ಲಾಕ್‌ಡೌನ್‌ನಿಂದ ರೈತನಿಗೆ ಈರುಳ್ಳಿ ಕಣ್ಣೀರು

ಕೋವಿಡ್ ಹಾವಳಿಯಿಂದ ಈರುಳ್ಳಿ ಮಾರುಕಟ್ಟೆಗೆ ಸಾಗಿಸಲು ಸಾಧ್ಯವಾಗುತ್ತಿಲ್ಲ

Team Udayavani, May 13, 2020, 11:03 AM IST

ಲಾಕ್‌ಡೌನ್‌ನಿಂದ ರೈತನಿಗೆ ಈರುಳ್ಳಿ ಕಣ್ಣೀರು

ಸಾಂದರ್ಭಿಕ ಚಿತ್ರ

ಹುನಗುಂದ: ರೈತನ ಜೇಬು ತುಂಬಿಸಬೇಕಿದ್ದ ಈರುಳ್ಳಿ ಮಹಾಮಾರಿ ಕೋವಿಡ್ ಹೊಡೆತಕ್ಕೆ ಸಿಲುಕಿ ಕಣ್ಣೀರು ಕೋಡಿ ಹರಿಸುವಂತಾಗಿದೆ. ಕಳೆದ 46 ದಿನಗಳಿಂದ ಕೋವಿಡ್ ಹಾವಳಿಯಿಂದ ರೈತ ಕಂಗಾಲಾಗಿದ್ದಾನೆ. ತಾಲೂಕಿನಲ್ಲಿ ಈರುಳ್ಳಿ ಬೆಳೆಗಾರರು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ತಾಲೂಕಿನಲ್ಲಿ 350 ಹೆಕ್ಟೇರ್‌ ಪ್ರದೇಶದಲ್ಲಿ ಈರುಳ್ಳಿ ಬೆಳೆಯಲಾಗಿದೆ. ಬೆಳೆದ ಈರುಳ್ಳಿ ಮಾರುಕಟ್ಟೆಗೆ ತರುವ ಸಮರ್ಪಕ ವ್ಯವಸ್ಥೆಯಿಲ್ಲ. ಮಾರುಕಟ್ಟೆಗೆ ತಂದರೂ ಸೂಕ್ತ ಬೆಲೆ ಸಿಗುತ್ತಿಲ್ಲ ಎಂಬುದು ರೈತನ ಅಳಲು.

ಕ್ವಿಂಟಲ್‌ಗೆ 600 ರೂ.: ಕಳೆದ ಡಿಸೆಂಬರ್‌ನಲ್ಲಿ ಕ್ವಿಂಟಲ್‌ ಈರುಳ್ಳಿಗೆ 7 ರಿಂದ 8 ಸಾವಿರ ರೂ. ದರವಿತ್ತು. ಲಾಕ್‌ಡೌನ್‌ಗಿಂತ ಮುಂಚೆ ಸ್ವಲ್ಪ ಪ್ರಮಾಣದಲ್ಲಿ ಈರುಳ್ಳಿಗೆ ಬೆಲೆಯಿತ್ತು. ಇದೀಗ ಕುಸಿದಿದ್ದು, ಕ್ವಿಂಟಲ್‌ಗೆ 600 ರೂ. ದರವಿದೆ. ಅಕಾಲಿಕ ಮಳೆಯಿಂದ ಅರ್ಧದಷ್ಟು ಈರುಳ್ಳಿ ಕೊಳೆತ ಕಳೆದ 15 ದಿನಗಳಿಂದ ಆಗಾಗ ಸುರಿಯುತ್ತಿರುವ ಮಳೆಯಿಂದ ಕಟಾವು ಹಂತದಲ್ಲಿದ್ದ ಈರುಳ್ಳಿ ಕೊಳೆಯುತ್ತಿದೆ. ಕಟಾವು ಮಾಡುವ ಹಂತದಲ್ಲಿಯೇ ಲಾಕ್‌ಡೌನ್‌ ಜಾರಿಗೊಂಡಿದ್ದು, ಬೆಳೆಗಾರರು ಮನೆಬಿಟ್ಟು ಹೊರಗೆ ಬರದಂತೆ ಮಾಡಲಾಯಿತು. ಇದರಿಂದ ಈರುಳ್ಳಿ ಕಟಾವು ಮಾಡಲು ಪರದಾಡುವಂತಾಯಿತು. ಈರುಳ್ಳಿ ನೆಲದಲ್ಲಿ ಉಳಿದು ಕೊಳೆಯುವ ಸ್ಥಿತಿ ಎದುರಾಗಿತ್ತು. ಲಾಕ್‌ಡೌನ್‌ ಸಡಿಲಿಕೆಯಿಂದ ಬೆಳೆಗಾರರು ಈರುಳ್ಳಿ ಕಟಾವು ಮಾಡಿ ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ, ಸೂಕ್ತ ಬೆಲೆ ಸಿಗದೇ ಆತಂಕಗೊಂಡಿದ್ದಾನೆ.

