ಲೋಕ್ ಅದಾಲತ್: 1529 ಪ್ರಕರಣಗಳಿಗೆ ರಾಜಿ ಸಂಧಾನ
Team Udayavani, Feb 10, 2020, 4:37 PM IST
ಬಾಗಲಕೋಟೆ: ಜಿಲ್ಲಾ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಒಟ್ಟು 3538 ಪ್ರಕರಣಗಳ ಪೈಕಿ 1529 ಪ್ರಕರಣಗಳಿಗೆ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅನಿಲ ಕಟ್ಟಿ ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯ
ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಶಿಬಿರ ಕಾರ್ಯಕ್ರಮದಲ್ಲಿ ಒಟ್ಟು 3538 ಪ್ರಕರಣಗಳಲ್ಲಿ ಪೈಕಿ 997 ವಾಜ್ಯ ಪೂರ್ವ ಪ್ರಕರಣಗಳು ಮತ್ತು 2541 ನ್ಯಾಯಾಲಯದಲ್ಲಿ ವಿಚಾರಣೆಗಾಗಿ ಬಾಕಿ ಇರುವ ಪ್ರಕರಣಗಳನ್ನು ತೆಗೆದುಕೊಳ್ಳಲಾಗಿತ್ತು. ಈ ಪೈಕಿ 452 ವಾಜ್ಯ ಪೂರ್ವ ಹಾಗೂ 1077 ನ್ಯಾಯಾಲಯದಲ್ಲಿ ವಿಚಾರಣೆಗಾಗಿ ಬಾಕಿ ಇರುವ ಪ್ರಕರಣಗಳು ಸೇರಿ ಒಟ್ಟು 1529 ಪ್ರಕರಣಗಳನ್ನು ಇತ್ಯರ್ಥ ಪಡಿಸಿ ರಾಜಿ ಸಂಧಾನ ಮಾಡಿಸಲಾಯಿತು. ಈ ಎಲ್ಲ ಪ್ರಕರಣಗಳಿಗೆ ಅಂದಾಜು 6.20 ಕೋಟಿ ರೂ.ಗಳಿಗೆ ರಾಜಿ ಮಾಡಿಸಲಾಯಿತು.
ಬ್ಯಾಂಕ್ ಮರುಪಾವತಿಗೆ ಸಂಬಂಧಿಸಿದಂತೆ 736 ಪ್ರಕರಣಗಳ ಪೈಕಿ 147, ಕ್ರಿಮಿನಲ್ ಸಂಯುಕ್ತ ಅಪರಾಧಕ್ಕೆ ಸಂಬಂಧಿಸಿದಂತೆ 160 ಪ್ರಕರಣಗಳ ಪೈಕಿ 146, ವಿದ್ಯುತ್ ಬಿಲ್ ಗಳಿಗೆ ಸಂಬಂಧಿಸಿದ 82 ಪ್ರಕರಣಗಳ ಪೈಕಿ 71 ಹಾಗೂ ನೀರಿನ ಬಿಲ್ ಗಳಿಗೆ ಸಂಬಂಧಿಸಿದ 283 ಪ್ರಕರಣಗಳ ಪೈಕಿ 169 ಪ್ರಕರಣ ಇತ್ಯರ್ಥ ಪಡಿಸಲಾಯಿತು.
ಲೋಕ ಅದಾಲತ್ ಶಿಬಿರದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೇಮಲತಾ ಹುಲ್ಲೂರ, 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಂತೋಷ ಸಿ.ಬಿ, ಕೌಟುಂಬಿಕ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶೆ ಶೀಲಾ ಎನ್., ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ಪ್ರಕಾಶ ವಿ., 1ನೇ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶ ಎಂ.ಎ.ಹೆಚ್. ಮೊಘಲಾನಿ, 2ನೇ ಹೆಚ್ಚುವರಿಹಿರಿಯ ದಿವಾಣಿ ನ್ಯಾಯಾಧೀಶ ಆರ್.ಎಲ್. ಹೊನೊಲೆ, ಪ್ರಧಾನ ದಿವಾಣಿ ನ್ಯಾಯಾಧೀಶಪದ್ಮಾಕರ ವನಕುದ್ರಿ, ಹೆಚ್ಚುವರಿ ದಿವಾಣಿ ನ್ಯಾಯಾಧೀಶ ಮಹೇಶ ಚಂದ್ರಕಾಂತ ಸೇರಿದಂತೆ ಕಕ್ಷಿದಾರರು, ವಕೀಲರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