ಲೋಕಸಭಾ ಚುನಾವಣೆ: 4 ನಾಮಪತ್ರ ಸಲ್ಲಿಕೆ


Team Udayavani, Apr 4, 2019, 5:12 PM IST

Udayavani Kannada Newspaper

ಬಾಗಲಕೋಟೆ: ಪ್ರಸ್ತುತ ಲೋಕಸಭಾ ಚುನಾವಣೆಗೆ ಬುಧವಾರ ಒಟ್ಟು ನಾಲ್ಕು ನಾಮಪತ್ರ ಸಲ್ಲಿಕೆಯಾಗಿವೆ. ರಿಪಬ್ಲಿಕ್‌ ಪಾರ್ಟಿ ಆಪ್‌ ಇಂಡಿಯಾ ಪಕ್ಷದಿಂದ ಪರಶುರಾಮ ನೀಲನಾಯಕ, ಪಕ್ಷೇತರದಿಂದ ಶಿವರಾಜಕುಮಾರ ತಳವಾರ, ಬಹುಜನ ಮುಕ್ತಿ ಪಾರ್ಟಿ ಪಕ್ಷದಿಂದ ರಾಜೇಂದ್ರ ಆಡಗಲ್ಲ, ಬಹುಜನ ಸಮಾಜ ಪಾರ್ಟಿ ಪಕ್ಷದಿಂದ ಮಹಮ್ಮದಹುಸೇನ ಮುಜಾವರ ನಾಮಪತ್ರ ಸಲ್ಲಿಸಿದ್ದಾರೆ.

ಇಲ್ಲಿಯವರೆಗೆ ಒಟ್ಟು 18 ನಾಮಪತ್ರ ಸಲ್ಲಿಕೆಯಾಗಿದ್ದು, ಪಕ್ಷೇತರದಿಂದ ರವಿ ಪಡಸಲಗಿ 4 ನಾಮಪತ್ರ, ಕಾಂಗ್ರೆಸ್‌ ಅಭ್ಯರ್ಥಿ ವೀಣಾ ಕಾಶಪ್ಪನವರ 3 ನಾಮಪತ್ರ, ಉತ್ತಮ ಪ್ರಜಾಕೀಯ ಪಾರ್ಟಿಯಿಂದ ಎಂ.ಶಶಿಕುಮಾರ 2, ಹಿಂದೂಸ್ತಾನ ಜನತಾ ಪಾರ್ಟಿಯಿಂದ ರಾಮನಗೌಡ ಬಾಳವಾಡ 2, ಬಿಜೆಪಿಯಿಂದ ಪಿ.ಸಿ.ಗದ್ದಿಗೌಡರ, ಸೆಕ್ಯುಲರ್‌ ಡೆಮೊಕ್ರೆಟಿಲ್‌ ಕಾಂಗ್ರೆಸ್‌ನಿಂದ ಬಸವನಗೌಡ ಮೇಟಿ, ರೈತ ಭಾರತ ಪಾರ್ಟಿಯಿಂದ ಮುತ್ತಪ್ಪ ಹಿರೇಕುಂಬಿ, ರಿಪಬ್ಲಿಕ್‌ ಪಾರ್ಟಿ ಆಪ್‌ ಇಂಡಿಯಾದಿಂದ ಪರಶುರಾಮ ನೀಲನಾಯಕ, ಪಕ್ಷೇತರದಿಂದ ಶಿವರಾಜಕುಮಾರ ತಳವಾರ, ಬಹುಜನ ಮುಕ್ತಿ ಪಾರ್ಟಿಯಿಂದ ರಾಜೇಂದ್ರ ಆಡಗಲ್ಲ, ಬಹುಜನ ಸಮಾಜ ಪಾರ್ಟಿಯಿಂದ ಮಹಮ್ಮದಹುಸೇನ ಮುಜಾವರ ಅವರಿಂದ ತಲಾ ಒಂದು ನಾಮಪತ್ರ ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆರ್‌.ರಾಮಚಂದ್ರನ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಾಘಟಬಂಧನ್‌ ಅಡ್ರೆಸ್‌ ಇಲ್ಲದಂತಾಗಲಿದೆ: ಗಾಣಗೇರ ಬೀಳಗಿ: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರಕಾರದ ಆಡಳಿತ ವೈಖರಿ ರಾಜ್ಯದ ಜನತೆಗೆ ಬೇಸರ ತಂದಿದೆ. ಅಭಿವೃದ್ಧಿ ಮಾಡದೆ ಆಂತರಿಕ ಕಲಹದಲ್ಲಿ ಮೈತ್ರಿ ಸರಕಾರ ಬ್ಯೂಸಿಯಾಗಿದೆ. ದೇಶದಲ್ಲಿ ಜನ್ಮತಾಳಿದ ಮಹಾಘಟಬಂಧನ ಲೋಕಸಭೆ ಚುನಾವಣೆ ನಂತರ ಅಡ್ರೆಸ್‌ ಇಲ್ಲದಂತಾಗಲಿದೆ ಎಂದು ಹೈಕೋರ್ಟ್‌ ನ್ಯಾಯವಾದಿ ಪ್ರಕಾಶ ಗಾಣಗೇರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಸಮರ್ಥ ಆಡಳಿತ ನಡೆಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದ್ದಾರೆ. ಮೋದಿ ಆಡಳಿತ ಇಡೀ ವಿಶ್ವದ ಗಮನ ಸೆಳೆದಿದೆ. ಬಲಿಷ್ಠ ಭಾರತ ಕಟ್ಟಲು ದಣಿವರಿಯದ ನಾಯಕ ನರೇಂದ್ರ ಮೋದಿ ಮತ್ತೂಮ್ಮೆ ದೇಶದ ಚುಕ್ಕಾಣಿ ಹಿಡಿಯುವುದು ಅಗತ್ಯವಿದೆ.

