ಜ್ಞಾನ ದೇಗುಲಕ್ಕಿಲ್ಲ ಸ್ವಂತ ಕಟ್ಟಡ ಭಾಗ್ಯ


Team Udayavani, Oct 19, 2019, 12:40 PM IST

bk-tdy-1

ಮಹಾಲಿಂಗಪುರ: ಪಟ್ಟಣದ ಏಕೈಕ ಜ್ಞಾನ ದೇಗುಲ ಗ್ರಂಥಾಲಯಕ್ಕೆ ಸ್ವಂತ ಸೂರು ಭಾಗ್ಯವಿಲ್ಲ. ಶಿಥಿಲಾವಸ್ಥೆ ಕಟ್ಟಡದಲ್ಲಿ ಪುಸ್ತಕ ಮತ್ತು ಪತ್ರಿಕೆ ವ್ಯವಸ್ಥಿತ ಜೋಪಾನಕ್ಕಾಗಿ ಶಾಖಾ ಗ್ರಂಥಪಾಲಕರು ಪರದಾಡುವಂತಾಗಿದೆ.

ಅರ್ಧ ಶತಮಾನದ ಗ್ರಂಥಾಲಯ!: ಪಟ್ಟಣದ ಜ್ಞಾನ ದೇಗುಲ ಗ್ರಂಥಾಲಯ ಆರಂಭವಾಗಿ 51 ವರ್ಷಗಳಾಗಿವೆ. ಸ್ವಂತ ಕಟ್ಟಡಕ್ಕೆ ಎಂಟು ವರ್ಷಗಳಿಂದ ನಿರಂತರ ಹೋರಾಟ ಮಾಡುತ್ತಿದ್ದರೂ ಪ್ರಯೋಜನವಾಗಿಲ್ಲ. ಸುಮಾರು 1968ರಲ್ಲಿ ಪುರಸಭೆಯಿಂದ ಹಳೆಯ ಪುರಸಭೆಯ ಪಕ್ಕದ ಕಟ್ಟಡದಲ್ಲಿ ವಾಚನಾಲಯ ಆರಂಭಿಸಲಾಗಿತ್ತು. ಒಂದು ದಶಕಗಳ ಕಾಲ ಪುರಸಭೆಯೇ ಅದರ ನಿರ್ವಹಣೆ ಮಾಡಿತ್ತು. 1978ರಲ್ಲಿ ಅದೇ ವಾಚನಾಲಯವು ಗ್ರಂಥಾಲಯ ಇಲಾಖೆಗೆ ಒಳಪಟ್ಟು ಅದೇ ಸ್ಥಳದಲ್ಲಿ ಸುಸಜ್ಜಿತ ಗ್ರಂಥಾಲಯವಾಗಿತ್ತು.

ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರ: 2009ರಲ್ಲಿ ಹಳೆಯ ಪುರಸಭೆ ಆವರಣದಲ್ಲಿನ ಎಲ್ಲಾ ಕಟ್ಟಡ ನೆಲಸಮಗೊಳಿಸಿ ಪುರಸಭೆಗೆ ನೂತನ ಕಟ್ಟಡ ನಿರ್ಮಿಸಲಾಯಿತು. ಈ ಸಂದರ್ಭದಲ್ಲಿ 40 ವರ್ಷಗಳಿಂದ ಒಂದೇ ಕಟ್ಟಡದಲ್ಲಿದ್ದ ಗ್ರಂಥಾಲಯ ವನ್ನು ಹಳೆ ಸರಕಾರಿ ಆಸ್ಪತ್ರೆಯ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು.

ಅಪಾಯ ಹಂತದಲ್ಲಿ ಕಟ್ಟಡ?: 1958ರಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಡಿ. ಜತ್ತಿ ಉದ್ಘಾಟಿಸಿದ ಸಾರ್ವಜನಿಕ ಸರಕಾರಿ ಆಸ್ಪತ್ರೆ ಕಟ್ಟಡದಲ್ಲೇ, ಕಳೆದ 10 ವರ್ಷಗಳಿಂದ ಗ್ರಂಥಾಲಯ ನಡೆಯುತ್ತಿದೆ. ಈ ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಗೊಂಡಿದೆ. ಆದರೆ, ನಿರಂತರ ಮಳೆ ಪರಿಣಾಮ ಕಟ್ಟಡದ ಮೇಲ್ಛಾವಣಿಯಿಂದ ನೀರು ಸೋರುವುದರಿಂದ ಪುಸ್ತಕಗಳ ರಕ್ಷಣೆಗಾಗಿ ಪುಸ್ತಕ ಪುಸ್ತಕ ಸಂಗ್ರಹ ಕಪಾಟಿನ ಮೇಲೆ ಪ್ಲಾಸ್ಟಿಕ್‌ ತಟ್ಟಿನ ಹೊದಿಕೆ ಹಾಕಲಾಗಿದೆ. ಗ್ರಂಥಾಲಯಕ್ಕೆ ಸ್ವಂತ ಸೂರು ಕಲ್ಪಿಸಿ, ಗ್ರಂಥಾ ಲಯದಲ್ಲಿನ ಅಮೂಲ್ಯ ಗ್ರಂಥಗಳನ್ನು ರಕ್ಷಿಸುವ ಕಾರ್ಯಕ್ಕೆ ಓದುಗರು, ಸಾರ್ವಜನಿಕರು, ಜನಪ್ರತಿನಿಧಿಗಳು ಪ್ರಯತ್ನಿಸಬೇಕಾಗಿದೆ.

