ಪತ್ರಕರ್ತರು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಲಿ

ಕಾನಿಪ ಸಂಘದ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ

Team Udayavani, Apr 20, 2022, 1:33 PM IST

12

ಬಾಗಲಕೋಟೆ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ‌ರಾಗಿ ಆನಂದ ಧಲಬಂಜನ್‌ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಶಂಕರ ಎಸ್‌. ಕಲ್ಯಾಣಿ ಅವರ ನೇತೃತ್ವದ ನೂತನ ಪದಾಧಿಕಾರಿಗಳು ಮಂಗಳವಾರ ಅಧಿಕಾರ ಸ್ವೀಕರಿಸಿದರು.

ಪದಗ್ರಹಣ ಸಮಾರಂಭದಲ್ಲಿ ನೂತನ ಅಧ್ಯಕ್ಷ‌ ಆನಂದ ಧಲಬಂಜನ್‌ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರ ಎಸ್‌. ಕಲ್ಯಾಣಿ ಅವರಿಗೆ ಹಿಂದಿನ ಅಧ್ಯಕ್ಷ‌ ಸುಭಾಸ ಹೊದ್ಲೂರ, ಪ್ರಧಾನ ಕಾರ್ಯದರ್ಶಿ ಎಂ.ಎನ್‌. ಶಾಲಗಾರ ಅವರು ಅಧಿಕಾರ ಹಸ್ತಾಂತರಿಸಿದರು.

ಹಿರಿಯ ಪತ್ರಕರ್ತ ರಾಮ ಮನಗೂಳಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿದ್ದ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಸುಳ್ಳೊಳ್ಳಿ ಹಾಗೂ ಸಂಘದ ನೂತನ ಪದಾಧಿಕಾರಿಗಳು ಶುಭ ಹಾರೈಸಿದರು.

ಹಿರಿಯ ಪತ್ರಕರ್ತ ಸುಭಾಸ ಹೊದ್ಲೂರ ಅವರು ಅಧಿಕಾರ ಹಸ್ತಾಂತರಿಸಿ ಮಾತನಾಡಿ, ತಮಗೆ ಸಂದ ಅವಧಿಯಲ್ಲಿ ಮಾಡಿರುವ ಕೆಲಸ, ಸಾಧನೆ ತೃಪ್ತಿ ತಂದಿದೆ. ತಮ್ಮ ಅವಧಿಯಲ್ಲಿ ಮಾರ್ಗದರ್ಶನ ನೀಡಿದ ಹಿರಿಯರು, ಸಹಕರಿಸಿದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿ ನೂತನ ಪದಾಧಿಕಾರಿಗಳಿಗೆ ಎಲ್ಲ ರೀತಿಯ ಸಹಕಾರ ನೀಡುವದಾಗಿ ತಿಳಿಸಿದರು.

ನೂತನ ಅಧ್ಯಕ್ಷ ‌ ಆನಂದ ಧಲಬಂಜನ ಮಾತನಾಡಿ, ನನ್ನನ್ನು ಗುರುತಿಸಿ ಅಧ್ಯಕ್ಷ ‌ ಸ್ಥಾನದ ಜವಾಬ್ದಾರಿ ವಹಿಸಿದ ಹಿರಿಯ ಪತ್ರಕರ್ತರಿಗೂ, ಸಹಕಾರ ನೀಡಿದ ಸಂಘದ ಸದಸ್ಯರಿಗೂ ಕೃತಜ್ಞತೆ ಸಲ್ಲಿಸಿ, ತಮ್ಮ ಅವಧಿಯಲ್ಲಿ ಸಂಘದ ಶಕ್ತಿಯುತ ಸಂಘಟನೆ ಆದ್ಯತೆ ನೀಡಲಾಗುವದು ಜತೆಗೆ ಪತ್ರಕರ್ತರಿಗೂ ಸಕಲ ರೀತಿಯ ಸಹಕಾರ ನೀಡುವುದರೊಂದಿಗೆ ರಚನಾತ್ಮಕ ಕಾರ್ಯಕ್ರಮ ರೂಪಿಸಲಾಗುವುದು ಎಂದು ತಿಳಿಸಿದರು.

ಮಾಧ್ಯಮ ಅಕಾಡೆಮಿಯ ಮಾಜಿ ಸದಸ್ಯ, ಹಿರಿಯ ಪತ್ರಕರ್ತ ರಾಮ ಮನಗೂಳಿ ಅವರು ಜಿಲ್ಲಾ ಕಾನಿಪದ ಫೇಸಬುಕ್‌ ಹಾಗೂ ಇ-ಮೇಲ್‌ ಅನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಸಂಘಕ್ಕೆ ಹಿರಿಯರ ಮಾರ್ಗದರ್ಶನದಲ್ಲಿ ಎಲ್ಲರೂ ಒಟ್ಟಾಗಿ ಅವಿರೋಧ ಆಯ್ಕೆ ಮಾಡುವ ಮೂಲಕ ರಾಜ್ಯ ಘಟಕದಲ್ಲಿ ಜಿಲ್ಲಾ ಕಾನಿಪ ಘಟಕ ಮಾದರಿಯಾಗಿದೆ ಎಂದು ಹೇಳಿ ಬರುವ ಅವ ಧಿಯಲ್ಲಿಯೂ ನಾಮಪತ್ರ ಸಲ್ಲಿಕೆಯಾಗದೇ ಅವಿರೋಧ ಆಯ್ಕೆಯ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಬೇಕು ಎಂದರು.

