ಲಕ್ಷಾನಟ್ಟಿ ಗ್ರಾಮ ಪಂಚಾಯಿತಿಗಿಲ್ಲ ಚುನಾವಣೆ

ಎರಡು ವರ್ಷ ಸಮೀಪಿಸಿದರೂ ನಡೆಯದ ಚುನಾವಣೆ ; ಲೋಕಾಪುರ ಪಪಂಗೆ ಹಳ್ಳಿಗಳ ಸೇರ್ಪಡೆಯಿಂದ ವಿಳಂಬ

Team Udayavani, Jun 13, 2022, 11:04 AM IST

5

ಮುಧೋಳ: ಗ್ರಾಮ ಪಂಚಾಯಿತಿ ಚುನಾವಣೆಗಳು ನಡೆದು ಅರ್ಧ ಅವಧಿ  ಸಮೀಪಿಸುತ್ತ ಬಂದರೂ ತಾಲೂಕಿನ ಲಕ್ಷಾನಟ್ಟಿ ಗ್ರಾಮ ಪಂಚಾಯಿತಿಗೆ ಮಾತ್ರ ಇದೂವರೆಗೂ ಚುನಾವಣೆ ಭಾಗ್ಯ ಕೂಡಿ ಬಂದಿಲ್ಲ.

ಅಧಿಕಾರ ವಿಕೇಂದ್ರೀಕರಣದಿಂದ ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಪಂಚಾಯಿತಿ ಚುನಾವಣೆ ನಡೆಸಲಾಗುತ್ತದೆ. ಆದರೆ, ಹಲವು ತಾಂತ್ರಿಕ ಕಾರಣದಿಂದಾಗಿ ಲಕ್ಷಾನಟ್ಟಿ ಗ್ರಾಮ ಪಂಚಾಯಿತಿಗೆ ಚುನಾವಣೆಯಾಗದ ಕಾರಣ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಹಳ್ಳಿಗಳ ಅಭಿವೃದ್ಧಿಗೆ ತೊಡಕುಂಟಾಗಿದೆ.

ಪಟ್ಟಣ ಪಂಚಾಯಿತಿಗೆ ಸೇರ್ಪಡೆಗೊಂಡ ಹಳ್ಳಿಗಳು: 2021ರಲ್ಲಿ ತಾಲೂಕಿನ ಲೋಕಾಪುರ ಗ್ರಾಮ ಪಂಚಾಯಿತಿಯಿಂದ ಪಟ್ಟಣ ಪಂಚಾಯಿತಿಗೆ ಮೇಲ್ದರ್ಜೆಗೇರಿತು. ಈ ಪಟ್ಟಣ ಪಂಚಾಯಿತಿಗೆ ಲಕ್ಷಾನಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟಿದ್ದ ಎರಡು ಗ್ರಾಮಗಳು ಸೇರ್ಪಡೆಗೊಂಡಿದ್ದರಿಂದ ಇದೀಗ ಲಕ್ಷಾನಟ್ಟಿ ಗ್ರಾಮ ಪಂಚಾಯಿತಿ ಚುನಾವಣೆಗೆ ತೊಡಕುಂಟಾಗಿದೆ. ಲೋಕಾಪುರ ಗ್ರಾಮ ಪಂಚಾಯಿತಿ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ ಪರಿಣಾಮ ಲಕ್ಷಾನಟ್ಟಿ ಗ್ರಾಮ ಪಂಚಾಯಿತಿಯ ಸದಸ್ಯತ್ವ ಸಂಖ್ಯೆ ಕಡಿಮೆಯಾಯಿತು. ಇದರಿಂದ ಮೀಸಲಾತಿ ಸ್ಥಾನ ಹಂಚಿಕೆ ವಿಚಾರದಲ್ಲಿ ಗೊಂದಲ ಉಂಟಾಗುತ್ತಿರುವ ಕಾರಣ ಚುನಾವಣೆ ಪ್ರಕ್ರಿಯೆ ವಿಳಂಬವಾಗುತ್ತಿದೆ.

