ಕೆರೆ ತುಂಬುವ ಯೋಜನೆ ಸಫಲ-ಜನ ನಿರಾಳ

ಇಲ್ಲ ಕುಡಿಯುವ ನೀರಿನ ಬವಣೆ

Team Udayavani, Apr 26, 2022, 3:04 PM IST

17

ಕೆರೂರ: ಪ್ರತಿ ಮಂಗಳವಾರ ಜರುಗುವ ಕುರಿ-ಜಾನುವಾರು ಸಂತೆಗೆ ಪ್ರಸಿದ್ಧಿ ಪಡೆದ ಪಟ್ಟಣ ಬೇಸಿಗೆಯಲ್ಲಿ ನಾಗರಿಕರು ಕುಡಿಯುವ ನೀರಿಗಾಗಿ ತತ್ವಾರ ಪಡುವ ಪ್ರಸಂಗಗಳಿಂದ ಅಪಖ್ಯಾತಿಗೆ ಸದಾ ಹೆಸರಾಗಿತ್ತು ಎಂದರೆ ಉತ್ಪ್ರೇಕ್ಷೆಯಲ್ಲ.

ಹೌದು. ಕಳೆದ ಎರಡ್ಮೂರು ವರ್ಷಗಳ ಹಿಂದೆ ಕಡು ಬೇಸಿಗೆಯಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಸುವ ಸಲುವಾಗಿ ಪಟ್ಟಣ ಪಂಚಾಯಿತಿ ಆವರಣ ಪ್ರತಿನಿತ್ಯ ಸಾರ್ವಜನಿಕರ ಪ್ರತಿಭಟನೆ, ಹೋರಾಟದ ತಾಣವಾಗಿ ಮಾರ್ಪಡುತ್ತಿದ್ದುದು ಸಾಮಾನ್ಯವಾಗಿತ್ತು.

ಕಳೆದ ಎರಡು ವರ್ಷಗಳಿಂದ ಬಿರು ಬೇಸಿಗೆಯಲ್ಲೂ ಪಟ್ಟಣದ ನಿವಾಸಿಗಳನ್ನು ಕುಡಿಯುವ ನೀರಿನ ಬವಣೆ ತಟ್ಟಿಲ್ಲ. ಕಾರಣ ಜಿಲ್ಲೆಯ ರಾಜಕೀಯ ನಾಯಕರ ದೂರದೃಷ್ಟಿ ಹಾಗೂ ಕುಡಿಯುವ ನೀರಿನ ಅಗತ್ಯತೆ ಪೂರೈಕೆಗೆ ಸರಕಾರ ಜಾರಿಗೊಳಿಸಿದ ಕೆರೆ ತುಂಬುವ ಯೋಜನೆಯ ಫಲಶೃತಿ ಇಂದು 20 ಸಾವಿರಕ್ಕೂ ಹೆಚ್ಚು ಜನಸಂಖ್ಯೆಯು ಬೇಸಿಗೆಯಲ್ಲೂ ಯಾವುದೇ ಸಮಸ್ಯೆ ಇಲ್ಲದೇ ನಿರಾಳ ಆಗಿರುವುದಕ್ಕೆ ಸಾಕ್ಷಿಯಾಗಿದೆ.

ಹೆರಕಲ್‌ ಯೋಜನೆ ಸಹಕಾರಿ: ನೀರಾವರಿ ಸೌಲಭ್ಯವೇ ಮರೀಚಿಕೆಯಾಗಿದ್ದ ಬಾದಾಮಿ ತಾಲೂಕಿನ ಬೀಳಗಿ ಮತಕ್ಷೇತ್ರದ ಸುಮಾರು 30 ಕ್ಕೂ ಹೆಚ್ಚು ಹಳ್ಳಿಗಳ ಒಣ ಬೇಸಾಯ ಜಮೀನುಗಳಿಗೆ ಕಾಲುವೆಗಳ ಮೂಲಕ ನೀರುಣಿಸುವ ಹೆರಕಲ್‌ ಏತ ನೀರಾವರಿ ಯೋಜನೆಯೊಂದಿಗೆ ತಾಲೂಕಿನ 8 ಪ್ರಮುಖ ಕೆರೆಗಳನ್ನು ತುಂಬುವ (ಪ್ರವಾಹ ಕಾಲಕ್ಕೆ) ಉಪಯುಕ್ತ ಯೋಜನೆಯಿಂದ ಎಲ್ಲೆಡೆ ಸಾಕಷ್ಟು ಅನುಕೂಲವಾಗಿದೆ.