ತಂತಿ ಬೇಲಿ ನಿರ್ಮಾಣ: ಸದ್ಯ ಈರುಳ್ಳಿ ಕೆಡದಂತೆ ರೈತ ತನ್ನ ಮನೆಯ ಮುಂದಿನ ಖಾಲಿ ಜಾಗದಲ್ಲಿ ಕಟ್ಟಿಗೆ ಮತ್ತು ತಂತಿಯಿಂದ ಬೇಲಿ ನಿರ್ಮಾಣ ಮಾಡಿ ಅದರಲ್ಲಿ ಈರುಳ್ಳಿಯನ್ನು ಕೆಡದಂತೆ ಸಂಸ್ಕರಿಸುತ್ತಿದ್ದಾರೆ.

4 ಎಕರೆ ಜಮೀನಲ್ಲಿ ಈರುಳ್ಳಿ ಬೆಳೆಯಲು 2 ಲಕ್ಷ ಖರ್ಚು: ಬೇಸಿಗೆಯಲ್ಲಿ ಒಳ್ಳೆಯ ದರ ಬರುತ್ತದೆ ಎಂದು ನಂಬಿ 4 ಎಕರೆ ಹೊಲದಲ್ಲಿ ಈರುಳ್ಳಿ ಬಿತ್ತನೆ ಮಾಡಿ ಅದಕ್ಕೆ ಗೊಬ್ಬರ, ಕೀಟನಾಶಕ, ಕಳೆ ತೆಗೆಯಲು ಸುಮಾರು 2 ಲಕ್ಷಕ್ಕೂ ಹೆಚ್ಚು ಹಣ ಖರ್ಚು ಮಾಡಿದ್ದಾನೆ. ಬೆಳೆ ಮಾತ್ರ ಸಮೃದ್ದಿಯಾಗಿ ಬಂದಿದ್ದರೂ ಬೆಳೆಗೆ ತಕ್ಕ ಬೆಲೆಯಿಲ್ಲದೇ ಖರ್ಚು ಮಾಡಿದ ಹಣ ಈ ಬೆಳೆಯಿಂದ ದೊರೆಯುತ್ತದೆ ಎಂಬುದು ಕನಸಿನ ಮಾತಾಗಿದೆ. ರಾಶಿ ರಾಶಿ ಈರುಳ್ಳಿ ಬೆಳೆಯ ಮುಂದೆ ನಿಂತರೇ ಕಣ್ಣೀರು ಕಪಾಳಕ್ಕೆ ಬರುತ್ತವೆ. ಖರ್ಚು ಮಾಡಿದ ಹಣ ಬಂದರೇ ಸಾಕು. ಹೊಲದೊಳಗೆ ಹಾಕಿದ ಈರುಳ್ಳಿ ಕೇಳ್ಳೋರಿಲ್ಲದಂತಾಗಿದೆ ಎಂದು ರೈತ ಗೋಳಾಡುತ್ತಿದ್ದಾನೆ.

ಕೋವಿಡ್ ಸುಳಿಗೆ ಸಿಲುಕಿ 4 ಎಕರೆ ಜಮೀನನಲ್ಲಿ ಸಮೃದ್ದಿಯಾಗಿ ಈರುಳ್ಳಿ ಬೆಳೆದರೂ ಸೂಕ್ತ ಬೆಲೆ ಸಿಗದೇ ಇದ್ದ ಬೆಲೆಗೆ ಮಾರಾಟ ಮಾಡಲು ಕೂಡಾ ಸಾಧ್ಯವಾಗುತ್ತಿಲ್ಲ. ಲಾಕ್‌ಡೌನ್‌ನಿಂದ ಸಾರಿಗೆ ವ್ಯವಸ್ಥೆ ಇಲ್ಲದ ಪರಿಣಾಮ 1800 ಕ್ವಿಂಟಲ್‌ ಈರುಳ್ಳಿ ನೆಲದ ಪಾಲಾಗುತ್ತಿದೆ. -ಭರಮಪ್ಪ ಹೊಸೂರ, ಹುನಗುಂದ ರೈತ

ಈರುಳ್ಳಿ ಬೆಂಬಲ ಕುರಿತು ಸರ್ಕಾರ ನಿರ್ಧರಿಸಿಲ್ಲ. ರೈತರ ಹಿತಕ್ಕಾಗಿ ಸರ್ಕಾರದ ಆದೇಶಕ್ಕೆ ಕಾಯುತ್ತಿದ್ದೇವೆ. -ಬಸವರಾಜ ನಾಗರಾಳ, ತಹಶೀಲ್ದಾರ್‌ ಹುನಗುಂದ

 

-ಮಲ್ಲಿಕಾರ್ಜುನ ಬಂಡರಗಲ್ಲ

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.