ಏಳು ಹಳ್ಳಿಗಳು: ಲೋಕಾಪುರ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರುವ ಮುನ್ನ ಲಕ್ಷಾನಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಲಕ್ಷಾನಟ್ಟಿ, ವರ್ಚಗಲ್ಲ, ಚೌಡಾಪುರ, ಜಾಲಿಕಟ್ಟಿ ಬಿ.ಕೆ., ಜಾಲಿಕಟ್ಟಿ ಕೆ.ಡಿ, ಪಾಲ್ಕಿಮಾನಿ, ನಾಗನಾಪುರ, ಬ್ಯಾಡರ ಅರಳಿಕಟ್ಟಿ, ಜೇಡರ ಅರಳಿಕಟ್ಟಿ ಹಳ್ಳಿಗಳು ಬರುತ್ತಿದ್ದವು. ಇದೀಗ ಜಾಲಿಕಟ್ಟಿ ಬಿ.ಕೆ. ಹಾಗೂ ಜಾಲಿಕಟ್ಟಿ ಕೆ.ಡಿ. ಗ್ರಾಮಗಳು ಲೋಕಾಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸೇರ್ಪಡೆಗೊಂಡಿವೆ. ಇದೀಗ 7 ಗ್ರಾಮಗಳನ್ನು ಒಳಗೊಂಡಿರುವ ಗ್ರಾಮ ಪಂಚಾಯಿತಿಗೆ ಆಡಳಿತ ಮಂಡಳಿಯಿಲ್ಲದೆ ಕೇವಲ ಅಧಿಕಾರಿಗಳ ಹುಕುಮಿನಂತೆ ಕಾರ್ಯನಿರ್ವಹಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸೀಟು ಹಂಚಿಕೆಯ ಗೊಂದಲ: 9 ಹಳ್ಳಿಗಳನ್ನು ಹೊಂದಿದ್ದ ಲಕ್ಷಾನಟ್ಟಿ ಗ್ರಾಮ ಪಂಚಾಯಿತಿ ಒಟ್ಟು 22 ಸ್ಥಾನಗಳನ್ನು ಒಳಗೊಂಡಿತ್ತು. ಇದೀಗ ಜಾಲಿಕಟ್ಟಿ ಕೆ.ಡಿ., ಹಾಗೂ ಜಾಲಿಕಟ್ಟಿ ಕೆ.ಬಿ. ಗ್ರಾಮಗಳು ಗ್ರಾಮ ಪಂಚಾಯಿತಿಯಿಂದ ಹೊರಬರುವ ಕಾರಣ ಮೀಸಲಾತಿ ವಿಂಗಡಿಸಿ ಸ್ಥಾನ ಹಂಚಿಕೆಯ ಗೊಂದಲದಿಂದ ಚುನಾವಣೆ ಕಾರ್ಯಕ್ಕೆ ಮಂಕು ಕವಿದಂತಾಗಿದೆ.

ಅಭಿವೃದ್ಧಿ ಕಾರ್ಯ ನಿಧಾನ: ಗ್ರಾಮ ಪಂಚಾಯಿತಿಗೆ ಆಡಳಿತ ಮಂಡಳಿ ನಿರ್ಮಾಣವಾಗದ ಕಾರಣ ಏಳು ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಗಳು ಮಂದಗತಿಯಲ್ಲಿ ಸಾಗಿವೆ ಎಂಬುದು ಸ್ಥಳೀಯರ ಮಾತು. ಅಧಿ ಕಾರಿಗಳಿಗೆ ಸ್ಥಳೀಯ ಸದಸ್ಯರಿಗೆ ಸೂಕ್ತ ಮಾರ್ಗದರ್ಶನ ಸಿಕ್ಕರೆ ಅಭಿವೃದ್ಧಿಗೆ ಹೆಚ್ಚಿನ ವೇಗ ದೊರೆಯುತ್ತದೆ. ಆದ್ದರಿಂದ ಶೀಘ್ರ ಚುನಾವಣೆ ನಡೆದರೆ ಒಳ್ಳೆಯದು ಎನ್ನುತ್ತಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು.

ಲಕ್ಷಾನಟ್ಟಿ ಗ್ರಾಮ ಪಂಚಾಯತಿಯಲ್ಲಿ ಮೊದಲಿದ್ದ 2ಹಳ್ಳಿಗಳು ಲೋಕಾಪುರ ಪಟ್ಟಣ ಪಂಚಾಯಿತಿಗೆ ಸೇರ್ಪಡೆಗೊಂಡ ಹಿನ್ನೆಲೆ ಚುನಾವಣೆ ತಡವಾಗಿದೆ. ಸರ್ಕಾರದ ಮಟ್ಟದಲ್ಲಿ ನಿರ್ದೇಶನ ಬಂದ ಕೂಡಲೇ ಚುನಾವಣೆ ನಡೆಸುತ್ತೇವೆ. –ಕಿರಣ ಘೋರ್ಪಡೆ, ಆಡಳಿತಾಧಿಕಾರಿ ಲಕ್ಷಾನಟ್ಟಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಕಾರ್ಯ ನಿರ್ವಾಹಕ ಅಧಿಕಾರಿ, ಮುಧೋಳ

ನಮ್ಮ ಗ್ರಾಮ ಪಂಚಾಯಿತಿ ಚುನಾವಣೆಗಿರುವ ಅಡತಡೆಗಳು ಶೀಘ್ರ ಬಗೆಹರಿದು ಚುನಾವಣೆ ನಡೆದರೆ ಆಡಳಿತ ಮಂಡಳಿಯಿಂದಾಗಿ ಅಭಿವೃದ್ಧಿ ಕಾರ್ಯಗಳಿಗೆ ವೇಗ ಸಿಕ್ಕಂತಾಗುತ್ತದೆ. -ಬಾಬುಗೌಡ ಪಾಟೀಲ, ಗ್ರಾಪಂ ಮಾಜಿ ಸದಸ್ಯ, ಲಕ್ಷಾನಟ್ಟಿ

„ಗೋವಿಂದಪ್ಪ ತಳವಾರ/ ಸಲೀಂ ಕೊಪ್ಪದ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.