ಅರಣ್ಯ ಉಳಿಸಿ ಬೆಳೆಸುವ ಕಾರ್ಯ ನಡೆಯಲಿ: ಸವದಿ
Team Udayavani, Jul 22, 2020, 8:43 AM IST
ತೇರದಾಳ: ಬೀಜದುಂಡೆಗಳ ಮೂಲಕ ಸಿಡತಾನ ಬಿತ್ತನೆ ಕಾರ್ಯಕ್ರಮವು ತೇರದಾಳ ಮತಕ್ಷೇತ್ರದಲ್ಲಿ ಯುವಕರಿಂದ ನಡೆದಿರುವುದು ಉತ್ತಮ ಕಾರ್ಯವಾಗಿದೆ. ಅರಣ್ಯ ಉಳಿಸಿ ಬೆಳೆಸುವ ಕಾರ್ಯ ಅಗತ್ಯವಾಗಿ ಆಗಬೇಕಿದೆ. ಈ ನಿಟ್ಟಿನಲ್ಲಿ ಯುವಕರ ಕಾರ್ಯ ಶ್ಲಾಘನೀಯವಾಗಿದೆ ಎಂದು ಶಾಸಕ ಸಿದ್ದು ಸವದಿ ಹೇಳಿದರು.
ಹಳಿಂಗಳಿ ಗುಡ್ಡದ ಪ್ರದೇಶದಲ್ಲಿ ಯುವತಂಡವು ಹಮ್ಮಿಕೊಂಡ ಕೋಟಿ ವೃಕ್ಷ ಬೆಳೆಸುವ ಅಭಿಯಾನದಲ್ಲಿ ಬೀಜ ಬಿತ್ತನೆ ಮಾಡುವುದರ ಮೂಲಕ ಪಾಲ್ಕೊಂಡು ಅವರು ಮಾತನಾಡಿದರು. ಮಾನವನ ಜೀವನ ಆರೋಗ್ಯಪೂರ್ಣವಾಗಿರಬೇಕಾದರೆ ನಿಸರ್ಗದ ಸಮತೋಲನ ಕಾಯ್ದುಕೊಳ್ಳಲು ಹಸಿರು ಬೆಳೆಸುವ ಕಾರ್ಯ ನಡೆಯಲೇಬೇಕು. ಮುಂದಿನ ದಿನಗಳಲ್ಲಿ ಪರಿಸರ ಬೆಳವಣಿಗೆಗಾಗಿ ಯುವಕರಿಗೆ ಸಹಕಾರಿಯಾಗಿ ಕಾರ್ಯನಿರ್ವಹಿಸಲಾಗುವುದು. ಪರಿಸರ ಪ್ರಜ್ಞೆ ಎಲ್ಲರಲ್ಲೂ ಜಾಗೃತಗೊಳ್ಳಬೇಕು ಎಂದರು.
ಯುವ ಪರಿಸರವಾದಿ ನಂದು ಗಾಯಕವಾಡ ಮಾತನಾಡಿ, ಹುಬ್ಬಳ್ಳಿಯ ಯುವಕರಿಂದ ಹಮ್ಮಿಕೊಂಡ ಕೋಟಿ ವೃಕ್ಷ ಅಭಿಯಾನವನ್ನು ನಮ್ಮ ಭಾಗದಲ್ಲೂ ಪಸರಿಸಲಾಗುತ್ತಿದೆ. ಹತ್ತು ಲಕ್ಷ ಬೀಜಗಳ ಬಿತ್ತನೆ ಕಾರ್ಯವು ಅಂತಿಮ ಹಂತಕ್ಕೆ ಬಂದಿದೆ. ಪರಿಸರ ರಕ್ಷಣೆಯೆ ಜೀವಿಗಳ ರಕ್ಷಣೆಯಾಗುತ್ತದೆ. ಅದುವೆ ಎಲ್ಲರ ಗುರಿಯಾಗಿರಬೇಕು ಎಂದರು. ಬಿಜೆಪಿ ಮುಖಂಡ ಧರೆಪ್ಪ ಉಳ್ಳಾಗಡ್ಡಿ, ಬಸವರಾಜ ಮನ್ಷಿ, ಈಶ್ವರ ಹೂಗಾರ, ಸಿದ್ದು ಇರಳಿ, ಶ್ರೀಶೈಲ ಕೊಪ್ಪದ, ರವಿ ಕೋರ್ತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
MUST WATCH
ಹೊಸ ಸೇರ್ಪಡೆ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?