ಘಟಪ್ರಭೆ ನೀರು: ಕಲಾದಗಿ ಗ್ರಾಮದ ಬಳಿಯ ಘಟಪ್ರಭಾ ನದಿಯಿಂದ ಕೊಳವೆ ಮಾರ್ಗದ ಮೂಲಕ ಈ 8 ಕೆರೆಗಳನ್ನು ತುಂಬುವ ಯೋಜನೆ ಚಾಲನೆ ಪಡೆಯಿತು.ಪ್ರಾರಂಭದಲ್ಲಿ ಕೊಳವೆ ಮಾರ್ಗದ ಅಲ್ಲಲ್ಲಿ ಪೈಪ್‌ಗ್ಳು ಒಡೆದು ಪೂರೈಕೆಯಲ್ಲಿ ವ್ಯತ್ಯಯ ಉಂಟಾದರೂ ಸಹ, ಅಂದಿನ ಶಾಸಕ ಜೆ.ಟಿ. ಪಾಟೀಲ ಹಾಗೂ ಅಧಿಕಾರಿಗಳು ಮತ್ತೆ ಅವುಗಳನ್ನು ಸರಿಪಡಿಸಿ ಬೇಸಿಗೆಯಲ್ಲಿ ಬರಿದಾಗುವ ಕೆರೆಗಳು ತುಂಬಿಸುವಲ್ಲಿ ಮುಂದಾದರು. ಇದರಿಂದ ಕಲಾದಗಿ ಬಳಿಯ ಕಳಸಕೊಪ್ಪ, ಬಾದಾಮಿ ತಾಲೂಕಿನ ಕೆರೂರ, ಕಟಗೇರಿ, ಜಮ್ಮನ ಕಟ್ಟಿ, ಕಲಬಂದಕೇರಿ, ಹೂಲಗೇರಿ ಸೇರಿದಂತೆ ಪ್ರಮುಖ ಕೆರೆಗಳಲ್ಲಿ ಬೇಸಿಗೆಯಲ್ಲೂ ನೀರು ಸಂಗ್ರಹವಿದೆ.ಇದರಿಂದ ಪಟ್ಟಣ ಹಾಗೂ ಗ್ರಾಮಗಳಲ್ಲಿ ಕಡು ಬೇಸಿಗೆಯಲ್ಲೂ ಕುಡಿಯುವ ನೀರಿಗಾಗಿ ಜನ, ಜಾನುವಾರು ಹಾಗೂ ಪಕ್ಷಿ ಸಂಕುಲಕ್ಕೆ ಯಾವುದೇ ತೊಂದರೆ ಎದುರಾಗಿಲ್ಲ.

ಸಫಲವಾಗದ ಜೆಜೆಎಂ ಕಾಮಗಾರಿ: ಬಾದಾಮಿ ತಾಲ್ಲೂಕಿನ ಬೀಳಗಿ ಮತಕ್ಷೇತ್ರದ ಬಹುತೇಕ ಎಲ್ಲ ಗ್ರಾಮಗಳಿಗೂ ಜಾರಿಗೊಳಿಸಿರುವ ಜಲ ಜೀವನ ಮಿಷನ್‌ ಯೋಜನೆ ಇನ್ನೂ ಕುಂಟುತ್ತಾ ಸಾಗಿದೆ ಎನ್ನುವುದಕ್ಕೆ ಅನೇಕ ನಿದರ್ಶನಗಳುಂಟು. ಯಂಕಂಚಿ, ಮಣಿನಾಗರ ಸೇರಿ ಹಲವಾರು ಗ್ರಾಮಗಳಲ್ಲಿ ಈ ಜೆಜೆಎಂ ಕಾಮಗಾರಿ ಯಶಸ್ವಿಗೊಂಡಿಲ್ಲ. ಪೈಪ್‌ ಲೈನ್‌ ಹಾಕಿದ್ದರೂ ನೀರು ಬಂದಿಲ್ಲ. ಕಾಮಗಾರಿ ಪಡೆದ ಗುತ್ತಿಗೆದಾರರು ಅರ್ಧಕ್ಕೆ ಕೆಲಸ ನಿಲ್ಲಿಸಿ ಹೋಗಿದ್ದಾರೆ. ವಿವಿಧ ಕಾರಣಗಳಿಂದ ಹಲವು ಮನೆಗಳವರೆಗೆ ಬಾರದೇ ಹಳ್ಳಿಗಳ ಜನತೆ ಇನ್ನೂ ಬವಣೆ ಪಡುವುದು ತಪ್ಪಿಲ್ಲ ಎನ್ನುತ್ತಾರೆ ಮಣಿನಾಗರ ಯುವ ಧುರೀಣ ಆನಂದ ಪಾಟೀಲ. ಇನ್ನಾದರೂ ಸಂಬಂ ಧಿಸಿದ ಜನಪ್ರತಿನಿಧಿ ಗಳು, ಅಧಿಕಾರಿಗಳು ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿ ಹಳ್ಳಿಗರಿಗೆ ಜಲಮುಕ್ತಗೊಳಿಸುವುದು ಅವಶ್ಯಕವಾಗಿದೆ.

