ಕೂಡಲಸಂಗಮದಲ್ಲಿ ಅಭಿವೃದ್ಧಿ ಕಾರ್ಯಗಳಾಗಲಿ

ನಿರಂತರ ದಾಸೋಹ ನಡೆಸಿದರೆ ಭಕ್ತರಿಗೆ ಅನುಕೂಲ

Team Udayavani, Apr 20, 2022, 12:45 PM IST

10

ಕೂಡಲಸಂಗಮ: ಲಿಂಗಾಯತರ ಧರ್ಮ ಕ್ಷೇತ್ರ ಕೂಡಲಸಂಗಮ ಇನ್ನೂ ಅಧಿಕ ಪ್ರಮಾಣದಲ್ಲಿ ಅಭಿವೃದ್ಧಿ ಹೊಂದುವ ಅಗತ್ಯವಿದೆ. ಮಲೆಮಹಾದೇಶ್ವರ ಬೆಟ್ಟ, ಯಡಿಯೂರು ಕ್ಷೇತ್ರಗಳಿಗೆ ಹೋಲಿಸಿದರೆ ಸುಕ್ಷೇತ್ರದಲ್ಲಿ ಅಭಿವೃದ್ಧಿಯ ಅಗತ್ಯ ಎಂದು ಕೂಡಲಸಂಗಮ ಬಸವ ಧರ್ಮ ಪೀಠದ ಮಹಾದೇಶ್ವರ ಸ್ವಾಮೀಜಿ ಹೇಳಿದರು.

ಸಂಗಮೇಶ್ವರ ಜಾತ್ರೆಯ ನಿಮಿತ್ತ ಸೋಮವಾರ ರಾತ್ರಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಲಿಂಗಾನಂದ ಸ್ವಾಮೀಜಿ, ಮಾತೆ ಮಹಾದೇವಿ 1988ರಲ್ಲಿ ಶರಣ ಮೇಳ ಕಾರ್ಯಕ್ರಮದ ಮೂಲಕ ಸುಕ್ಷೇತ್ರವನ್ನು ನಾಡಿಗೆ ಪರಿಚಯಿಸಿದರು. 1998ರಲ್ಲಿ ಜೆ.ಎಚ್‌. ಪಟೇಲ ಮಂಡಳಿ ಸ್ಥಾಪಿಸುವ ಮೂಲಕ ಸುಕ್ಷೇತ್ರವನ್ನು ಅಭಿವೃದ್ಧಿಪಡಿಸಿದರು. ಮಂಡಳಿಯಿಂದ ನಿರಂತರ ದಾಸೋಹ ನಡೆಯುತ್ತಿದ್ದು, ಸಮಯ ನಿಗದಿ ಮಾಡಿರುವುದು ಸರಿಯಲ್ಲ. ಬೆಳಗ್ಗೆಯಿಂದ ರಾತ್ರಿಯವರೆಗೆ ನಿರಂತರ ದಾಸೋಹ ನಡೆಸಿದರೆ ಭಕ್ತರಿಗೆ ಅನುಕೂಲವಾಗುವುದು ಎಂದರು.

ಸಾನಿಧ್ಯ ವಹಿಸಿ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ಭಕ್ತರ ಮನ, ಮನೆ ಸ್ವತ್ಛಗೊಳಿಸುವ ಉದ್ದೇಶದಿಂದ ನಮ್ಮ ಪೂರ್ವಜರು ಜಾತ್ರೆ ನಡೆಸಿಕೊಂಡು ಬಂದಿದ್ದಾರೆ. ನಮ್ಮ ಸಂಸ್ಕೃತಿ, ಪರಂಪರೆ ಮುಂದಿನ ತಲೆಮಾರಿಗೆ ಜಾತ್ರೆಯ ಮೂಲಕ ಮುಂದುವರಿಸಿಕೊಂಡು ಹೊಗುವ ಕಾರ್ಯ ಮಾಡಬೇಕು. ಜನಪ್ರತಿನಿ ಧಿಗಳು ಜಾತ್ರೆಯ ಕಾರ್ಯಕ್ರಮದಲ್ಲಿ ಪಾಲ್ಗೊಳಬೇಕು ಎಂದರು.

ಕೂಡಲಸಂಗಮ ಸಾರಂಗ ಮಠದ ಅಭಿನವ ಜಾತವೇದ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಜಾತ್ರೆಯ ನಿಮಿತ್ತ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಗ್ರಾಮಸ್ಥರು ಸಹಕಾರ ಕೊಡುವ ಮೂಲಕ ಯಶಸ್ವಿಗೊಳಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಆಯುಕ್ತ ರಘು ಎ.ಈ. ಮಾತನಾಡಿ, ಕೋವಿಡ್‌ ಕಾರಣ ಎರಡು ವರ್ಷ ಜಾತ್ರೆ ನಡೆದಿರಲಿಲ್ಲ, ಈ ವರ್ಷದ ಜಾತ್ರೆಯನ್ನು ಸಡಗರ-ಸಂಭ್ರಮದಿಂದ ಆಚರಿಸುತ್ತೇವೆ ಎಂದರು.

ತಹಶೀಲ್ದಾರ್‌ ಶಿವಕುಮಾರ ಬಿರಾದರ, ವ್ಯವಸ್ಥಾಪಕ ಬಿ.ಎಸ್‌.ಕಳ್ಳಿ, ಶಿರಸ್ತೆದಾರ ಜೆ.ಎಸ್‌. ಚಿನಿವಾಲರ್‌ ಮುಂತಾದವರು ಇದ್ದರು.

ಆದಪ್ಪ ಗೊರಚಿಕ್ಕನವರ ಸ್ವಾಗತಿಸಿ, ನಿರೂಪಿಸಿದರು, ವಿಜಯ ಕೋಟೂರ ವಂದಿಸಿದರು. ಸಮಾರಂಭದ ನಂತರ ಇಂದುಮತಿ ಸಾಲಿಮಠ, ಮಹಾದೇವ ಸತ್ತಿಗೇರಿ ಅವರಿಂದ ನಗೆ ಹಬ್ಬ ಕಾರ್ಯಕ್ರಮ ನಡೆಯಿತು.

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.