Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

ಮತದಾರರ ಗಮನ ಸೆಳೆಯುತ್ತಿರುವ ಮತಗಟ್ಟೆಗಳು

Team Udayavani, May 6, 2024, 6:47 PM IST

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

ರಬಕವಿ-ಬನಹಟ್ಟಿ: ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಬಂದು ಮತದಾನ ಮಾಡುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಪ್ರತಿಯೊಂದು ಕ್ಷೇತ್ರದಲ್ಲಿ ವಿಶೇಷ ಮತಗಟ್ಟೆಗಳನ್ನು ನಿರ್ಮಾಣ ಮಾಡಿದೆ.

ಈ ಮತಗಟ್ಟೆಗಳನ್ನು ಸುಂದರವಾದ ಚಿತ್ರಕಲೆಯ ಮೂಲಕ ಆಕರ್ಷಕವಾಗಿ ಮಾಡುವಲ್ಲಿ ಆಯಾ ಕ್ಷೇತ್ರದ ಚಿತ್ರಕಲಾ ಪಾತ್ರ ಬಹಳಷ್ಟು ಮಹತ್ವದ್ದಾಗಿದೆ. ರಬಕವಿ ಬನಹಟ್ಟಿ ತಾಲ್ಲೂಕಿನಲ್ಲಿ ಬೇರೆ ಬೇರೆ ಶಾಲೆಗಳ ಚಿತ್ರಕಲಾ ಶಿಕ್ಷಕರು ಹತ್ತಾರು ದಿನಗಳ ಕಾಲ ಶ್ರಮ ವಹಿಸಿ ಮತಗಟ್ಟೆಗಳನ್ನು ಅಲಂಕಾರಗೊಳಿಸಿದ್ದಾರೆ.

ತಾಲ್ಲೂಕಿನ ರಾಮಪುರದ ಮತಗಟ್ಟೆ ಸಂಖ್ಯೆ 109 ಅತ್ಯಂತ ವಿಶೇಷವಾಗಿದ್ದು, ಇಲ್ಲಿಯ ಚಿತ್ರಕಲಾ ಶಿಕ್ಷಕರಾದ ಐ.ಬಿ.ತೇರಣಿಯವರು ವರ್ಲಿಕ್ ಕಲೆಯ ಮೂಲಕ ಮತಗಟ್ಟೆಗೆ ವಿಶೇಷ ಮೆರಗನ್ನು ತಂದುಕೊಟ್ಟಿದ್ದಾರೆ. ಕಂದು ಬಣ್ಣದ ಮೇಲೆ ಬಿಳಿ ಬಣ್ಣದಿಂದ ಹತ್ತಾರು ಕಲೆಗಳನ್ನು ಬಿಡಿಸಿದ್ದಾರೆ. ಜೊತೆಗೆ ನೀವು ಮತದಾನ ಮಾಡಿ, ಇತರರನ್ನೂ ಮತದಾನ ಮಾಡುವಂತೆ ಪ್ರೋತ್ಸಾಹಿಸಿ, ಒಂದು ಕ್ಯಾಂಡಲ್ ನಿಮ್ಮ ಒಂದು ರಾತ್ರಿ ಬೆಳಗುತ್ತದೆ, ನಿಮ್ಮ ಮತ ನಿಮ್ಮ ಜೀವನ ಬೆಳಗುತ್ತದೆ, ಚುನಾವಣೆಯ ಪ್ರಜಾಪ್ರಭುತ್ವದ ಹಬ್ಬ ಬನ್ನಿ ಮತದಾನ ಮಾಡಿ ಎಂಬ ಘೋಷಣೆಗಳನ್ನು ಕೂಡಾ ಬರೆಯಲಾಗಿದೆ.