ಕೆಲವೆಡೆ ಅನಿವಾರ್ಯ ಕಾರಣಗಳಿಂದ ಕಾಮಗಾರಿಗೆ ತೊಡಕಾಗಿದೆ.ಅಂಥಹ ಕಡೆಗಳಲ್ಲಿ ಕೂಡಲೇ ನಿಗಾ ವಹಿಸಿ ಕ್ರಮ ಕೈಗೊಳ್ಳಲು ಈಗಾಗಲೇ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಶೀಘ್ರ ಪೂರ್ಣಗೊಳಿಸುತ್ತೇವೆ. -ಜಿ.ಎನ್‌. ಜಿರಲಿಮಠ ಎಇಇ (ಗ್ರಾಮೀಣ ಕುಡಿಯುವ ನೀರು ವಿಭಾಗ ಬಾದಾಮಿ)

ಮಣಿನಾಗರ ಸೇರಿ ಹಲವೆಡೆ ಜೆಜೆಎಂ ಕಾಮಗಾರಿ ಪೂರ್ಣಗೊಂಡಿಲ್ಲ. ಕಾಮಗಾರಿ ಪಡೆದ ಗುತ್ತಿಗೆದಾರರು ಅರ್ಧಕ್ಕೆ ಕೆಲಸ ನಿಲ್ಲಿಸಿ ಹೋಗಿದ್ದಾರೆ. ಹಲವು ಮನೆಗಳವರೆಗೆ ಬಾರದೇ ಹಳ್ಳಿಗಳ ಜನತೆ ಇನ್ನೂ ಬವಣೆ ಪಡುವುದು ತಪ್ಪಿಲ್ಲ. -ಆನಂದ ಪಾಟೀಲ, ಯುವ ಧುರೀಣ ಮಣಿನಾಗರ

ಕೆರೂರಲ್ಲಿ ಈ ಹಿಂದೆ ಕುಡಿಯುವ ನೀರಿನ ಸಮಸ್ಯೆ ಬೇಸಿಗೆಯಲ್ಲಿ ಅಧಿಕವಾಗಿತ್ತು.ಆದರೆ, ಈಗ ಘಟಪ್ರಭೆ ನದಿಯಿಂದ ಕೆರೆ ತುಂಬಲು ಪ್ರಾರಂಭಿಸಿದ ಮೇಲೆ ಸಮಸ್ಯೆ ಎದುರಾಗಿಲ್ಲ. ಪಟ್ಟಣದ ಕೆರೆಯಲ್ಲಿ ಸಾಕಷ್ಟು ಪ್ರಮಾಣದ ನೀರು ಸಂಗ್ರಹಗೊಂಡಿದ್ದು ಪೂರೈಕೆ ವ್ಯವಸ್ಥೆ ಸುಸ್ಥಿತಿಯಲ್ಲಿದೆ.-ಎನ್‌.ಕೆಂಚಪ್ಪ, ಮುಖ್ಯಾಧಿಕಾರಿ, ಪಟ್ಟಣ ಪಂಚಾಯಿತಿ ಕೆರೂರ

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.