ರೈತರು ಸರ್ಕಾರದ ಯೋಜನೆ ಸದುಪಯೋಗಪಡಿಸಿಕೊಳ್ಳಲಿ
ಕೃಷಿ ಸಲಕರಣೆಗಳ ಸಂಗ್ರಹ ಗೋದಾಮು ಮಾಡಲು ಮುಂದಾಗಿರುವುದು ಶ್ಲಾಘನೀಯ
Team Udayavani, Jan 27, 2022, 5:50 PM IST
ಗುಳೇದಗುಡ್ಡ: ರೈತರು ಅನೇಕ ನಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಸರ್ಕಾರದ ಯೋಜನೆ ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಕೋಟೆಕಲ್ ಪಿಕೆಪಿಎಸ್ನಿಂದ ಗೋದಾಮು ನಿರ್ಮಾಣ ಮಾಡುತ್ತಿರುವುದು ಶ್ಲಾಘನೀಯ ಎಂದು ಕಾಶಿ ಪೀಠದ ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಹೇಳಿದರು.
ತೋಗುಣಶಿ ಗ್ರಾಮದ ಹತ್ತಿರ ಕೋಟೆಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ 6.97 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಕೃಷಿ ಉತ್ಪನ್ನಗಳ ಶೇಖರಣೆ ಗೋದಾಮು, ಒಣಗಿಸುವ ವೇದಿಕೆ, 60 ಎಂಟಿ ಸಾಮರ್ಥ್ಯದ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್ ನಿರ್ಮಾಣದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಪಿಕೆಪಿಎಸ್ ಕೇಂದ್ರ ಸರ್ಕಾರದ ಯೋಜನೆಯಡಿ ಗೋದಾಮು ಮಾಡುತ್ತಿದ್ದು, ರೈತರು ಇದರ ಲಾಭ ಪಡೆದುಕೊಳ್ಳಬೇಕು. ಹನಮಂತ ಮಾವಿನಮರದ ಕಾರ್ಯಕ್ಷಮತೆಯಿಂದ ಈ ಭಾಗದಲ್ಲಿ ರೈತರಿಗೆ ಅನುಕೂಲವಾಗುವ ಕೃಷಿ ಸಲಕರಣೆಗಳ ಸಂಗ್ರಹ ಗೋದಾಮು ಮಾಡಲು ಮುಂದಾಗಿರುವುದು ಶ್ಲಾಘನೀಯ ಎಂದರು.
ಕೋಟೆಕಲ್- ಗುಳೇದಗುಡ್ಡ ಹೊಳೆಹುಚ್ಚೇಶ್ವರ ಸಂಸ್ಥಾನ ಮಠದ ಹೊಳೆಹುಚ್ಚೇಶ್ವರ ಮಹಾಸ್ವಾಮಿಗಳು, ಅಮರೇಶ್ವರ ಮಠದ ನೀಲಕಂಠ ಶಿವಾಚಾರ್ಯ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ, ಪಿಕೆಪಿಎಸ್ ಅಧ್ಯಕ್ಷ ಮಹಾಗುಂಡಪ್ಪ ಸುಂಕದ, ಉಪಾಧ್ಯಕ್ಷ ಪರಶುರಾಮ ನಾಗಪ್ಪ ಜೋಗಿನ ಆಡಳಿತ ಮಂಡಳಿ ನಿರ್ದೇಶಕರಾದ ಯಲಗುರದಪ್ಪ ತೊಗಲಂಗಿ, ಸಂಗಪ್ಪ ಹಡಪದ ನೀಲಪ್ಪ ಅಬಕಾರಿ, ಬಸಪ್ಪ ಅಣ್ಣಪ್ಪಗೌಡ್ರ ನಾಗಪ್ಪ ಮುರಗೋಡ, ಮೇಘಪ್ಪ ಲಮಾಣಿ, ರಾಘವೇಂದ್ರ ಬಳಿಗೇರ, ಸಂಗಪ್ಪ ಚಟ್ಟೇರ, ಗಂಗಮ್ಮ ಮಂತ್ರಿ, ಯಮನವ್ವ ರಗಟಿ, ಮುಖ್ಯ ಕಾರ್ಯ ನಿರ್ವಾಹಕ ಚಂದ್ರಮೋಹನ ಕಲ್ಯಾಣಿ, ಸಂತೋಷ ನಾಯನೇಗಲಿ, ಹರೀಶ ಗೌಡರ ಸೇರಿದಂತೆ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
MUST WATCH
ಹೊಸ ಸೇರ್ಪಡೆ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್