ಚಿಕ್ಕ ಕೊಠಡಿಯಲ್ಲೇ ಗ್ರಂಥಾಲಯ


Team Udayavani, Nov 3, 2019, 3:42 PM IST

bk-tdy-1

ಹುನಗುಂದ: ತಾಲೂಕಿನ ಅಮರಾವತಿ ಗ್ರಾಮದ ಸಾರ್ವಜನಿಕ ಗ್ರಂಥಾಲಯ ಸ್ವಂತ ಸೂರಿಲ್ಲದೇ ಗ್ರಾಪಂ ನೀಡಿದ ಗುಬ್ಬಿ ಗೂಡಿನಂತಿರುವ ಚಿಕ್ಕ ಕೊಠಡಿಯಲ್ಲೇ ಕಾರ್ಯ ನಿರ್ವಹಿಸುತ್ತಿದೆ.

2005ರಲ್ಲಿ ಜಿಪಂ ಅನುದಾನದೊಂದಿಗೆ ಅಮರಾವತಿ ಗ್ರಾಪಂ ನೀಡಿದ ಚಿಕ್ಕ ಕೊಠಡಿಯಲ್ಲಿ ಆರಂಭವಾದ ಈ ಗ್ರಂಥಾಲಯಗಳಲ್ಲಿ ಮೂಲ ಸೌಲಭ್ಯಗಳಿಲ್ಲ. ಸರ್ಕಾರ ನೀಡುವ ಅನುದಾನ ಮೂರು ದಿನಪತ್ರಿಕೆಗಳಿಗೆ ಸಾಕಾಗುತ್ತಿಲ್ಲ. ಸರ್ಕಾರ ಪ್ರತಿ ತಿಂಗಳು ಕೇವಲ 400 ರೂ ಮಾತ್ರ ನೀಡುತ್ತಿದೆ. ಅದರಲ್ಲೇ ದಿನಪತ್ರಿಕೆಗಳು ಮತ್ತು ತಿಂಗಳ ಸ್ಪರ್ಧಾ ಮ್ಯಾಗ್‌ಜಿನ್‌ ಕೊಳ್ಳಬೇಕು. ಆದರೆ ಆ ಹಣದಲ್ಲಿ ಮೂರು ದಿನಪತ್ರಿಕೆಗಳೂ ಬರೋದಿಲ್ಲ. ಪ್ರತಿ ತಿಂಗಳ ಈ ಮೂರು ಪತ್ರಿಕೆಗಳ ಬೆಲೆ 450 ರೂ. ಆಗುತ್ತದೆ. ಸರ್ಕಾರ ನೀಡುವ 400 ರೂ. ಹಣಕ್ಕೆ 50 ರೂ ಹೆಚ್ಚಿನ ಹಣವನ್ನು ಗ್ರಂಥಪಾಲಕರೇ ನೀಡುವ ಪರಿಸ್ಥಿತಿ ಇದೆ.

ಅದಕ್ಕಾಗಿ ಸರ್ಕಾರ ನೀಡುವ ಅನುದಾನವನ್ನು 1000ರಿಂದ 1200 ರೂ.ಗೆ ಏರಿಸಬೇಕು. ಅಂದಾಗ ಮಾತ್ರ ಎಲ್ಲ ದಿನಪತ್ರಿಕೆಗಳ ಮತ್ತು ತಿಂಗಳ ಸ್ಪರ್ಧಾ ನಿಯತಕಾಲಿಕೆ ಕೊಳ್ಳಲು ಸಾಧ್ಯವಾಗುತ್ತದೆ ಎನ್ನುವುದು ವಿದ್ಯಾರ್ಥಿಗಳ ಮತ್ತು ಸಾರ್ವಜನಿಕರ ಬೇಡಿಕೆ. ಅಮರಾವತಿ ಸಾರ್ವಜನಿಕ ಗ್ರಂಥಾಲಯದಲ್ಲಿ 3100 ಪುಸ್ತಕಗಳಿದ್ದು ಕಳೆದ ಒಂದು ತಿಂಗಳಲ್ಲಿ ಮತ್ತೆ 2 ಸಾವಿರಕ್ಕೂ ಹೆಚ್ಚು ವಿವಿಧ ಪುಸ್ತಕಗಳು ಗ್ರಂಥಾಲಯಕ್ಕೆ ಬಂದಿವೆ. ಆ ಎಲ್ಲ ಪುಸ್ತಕಗಳನ್ನು ಸುರಕ್ಷಿತವಾಗಿ ಜನರಿಗೆ ಕಾಣುವಂತೆ ಗ್ರಂಥಾಲಯದಲ್ಲಿಡಲು ಸ್ಥಳವಿಲ್ಲದೇ ಗಂಟು ಕಟ್ಟಿ ಒಂದು ಮೂಲೆಯಲ್ಲಿಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಅಲ್ಲದೇ ಈ ಗ್ರಂಥಾಲಯದಲ್ಲಿ ಓದಲು ಸ್ಥಳ ಮತ್ತು ಆಸನಗಳ ವ್ಯವಸ್ಥೆ ಕಡಿಮೆ ಇರುವುದರಿಂದ ನಿಂತುಕೊಂಡೇ ಓದುವ ಸ್ಥಿತಿ ಎದ್ದು ಕಾಣುತ್ತಿದೆ. ಸ್ವಂತ ಸೂರಿಲ್ಲ ಎನ್ನುವುದು ಇಂದು ನಿನ್ನೆಯ ಸಮಸ್ಯೆಯಲ್ಲ. ಅನೇಕ ಬಾರಿ ಸ್ವಂತ ಕಟ್ಟಡಕ್ಕಾಗಿ ಸರ್ಕಾರ ಮತ್ತು ಜನಪ್ರತಿನಿಧಿ ಗಳನ್ನು ಒತ್ತಾಯಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಗುಬ್ಬಿಯ ಗೂಡಿನಷ್ಟು ಇರುವ ಈ ಗ್ರಂಥಾಲಯದಲ್ಲಿ 3000 ಪುಸ್ತಕಗಳನ್ನು ಮಾತ್ರ ಇಡಲು ಸ್ಥಳಾವಕಾಶವಿದೆ. ಉಳಿದ ಪುಸ್ತಕಗಳನ್ನು ಗಂಟು ಕಟ್ಟಿ ಇಡುವುದು ಅನಿವಾರ್ಯವಾಗಿದೆ ಎನ್ನುತ್ತಿದ್ದಾರೆ ಗ್ರಂಥಪಾಲಕರು. ಸರ್ಕಾರ ಅಮರಾವತಿ ಗ್ರಾಮದಲ್ಲಿರುವ ಸಾರ್ವಜನಿಕ ಗ್ರಂಥಾಲಯಕ್ಕೆ ದೊಡ್ಡ ಕಟ್ಟಡ ಒದಗಿಸಿ ಅನುಕೂಲ ಮಾಡಿಕೊಡಬೇಕಿದೆ.

 

-ಮಲ್ಲಿಕಾರ್ಜುನ ಬಂಡರಗಲ್ಲ

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.