25 ವರ್ಷಗಳ ಬಳಿಕ ತುಂಬಿ ಹರಿದ ಹಳ್ಳ

ಮತ್ತೆ ಪ್ರವಾಹ ಭೀತಿ: ಆಸಂಗಿ-ರಬಕವಿ ಸೇತುವೆ ಕುಸಿತ

Team Udayavani, Oct 21, 2019, 11:04 AM IST

kere-25

ಬನಹಟ್ಟಿ (ಬಾಗಲಕೋಟೆ) : ರಬಕವಿ ಬನಹಟ್ಟಿ ಅವಳಿ ನಗರದಾದ್ಯಂತ 12 ಗಂಟೆಗಳ ಕಾಲ ಭಾರಿ ಮಳೆ ಸುರಿದಿದ್ದು, ಸುಮಾರು 25 ವರ್ಷಗಳ ಹಿಂದೆ ತುಂಬಿ ಹರೆದಿದ್ದ ಹಳ್ಳ ಈಗ ಮತ್ತೊಮ್ಮೆ ತುಂಬಿ ಹರಿಯುತ್ತಿದೆ.

ರಬಕವಿ ಸಮೀಪದ ಹೋಲಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದೆ. ಕಳೆದ 2 ತಿಂಗಳ ಹಿಂದೆ ಕೃಷ್ಣಾ ಪ್ರವಾಹದಿಂದ ಬೆಳೆ ಹಾನಿ ಸಂಬವಿಸಿತ್ತು. ಈಗ ಮತ್ತೋಮ್ಮೆ ರೈತರ ಬೆಳೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.

ರಬಕವಿ-ಆಸಂಗಿ ಸಂಪರ್ಕ ಸೇತುವೆ ಕುಸಿದಿದ್ದು ನೀರು ತುಂಬಿ ಹರಿಯುತ್ತಿದೆ. ಅಲ್ಲದೇ ಸಮೀಪದ ಹೊಲಗಳಿಗೆ ತೆರಳುವ ಸಂಪರ್ಕ ರಸ್ತೆಗಳು ಹಳ್ಳಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಬಂದ್ ಆಗಿವೆ.

ರಬಕವಿ-ಬನಹಟ್ಟಿ ನಗರಗಳಲ್ಲಿ ಕಳೆದ ರವಿವಾರ ರಾತ್ರಿಯಿಂದ ಸೋಮವಾರ ಮುಂಜಾನೆವರೆಗೆ 12 ಗಂಟೆಗಳ ಕಾಲ ಧಾರಾಕಾರ ಮಳೆ ಸುರಿದಿದೆ.

ರಾತ್ರಿಯಿಡೀ ಅಪಾರ ಪ್ರಮಾಣದ ಮಳೆ ಸುರದಿದೆ.  ಇದು ಕಳೆದ ಹಲವು ದಶಕಗಳ ನಂತರ ಸುರಿದ ಭಾರಿ ಮಳೆಯಾಗಿದೆ. ಮಳೆಯ ಪರಿಣಾಮ ಸಮೀಪದ ಹಳ್ಳದ ಪ್ರದೇಶಗಳು ತುಂಬಿ ಹರಿಯುತ್ತಿವೆ. ಬನಹಟ್ಟಿ ಹಳ್ಳಕ್ಕೆ ಕಳೆದ 25 ವರ್ಷಗಳಿಂದ ಇಷ್ಟು ನೀರು ಹರಿದು ಬಂದಿಲ್ಲ. ಈಗ ಒಮ್ಮೇಲೆ ನೀರು ಹರಿದು ಬರುತ್ತಿರುವುದನ್ನು ನೋಡಲು ಜನ ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಘಟಪ್ರಭಾ ಎಡದಂಡೆ ಕಾಲುವೆ ಮೂಲಕ ಅಪಾರ ಪ್ರಮಾಣದ ನೀರನ್ನು ಹರಿದು ಬೀಡುತ್ತಿರುವುದರಿಂದ ಹಳ್ಳಗಳು ತುಂಬಿ ಹರಿಯುತ್ತಿದೆ.

ಕಬ್ಬು, ಈರುಳ್ಳಿ, ಮೆಕ್ಕೆಜೋಳ, ಅರಿಷಿಣ, ತರಕಾರಿ, ಹೂ, ದನಕರಗಳ ಮೇವುಗಳು  ಸೇರಿದಂತೆ ಇತರ ಬೆಳೆಗಳು ನಾಶವಾಗಿದ್ದು, ರೈತರು ಸಂಕಷ್ಟಕ್ಕೊಳಗಾಗಿದ್ದಾರೆ. ರೈತರು ಬೆಳೆದ ಬೆಳೆ ಸಂಪೂರ್ಣ ನಾಶವಾಗಿವೆ. ಬೆಳೆಗಳು ಜಲಾವೃತಗೊಂಡು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಸಾಲ ಮಾಡಿ ಬೆಳೆದ ಬೆಳೆ ನೀರು ಪಾಲಾಗಿದ್ದರಿಂದ ರೈತರಿಗೆ ದಿಕ್ಕೇ ತೋಚದಂತಾಗಿದ್ದು, ಸರಕಾರ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.