ದೇಶದ ಸಮಗ್ರ ಅಭಿವೃದ್ಧಿಯ ದೂರದೃಷ್ಟಿ ಹೊಂದಿದ ಹಾಗೂ ಭಯೋತ್ಪಾದನೆಯ ಹುಟ್ಟಡಗಿಸುವ ಸಮರ್ಥ ನಾಯಕತ್ವದ ಗುಣ ಹೊಂದಿರುವ ಮೋದಿಯವರನ್ನು ಮತ್ತೆ ಈ ದೇಶದ ಪ್ರಧಾನಿಯನ್ನಾಗಿಸಲು ದೇಶವಾಸಿಗಳು ಪಕ್ಷಾತೀತ, ಜಾತ್ಯತೀತವಾಗಿ ಬೆಂಬಲಿಸುವುದು ಅವಶ್ಯ. ಬಿಜೆಪಿ 300ಕ್ಕೂ
ಹೆಚ್ಚು ಸ್ಥಾನ ಗಳಿಸುವ ಮೂಲಕ ಮೋದಿ ಸರಕಾರ ಪುನಃ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಾಗಲಕೋಟೆ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಪಿ.ಸಿ.ಗದ್ದಿಗೌಡರು ಈಗಾಗಲೇ ಹ್ಯಾಟ್ರಿಕ್‌ ಜಯ ಸಾಧಿ ಸಿದ್ದು, ನಾಲ್ಕನೇ ಬಾರಿಗೆ ಕೂಡ ಸಂಸದರಾಗಿ ಆಯ್ಕೆಯಾಗುವುದು ಖಚಿತ. ಸೌಮ್ಯ ಸ್ವಭಾವ, ಸರಳ ಸಜ್ಜನಿಕೆಯ ಜಾತ್ಯತೀತ ವ್ಯಕ್ತಿತ್ವದ ಗದ್ದಿಗೌಡರು ಶುದ್ಧಹಸ್ತರು. ಹಾಗೂ ತತ್ವ, ಸಿದ್ಧಾಂತದ ರಾಜಕಾರಣಿಯಾಗಿದ್ದಾರೆ. ರಾಜಕಾರಣಕ್ಕೆ ಇಂತವರ ಅವಶ್ಯಕತೆ ಬಹಳಷ್ಟಿದೆ ಎಂದು ಹೇಳಿದರು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.