ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಲಿ

ಕೆಲವು ಹಕ್ಕುಪತ್ರದಲ್ಲಿ ಬೇರೆಯವರ ಹೆಸರಿನಲ್ಲಿವೆ. ಇದರಿಂದ ನೈಜ ಸಂತ್ರಸ್ತರಿಗೆ ಹಕ್ಕುಪತ್ರ ಸಿಕ್ಕಿಲ್ಲ.

Team Udayavani, Jul 13, 2022, 5:31 PM IST

ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಲಿ

ಬೀಳಗಿ: ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದನೆ ಮಾಡಬೇಕು. ಪಿಂಚಣಿ ಹಾಗೂ ವಿವಿಧ ಸೌಲಭ್ಯಗಳನ್ನು ಪಡೆಯುವ ಫಲಾನುಭವಿಗಳ ಮನೆ ಬಾಗಿಲಿಗೆ ಮುಟ್ಟಿಸುವ ಕೆಲಸ ಅಯಾ ಇಲಾಖೆಯ ಅಧಿಕಾರಿಗಳು ಮಾಡಲಿದ್ದಾರೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ| ಮುರುಗೇಶ ಆರ್‌. ನಿರಾಣಿ ಹೇಳಿದರು.

ಗಲಗಲಿ ಗ್ರಾಮದಲ್ಲಿ ನಡೆದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿಯೊಂದು ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಸಾಕಷ್ಟು ಯೋಜನೆ ತಂದು ಅಭಿವೃದ್ಧಿ ಪಡಿಸಲಾಗಿದೆ. ಇನ್ನೂ ಹೆಚ್ಚು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಮುಕ್ತವಾಗಿ ಬಂದು ಪರಿಹಾರ ಪಡೆದುಕೊಳ್ಳಬಹುದು. ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯ ದೊರಕಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜನಸಂಪರ್ಕ ಸಭೆಯಲ್ಲಿ ನೂರಾರು ಸಮಸ್ಯೆಗಳ ಮಹಾಪೂರವೇ ಹರಿದು ಬಂದಿತು. ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿ ಪರಿಹಾರ ದೊರಕಿಸಿದರು. ಕೆಲವು ಸಮಸ್ಯೆಗಳಿಗೆ ಕೂಡಲೆ ಸ್ಪಂದನೆ ಮಾಡಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ಗಲಗಲಿಯ ಹೊಳಬಸು ಬಾಳಶೆಟ್ಟಿ ಗ್ರಾಮದಲ್ಲಿನ ಸಮಸ್ಯೆ ಹಾಗೂ ಹಲವು ಬೇಡಿಕೆಗಳನ್ನು ಸಚಿವರ ಗಮನಕ್ಕೆ ತಂದರು. ಕೆಇಬಿಯ ಕೆಲವು ಕಂಬಗಳು ಶಿಥಿಲ ಹಾಗೂ ತಂತಿ ಜೋತು ಬಿದ್ದಿದ್ದು, ಅವುಗಳ ದುರಸ್ತಿ, ಆಸ್ಪತ್ರೆವರೆಗೆ ರಸ್ತೆ ದುರಸ್ತಿ, ಹೆಣ್ಣು ಮಕ್ಕಳ ಶಾಲಾ ದುರಸ್ತಿ, ರುದ್ರಭೂಮಿ ಅಭಿವೃದ್ಧಿ, ಮುಕ್ತಿವಾಹನ ಸೌಲಭ್ಯ, ಬಸ್‌ ನಿಲ್ದಾಣ, ರಸ್ತೆಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು.

ಗಲಗಲಿ ಗ್ರಾಮ ಮುಳುಗಡೆಯಾಗಿದ್ದು ಇಲ್ಲಿಯ ಫಲಾನುಭವಿಗಳಿಗೆ ತಮ್ಮ ಮನೆಗಳ ಕೆಲವು ಹಕ್ಕು ಪತ್ರ ನೀಡಿಲ್ಲ. ಕೆಲವು ಹಕ್ಕುಪತ್ರದಲ್ಲಿ ಬೇರೆಯವರ ಹೆಸರಿನಲ್ಲಿವೆ. ಇದರಿಂದ ನೈಜ ಸಂತ್ರಸ್ತರಿಗೆ ಹಕ್ಕುಪತ್ರ ಸಿಕ್ಕಿಲ್ಲ. ಅವುಗಳನ್ನು ಸರಿಪಡಿಸಿಕೊಡಬೇಕು ಎಂದು ಸಭೆಯಲ್ಲಿ ಸಚಿವರಿಗೆ ಮನವಿ ಮಾಡಿದರು.