ಮತಗಟ್ಟೆ ಸಂಖ್ಯೆ 111 ನ್ನು ಸಾಂಪ್ರದಾಯಿಕವಾಗಿ ನಿರ್ಮಾಣ ಮಾಡಲಾಗಿದೆ. ರಬಕವಿ ಬನಹಟ್ಟಿಯಲ್ಲಿ ನೇಕಾರಿಕೆಯ ಉದ್ಯೋಗ ಇರುವುದರಿಂದ ಇಲ್ಲಿ ಕೈಮಗ್ಗ ನೇಕಾರರ ಹಾಗೂ ನೇಕಾರಿಕೆಗೆ ಅಗತ್ಯವಾಗಿರುವ ಪೂರಕ ಕೆಲಸಗಳ ಚಿತ್ರಗಳನ್ನು ಬಿಡಿಸಲಾಗಿದೆ. ಪಟ್ಟದಕಲ್ಲು ದೇವಸ್ಥಾನವನ್ನು ಚಿತ್ರವನ್ನು ಬಿಡಿಸಿದ್ದು ಇದು ಅತ್ಯಾಕರ್ಷಕವಾಗಿದೆ.

ಕಂದು, ನೀಲಿ ಮತ್ತು ಬಿಳಿಯ ಬಣ್ಣಗಳಿಂದ ಆಕರ್ಷಕವಾದ ಚಿತ್ರಗಳನ್ನು ಚಿತ್ರಕಲಾ ಶಿಕ್ಷಕರಾದ ಈರಣ್ಣ ತೇರಣಿ, ವಿ.ಬಿ. ಕಡಲಾಸ್ಕರ್, ಎ.ಸಿ.ಬಾಗಲಕೋಟ, ಲಕ್ಷ್ಮಣ ಬಡಿಗೇರ, ರಾಜು ಪಾತ್ರೋಟ, ಮಂಜುಳಾ ಇಳಕಲ್, ಶೋಭಾ ಮಿಳ್ಳಿ, ಪಿ.ಬಿ.ಮನವಾಡ ಮತ್ತು ಪಡಸಲಗಿ ಬಿಡಿಸಿದ್ದಾರೆ. ಇಂಥ ಮತಗಟ್ಟೆಗಳನ್ನು ನಿರ್ಮಾಣ ಮಾಡಿದ ಶಿಕ್ಷಕರು ಅಭಿನಂದನಾರ್ಹರು.

ಮತಗಟ್ಟೆಗಳನ್ನು ಸುಂದರವಾದ ಚಿತ್ರಕಲೆಯ ಮೂಲಕ ಅಲಂಕರಿಸಲಾಗಿದೆ. ಇದು ನಮಗೆ ಹೆಚ್ಚಿನ ಖುಷಿಯನ್ನು ತಂದಿದೆ. ಇದು ಕೂಡಾ ದೇಶ ಸೇವೆಯಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಮತದಾನ ಮಾಡಿದರೆ ನಮ್ಮ ಸೇವೆ ಸಾರ್ಥಕವಾಗುತ್ತದೆ ಎನ್ನುತ್ತಾರೆ ರಬಕವಿಯ ಚಿತ್ರಕಲಾ ಶಿಕ್ಷಕ ಈರಣ್ಣ ತೇರಣಿ.

ರಬಕವಿ ಬನಹಟ್ಟಿ ನಗರ ವ್ಯಾಪ್ತಿಯಲ್ಲಿ ಚಿತ್ರಕಲಾ ಶಿಕ್ಷಕರು ಸುಂದರವಾದ ಕಲೆಯ ಮೂಲಕ ಮತಗಟ್ಟೆಗಳನ್ನು ಆಕರ್ಷಕವಾಗಿ ನಿರ್ಮಾಣ ಮಾಡಿದ್ದು, ಇಲ್ಲಿ ಹೆಚ್ಚಿನ ಮತದಾನವಾಗಲಿದೆ. ಮತದಾರರು ದಿನನಿತ್ಯ ಇವುಗಳನ್ನು ಬಂದು ನೋಡಿ ಹೋಗುತ್ತಿದ್ದಾರೆ.
-ಗಿರೀಶ ಸ್ವಾದಿ, ತಹಶೀಲ್ದಾರ್ ರಬಕವಿ ಬನಹಟ್ಟಿ

-ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

3-mahalingapur

Mahalingpur: ತೆರಬಂಡಿ ಸ್ಪರ್ಧೆಯ ಹೋರಿ ದಾಖಲೆಯ 10.10 ಲಕ್ಷಕ್ಕೆ ಖರೀದಿಸಿದ ರೈತ

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

Online ವಂಚಕರಿದ್ದಾರೆ ಹುಷಾರ್‌..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ

Online ವಂಚಕರಿದ್ದಾರೆ ಹುಷಾರ್‌..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

2-hunsur

Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.