ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳಲಿ
•ದೈಹಿಕ-ಮಾನಸಿಕ ಸಾಮರ್ಥ್ಯ ಹೊಂದಿ•ಸಮಾಜಮುಖೀ ಬದುಕು ಅಗತ್ಯ: ನಿರಾಣಿ
Team Udayavani, Aug 5, 2019, 9:01 AM IST
ಬೀಳಗಿ: ಸ್ಟುಡೆಂಟ್ ಪೊಲೀಸ್ ಕೆಡೆಟ್ ಹಾಗೂ ಸೈಕಲ್ ವಿತರಣಾ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ ಉದ್ಘಾಟಿಸಿದರು.
ಬೀಳಗಿ: ಕೇವಲ ಅಕ್ಷರ ಜ್ಞಾನ ಹೊಂದುವುದಷ್ಟೇ ಪರಿಪೂರ್ಣ ಶಿಕ್ಷಣವಲ್ಲ. ಸಂಸ್ಕಾರ ಭರಿತ ಸಮಾಜಮುಖೀ ಜೀವನ ನಡೆಸುವ ಕಲೆ ಕರಗತ ಮಾಡಿಕೊಂಡಾಗ ಮಾತ್ರ ವ್ಯಕ್ತಿ ಪರಿಪೂರ್ಣತೆ ಹೊಂದಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ ಹೇಳಿದರು.
ಜಿ.ಎನ್.ನಿರಾಣಿ ಸರಕಾರಿ ಪ್ರೌಢಶಾಲೆ ಸಹಯೋಗದಲ್ಲಿ ಹಮ್ಮಿಕೊಂಡ ಸ್ಟುಡೆಂಟ್ ಪೊಲೀಸ್ ಕೆಡೆಟ್ ಹಾಗೂ ಸೈಕಲ್ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿ ಆರಕ್ಷಕ ಕೆಡೆಟ್ ಕಾರ್ಯಕ್ರಮವು ಶಾಲಾ ಆಧಾರಿತ ಅಭಿವೃದ್ಧಿ ಕಾರ್ಯಕ್ರಮವಾಗಿದೆ. ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಶಿಸ್ತು, ಬದ್ಧತೆ, ಸಂಯಮ, ಉತ್ಸಾಹ ಹಾಗೂ ಕಾನೂನು ಅರಿವು ನೀಡುವ ಅಪರೂಪದ ಕಾರ್ಯಕ್ರಮ ಇದಾಗಿದೆ. ಪೊಲೀಸ್ ಕೆಡೆಟ್ ಕಾರ್ಯಕ್ರಮವು ವಿದ್ಯಾಥಿಗಳಲ್ಲಿ ನಾಯಕತ್ವ ಗುಣ ಬೆಳೆಸಲು ಮತ್ತು ಮುಂದೆ ಪೊಲೀಸ್ ಹಾಗೂ ಸೈನಿಕ ಹುದ್ದೆಗೆ ಸೇರಿಕೊಳ್ಳಲು ಸಹಕಾರಿಯಾಗಲಿದೆ. ನಾಗರೀಕ ಜ್ಞಾನ ಪಡೆಯುವ ಮೂಲಕ, ದೀನ ದುರ್ಬಲರ ಸೇವೆಯ ಮಾನವೀಯ ಮೌಲ್ಯಗಳನ್ನು ವಿದ್ಯಾರ್ಥಿ ಜೀವನದಲ್ಲಿ ತುಂಬಿಕೊಳ್ಳಲು ಪೊಲೀಸ್ ಕೆಡೆಟ್ ಒಂದು ಉತ್ತಮ ಅವಕಾಶವಾಗಿದೆ ಎಂದರು.
ಪಠ್ಯೇತರ ಚಟುವಟಿಕೆಗಳಲ್ಲಿ ದೈಹಿಕ-ಮಾನಸಿಕ ಸಾಮರ್ಥ್ಯ ಬೆಳೆಸುವುದರ ಜತೆಗೆ ಶಿಸ್ತು, ಆರೋಗ್ಯ, ಸ್ವಚ್ಛತೆ ಅರಿವು ಈ ಕಾರ್ಯಕ್ರಮ ಮೂಡಿಸುತ್ತಿರುವುದು ಪ್ರಜೆಗಳಿಗೆ ವರದಾನವಾಗಿದೆ. ಪೊಲೀಸ್ ಕೆಡೆಟ್ನಲ್ಲಿ ಇಲ್ಲಿನ 44 ವಿದ್ಯಾರ್ಥಿಗಳು ಅವಕಾಶ ಪಡೆದಿರುವುದು ಹೆಮ್ಮೆಯ ಸಂಗತಿ ಎಂದರು.
ಶಿಕ್ಷಕ ಎಸ್.ಎಚ್.ಗರಡಿಮನಿ ಪ್ರಾಸ್ತಾವಿಕ ಮಾತನಾಡಿದರು. ಎಸ್ಡಿಎಂಸಿ ಅಧ್ಯಕ್ಷ ಎಚ್.ಬಿ.ಬನ್ನಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬಿಇಒ ಹನುಮಂತಗೌಡ ಮಿರ್ಜಿ, ಸಿಪಿಐ ರವಿಚಂದ್ರ ಡಿ.ಬಿ., ಎಲ್.ಎಸ್.ನಿಂಬಾಳಕರ, ಸಂಗಪ್ಪ ಕಟಗೇರಿ, ಮಲ್ಲಪ್ಪ ಶಂಭೋಜಿ, ಹುಚ್ಚಪ್ಪ ಕೌಲಗಿ, ವಿಠuಲ ಬಾಗೇವಾಡಿ, ರಮೇಶ ಗಾಣಿಗೇರ, ವಿಠuಲ ಗಡ್ಡದ, ಶಿವಪ್ಪ ಮಸೂತಿ, ಸುನಂದಾ ಪಾಟೀಲ ಸೇರಿದಂತೆ ಇತರರು ಇದ್ದರು. ಮುಖ್ಯೋಪಾಧ್ಯಾಯ ಬಿ.ಸಿ.ಹೊಸಗೌಡರ ಸ್ವಾಗತಿಸಿದರು. ಸಿಪಿಒ ಆರ್.ಎಂ.ಬಾಗವಾನ ನಿರೂಪಿಸಿದರು. ಶಿಕ್ಷಕ ಬಿ.ಆರ್.ಮದಕಟ್ಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