ವಿದ್ಯುತ್‌ ಬಳಕೆಯಲ್ಲಿ ಗ್ರಾಹಕರು ಜಾಗೃತಿ ವಹಿಸಲಿ

•ಉತ್ತಮ ಸೇವೆ ನೀಡಲು ಇಲಾಖೆ ಬದ್ಧ•ಗ್ರಾಹಕರ ಸಮಸ್ಯೆಗಳಿಗೆ ಸ್ಪಂದಿಸಲು ಕರೆ•ವಿದ್ಯುತ್‌ ದುರ್ಬಳಕೆ ತಡೆಗೆ ಕ್ರಮ

Team Udayavani, Aug 2, 2019, 9:47 AM IST

bk-tdy-2

ಕೆರೂರ: ಹೆಸ್ಕಾಂ ಕಚೇರಿಯಲ್ಲಿ ನಡೆದ ವಿದ್ಯುತ್‌ ಸುರಕ್ಷತಾ ಜಾಗೃತಿ ಕಾರ್ಯಗಾರವನ್ನು ಗಣ್ಯರು ಉದ್ಘಾಟಿಸಿದರು.

ಕೆರೂರ: ಗ್ರಾಹಕರು ವಿದ್ಯುತ್‌ ಬಳಕೆಯಲ್ಲಿ ಜಾಗೃತಿ ವಹಿಸಬೇಕಾಗಿದ್ದು, ಉತ್ತಮ ಗುಣಮಟ್ಟದ ಉಪಕರಣ ಬಳಸಬೇಕು. ವಿದ್ಯುತ್‌ ಉಳಿತಾಯ ಮಾಡಲು ಎಲ್ಇಡಿ ಬಲ್ಬ್ ಬಳಕೆ ಹಾಗೂ ಸೋಲಾರ್‌ ಅಳವಡಿಸಿಕೊಳ್ಳಬೇಕೆಂದು ಗುಳೇದಗುಡ್ಡ ಹೆಸ್ಕಾಂ ವಿಭಾಗ ಸಹಾಯ ಕಾರ್ಯನಿರ್ವಾಹಕ ಅಧಿಕಾರಿ ಬಾಲಚಂದ್ರ ಹಲಗತ್ತಿ ಹೇಳಿದರು.

ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ನಡೆದ ವಿದ್ಯುತ್‌ ಸುರಕ್ಷತಾ ಜಾಗೃತಿ ಕಾರ್ಯಗಾರದಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.

ಕೆರೂರ ಶಾಖಾಧಿಕಾರಿ ಗೋಪಾಲ ಪೂಜಾರ ಮಾತನಾಡಿ, ವಿದ್ಯುತ್‌ ಸರಬರಾಜಿನಲ್ಲಿ ಸಮಸ್ಯೆಯಾದಲ್ಲಿ ಇಲಾಖೆ ಸಿಬ್ಬಂದಿಗೆ ತಿಳಿಸಬೇಕು. ಗ್ರಾಹಕರಿಗೆ ಉತ್ತಮ ಸೇವೆ ನೀಡಲು ಇಲಾಖೆ ಸಿಬ್ಬಂದಿ ತಕ್ಷಣ ಅವರ ಸಮಸ್ಯೆಗಳಿಗೆ ಸ್ವಂದಿಸಬೇಕು ಎಂದು ಸಿಬ್ಬಂದಿಗೆ ಸಲಹೆ ಹೇಳಿದರು.

ಕುಳಗೇರಿ ಶಾಖಾಧಿಕಾರಿ ಚಂದ್ರು ಕೊಂತ ಮಾತನಾಡಿ, ಹೆಸ್ಕಾಂ ಟಿ.ಸಿ. ಸುತ್ತ ಕಸ ಹಾಕಬಾರದು. ಕಂಬಗಳ ವಾಲುವಿಕೆ, ವಿದ್ಯುತ್‌ ತಂತಿ ಜೋತು ಬಿದ್ದಿರುವುದು. ವಿದ್ಯುತ್‌ ಮಾರ್ಗ ತತ್ತರಿಸಿ ಹೋಗಿರುವುದು ಹಾಗೂ ವಿದ್ಯುತ್‌ ಅವಘಡಗಳು ಸಂಭವಿಸುವ ಲಕ್ಷಣ ಕಂಡು ಬಂದಲ್ಲಿ ಹೆಸ್ಕಾಂ ಅಧಿಕಾರಿಗಳಿಗೆ ತಿಳಿಸಬಹುದು ಅಥವಾ ಸಹಾಯವಾಣಿ 1912 ಸಂಪರ್ಕಿಸಬಹುದು ಎಂದರು.

ಜಿಪಂ ಮಾಜಿ ಸದಸ್ಯ ಎಂ.ಜಿ. ಕಿತ್ತಲಿ, ಪಪಂ ಮಾಜಿ ಅಧ್ಯಕ್ಷ ಬಿ.ಬಿ. ಸೂಳಿಕೇರಿ ಮಾತನಾಡಿದರು.

ಈ ವೇಳೆ ಗುಳೇದಗುಡ್ಡ ತಾಂತ್ರಿಕ ಸಹಾಯಕರಾದ ಮಾಲತೇಶ ಬಾದವಾಡಗಿ, ಶ್ರೀಧರ ಕಂದಕೂರ, ಚನ್ನಮಲ್ಲಪ್ಪ ಘಟ್ಟದ, ಬಸವರಾಜ ಬ್ಯಾಹಟ್ಟಿ, ಮಂಜುನಾಥ ರಾಠೊಡ, ಸಂಕಣ್ಣ ಹೊಸಮನಿ, ಗಣೇಶ ಸಿಂಗದ, ನಾಗೇಶ ಛತ್ರಬಾಣ, ಮಹಾಂತೇಶ ಅಂಬಿಗೇರ, ಹೆಸ್ಕಾಂ ಸಿಬ್ಬಂದಿ ಇದ್ದರು. ಈರಣ್ಣ ಅಂಕದ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.