ಸಾವಿರಾರು ಪುಸಕ್ತಗಳ ಸಂಗ್ರಹ: ಗ್ರಂಥಾಲಯದಲ್ಲಿ 32 ಸಾವಿರಕ್ಕೂ ಅಧಿಕ ಪುಸ್ತಕಗಳಿವೆ. 12 ದಿನಪತ್ರಿಕೆ, 8 ವಾರ ಪತ್ರಿಕೆ, 7 ಮಾಸ ಪತ್ರಿಕೆ, 2 ತ್ತೈಮಾಸಿಕ ಪತ್ರಿಕೆಗಳು ಬರುತ್ತವೆ. ಗ್ರಂಥಾಲಯ ನಿರ್ವಹಣೆಗಾಗಿ ಓರ್ವ ಶಾಖಾ ಗ್ರಂಥಪಾಲಕರು, ಒಬ್ಬ ಸಹಾಯಕರು ಇದ್ದಾರೆ. ಸಮಯಕ್ಕೆ ತಕ್ಕಂತೆ ಗ್ರಂಥಾಲಯ ಓದುಗರಿಗೆ ಲಭ್ಯವಿದ್ದು ಜ್ಞಾನಾಮೃತ ನೀಡುತ್ತಿದೆ. ಆದರೆ, ಅದಕ್ಕೆ ಒಂದು ಸ್ವಂತ ಸೂರಿಲ್ಲ ಎಂಬುದೇ ವಿಪರ್ಯಾಸದ ಸಂಗತಿ.

ಜಾಗ ಇಕ್ಕಟ್ಟಿನಿಂದಾಗಿ ಕೆಲ ಗ್ರಂಥಗಳನ್ನು ದುರಸ್ತಿಯಿರುವ ಇರುವ ಒಂದೇ ಕೋಣೆಯಲ್ಲಿ ಇಡಲಾಗಿದೆ. ಹೆಚ್ಚಿನ ಗ್ರಂಥಗಳನ್ನು ಒಂದೆ ಕಡೆಗೆ ಇಡಲಾಗಿದೆ. ಕನಿಷ್ಠ 40×60, ಗರಿಷ್ಠ 60×100 ಅಳತೆಯ ಜಾಗ ದೊರೆತರೆ ಕಟ್ಟಡ ನಿರ್ಮಿಸಲು ಇಲಾಖೆ ಸಿದ್ಧªವಿದೆ. ಕಳೆದ ಎಂಟು ವರ್ಷಗಳಿಂದ ಪುರಸಭೆಯಿಂದ ಜಾಗ ಪಡೆಯಲು ಓದುಗರೊಂದಿಗೆ ಹೋರಾಟ ಮಾಡುತ್ತಿದ್ದೇವೆ. ಜಾಗ ನೀಡಲು ಒತ್ತಾಯಿಸಿ ಪುರಸಭೆಗೆ ಹತ್ತಾರು ಬಾರಿ ಮನವಿ ನೀಡಿದ್ದೇವೆ. ಶಾಸಕ ಸಿದ್ದು ಸವದಿ, ಮಾಜಿ ಶಾಸಕಿ ಉಮಾಶ್ರೀ ಅವರಿಗೂ ಕೂಡಾ ವಿನಂತಿಸಿದ್ದೇವೆ. ಇದುವರೆಗೂ ಯಾರಿಂದಲೂ ಸಕಾರಾತ್ಮಕ ಸ್ಪಂದನೆ ಸಿಕ್ಕಿಲ್ಲ. -ಜಿ.ಎಚ್‌. ಪಾಟೀಲ, ಶಾಖಾ ಗ್ರಂಥಪಾಲಕ

 

-ಚಂದ್ರಶೇಖರ ಮೋರೆ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.