ಕೋಲೂರ ಗ್ರಾಮದ ಪುನರ್ವಸತಿ ಕೇಂದ್ರದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಶಿವಾಪುರ ಗ್ರಾಮ ಕಂದಾಯ ಗ್ರಾಮವನ್ನಾಗಿ ಮಾಡಬೇಕು. ಬಿಸನಾಳ ಗ್ರಾಮದಿಂದ ಹಲಗಲಿಗೆ ಹೋಗುವ ರಸ್ತೆ ನಿರ್ಮಾಣಕ್ಕೆ ಮುಂದಾಗಬೇಕೆಂದು ಗ್ರಾಮದ ಹಣಮಂತ ಬುರ್ಲಿ ಸಚಿವರ ಗಮನಕ್ಕೆ ತರುತ್ತಿದ್ದಂತೆ ಸಚಿವರು ಈಗಾಗಲೆ ಈ ರಸ್ತೆ ಮಂಜೂರಾಗಿದೆ ಎಂದು ಸಭೆಯ ಗಮನಕ್ಕೆ ತಂದರು.

ಕಂದಾಯ ಇಲಾಖೆಯಲ್ಲಿ ಸೌಲಭ್ಯಗಳ ಕುರಿತು ಸಭೆಯಲ್ಲಿ ತಹಶೀಲ್ದಾರ್‌ ಸುಹಾಸ ಇಂಗಳೆ ಸಾರ್ವಜನಿಕರಲ್ಲಿ ಮಾಹಿತಿ ನೀಡಿದರು. ಪಿಂಚಣಿ ಪಡೆಯಲು ಫಲಾನುಭವಿಗಳು ಕಚೇರಿಗೆ ಅಲೆಯುವ ಅವಶ್ಯ ಇಲ್ಲ. ನಮ್ಮ ಸಹಾಯವಾಣಿಗೆ ತಿಳಿಸಿ. 72 ಗಂಟೆಯಲ್ಲಿ ನಮ್ಮ ಸಿಬ್ಬಂದಿ ನಿಮ್ಮ ಮನೆಗೆ ಬಂದು ಅದಕ್ಕೆ ಬೇಕಾಗುವ ದಾಖಲಾತಿಗಳನ್ನು ಪಡೆದು ಪಿಂಚಣಿ ಸೌಲಭ್ಯ ನೀಡಲಿದ್ದಾರೆ ಎಂದರು.

ಸಿದ್ದಪ್ಪ ಕಡಪಟ್ಟಿ ಮಾತನಾಡಿ, ಗುಳಬಾಳ ಗ್ರಾಮಕ್ಕೆ ಹೋಗುವ ಬ್ರಿಜ್‌ ಎತ್ತರಿಸಬೇಕು. ಯಡಹಳ್ಳಿ ಗ್ರಾಮದಲ್ಲಿನ ದೇವಸ್ಥಾನಗಳಿಗೆ ಅನುದಾನ ಬಿಡುಗಡೆ ಮಾಡಬೇಕು ಎಂದು ತಿಪ್ಪಣ್ಣ ಸಂಜೀವಪ್ಪಗೋಳ ಮನವಿ ಮಾಡಿದರು. ಕಂದಾಯ, ಪುನರ್ವಸತಿ, ಹೆಸ್ಕಾಂ ಇಲಾಖೆ, ತೋಟಗಾರಿಕೆ, ಅರಣ್ಯ ಹಾಗೂ ವಿವಿಧ ಇಲಾಖೆಯ ವಿಷಯಗಳು ಸಭೆಯಲ್ಲಿ ಚರ್ಚೆಗೆ ಬಂದವು. ಸಂದರ್ಭದಲ್ಲಿ ತಹಶೀಲ್ದಾರ್‌ ಸುಹಾಸ ಇಂಗಳೆ, ಗ್ರಾಮೀಣ ಕುಡಿಯುವ ನೀರು ಮತ್ತು
ನೈರ್ಮಲ್ಯ ವಿಭಾಗದ ಎಇಇ ವಿಲಾಸ ರಾಠೊಡ, ಸಿಪಿಐ ಶಿವಾನಂದ ಕಮತಗಿ, ಹೆಸ್ಕಾಂ ಎ.ಇ.ಇ. ಮಂಜುನಾಥ ಬೋಕಿ, ಪುನರವಸತಿ ಅಧಿಕಾರಿ ಎ.ಎಮ್‌. ಬಾಗವಾನ, ಸಮಾಜ ಕಲ್ಯಾಣ ಅಧಿಕಾರಿ ಎಚ್‌.ಎಂ. ಪಾಟೀಲ, ಗೋವಿಂದಪ್ಪ ಅರಳಿಕಟ್ಟಿ, ಡಾ| ದಯಾನಂದ ಕರೆಣ್ಣವರ, ಅರಣ್ಯ ವಲಯ ಅಧಿಕಾರಿ ಎಚ್‌.ಬಿ. ಡೋಣಿ, ಪ್ರದೀಪ ರಾಠೊಡ, ಸುಭಾಸ ಸುಲ್ಪಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.