ಮಾಧ್ಯಮ ಅಕಾಡೆಮಿಯ ಆಶ್ರಯದಲ್ಲಿ ಪತ್ರಕರ್ತರಿಗೆ ವೃತ್ತಿ ತರಬೇತಿ, ಪುನರ್‌ಮನನ ಕಾರ್ಯಾಗಾರಗಳ ಮೂಲಕ ಜವಾಬ್ದಾರಿಯುತ ಪತ್ರಕರ್ತರನ್ನು ಸಜ್ಜುಗೊಳಿಸುವ ಕಾರ್ಯ ಸಂಘ ಆಶ್ರಯದಲ್ಲಿ ನಡೆಯಬೇಕು. ಅಕ್ಷ‌ರ ವ್ಯಭಿಚಾರಕ್ಕಿಳಿಯದೇ ಪತ್ರಿಕೋದ್ಯಮ ವೃತ್ತಿಯ ಘನತೆಯನ್ನು ಎತ್ತಿ ಹಿಡಿಯುವ ಮೂಲಕ ಪತ್ರಕರ್ತರು ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯ ನಿರ್ವಹಿಸಿ ಪತ್ರಿಕಾ ಧರ್ಮ ಎತ್ತಿ ಹಿಡಿಯಬೇಕು ಎಂದು ಹೇಳಿದರು.

ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿದ್ದ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಸುಳ್ಳೊಳ್ಳಿ ಮಾತನಾಡಿ, ಬಾಗಲಕೋಟೆ ಜಿಲ್ಲಾ ಕಾನಿಪಕ್ಕೆ ಈವರೆಗೂ ಅವಿರೋಧ ಆಯ್ಕೆಯ ಪರಂಪರೆ ಮುಂದುವರಿದಿರುವುದು ಹೆಮ್ಮೆ, ಇಲ್ಲಿನ ಪತ್ರಿಕೋದ್ಯಮದ ಪರಿಸರ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಹೇಳಿ ಸಂಘಕ್ಕೆ, ಪತ್ರಕರ್ತರಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ರಾಮ ಮನಗೂಳಿ ಹಾಗೂ ಚುನಾವಣಾಧಿಕಾರಿಯಾಗಿದ್ದ ಮಂಜುನಾಥ ಸುಳ್ಳೊಳ್ಳಿ ಅವರನ್ನು ಸನ್ಮಾನಿಸಲಾಯಿತು. ಎಂ.ಎನ್‌. ಶಾಲಗಾರ ಸ್ವಾಗತಿಸಿದರು. ಅಭಯ ಮನಗೂಳಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕಾನಿಪ ಪ್ರಧಾನ ಕಾರ್ಯದರ್ಶಿ ಶಂಕರ ಎಸ್‌. ಕಲ್ಯಾಣಿ ವಂದಿಸಿದರು.

ನೂತನ ಪದಾಧಿಕಾರಿಗಳು: ಜಿಲ್ಲಾ ಕಾನಿಪದ ನೂತನ ಅಧ್ಯಕ್ಷರಾಗಿ ಆನಂದ ದಲಭಂಜನ, ಉಪಾಧ್ಯಕ್ಷರಾಗಿ ಉಮೇಶ ಪೂಜಾರಿ, ಸಿ.ಸಿ. ಚಂದ್ರಪಟ್ಟಣ, ಮಲ್ಲಿಕಾರ್ಜುನ ಮಠ, ಪ್ರಧಾನ ಕಾರ್ಯದರ್ಶಿಯಾಗಿ ಶಂಕರ ಎಸ್‌. ಕಲ್ಯಾಣಿ, ಕಾರ್ಯದರ್ಶಿಗಳಾಗಿ ಗುರುಚಿದಾನಂದ ಹಿರೇಮಠ, ಮಲ್ಲಿಕಾರ್ಜುನ ತುಂಗಳ, ಸುಧೀರ ಕಲಕೇರಿ, ಖಜಾಂಚಿಯಾಗಿ ಜಗದೀಶ ಗಾಣಿಗೇರ ಮತ್ತು ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮಹೇಶ ಅಂಗಡಿ ಹಾಗೂ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ರವಿ ಮೂಖೀ, ಅಶೋಕ ಶೆಟ್ಟರ, ರವಿ ಹಳ್ಳೂರ, ವಿವೇಕಾನಂದ ಗರಸಂಗಿ, ಸಂತೋಷ ದೇಶ ಪಾಂಡೆ, ಎಂ.ಜಿ. ಧಾರವಾಡ, ಆಯ್‌.ಎಲ್‌ .ನಾಲತವಾಡ, ಎಸ್‌.ಎಂ.ಇನಾಮದಾರ, ವಿಠಲ ಮೂಲಿಮನಿ, ಶಿವರಾಯ ಈಶ್ವರಪ್ಪಗೋಳ, ಚನ್ನಬಸಪ್ಪ ಚಲವಾದಿ, ವಿರೂಪಾಕ್ಷಯ್ಯ ಹಿರೇಮಠ, ಆರ್‌.ಎಸ್‌.ಸರಕಾವಸ, ಶಂಕರ ಹೂಗಾರ, ಆರೀಪ್‌ ಪೆಂಡಾರಿ ಅವರುಗಳು ಅಧಿಕಾರ ಸ್ವೀಕರಿಸಿದರು.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.