Lokapur: ಸಂವಿಧಾನ ಸ್ವಸ್ಥ ಸಮಾಜ ನಿರ್ಮಾಣಕ್ಕಿರುವ ನಿಘಂಟು
Team Udayavani, Nov 28, 2023, 11:22 AM IST
ಲೋಕಾಪುರ: ಸಂವಿಧಾನ ಎಂಬುದು ಸ್ವಸ್ಥ ಮತ್ತು ಸಮೃದ್ಧ ಸಮಾಜ ನಿರ್ಮಾಣ ಮಾಡಲು ಕಟ್ಟಿಕೊಟ್ಟಿರುವ ನಿಯಮಾವಳಿಗಳ ನಿಘಂಟು ಇದ್ದಂತೆ ಎಂದು ಬಸವೇಶ್ವರ ಅಂತಾರಾಷ್ಟ್ರೀಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಪರಶುರಾಮ
ವನಸಿ ಹೇಳಿದರು.
ಪಟ್ಟಣದ ಬಸವೇಶ್ವರ ಅಂತಾರಾಷ್ಟ್ರೀಯ ಪಬ್ಲಿಕ್ ಶಾಲೆಯ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ಎಂಬುದು ಪ್ರಜಾಪ್ರಭುತ್ವ ವ್ಯವಸ್ಥೆ ಒಳಪಟ್ಟ ನಾಗರಿಕರು
ಅನುಸರಿಸಬೇಕಾದ ಸೂಚನಾ ಪಟ್ಟಿಯಾಗಿದೆ.
ದೇಶದಲ್ಲಿ ಸಮಾನತೆ, ಸಹಕಾರ, ಭಾತೃತ್ವ, ಸ್ವಾತಂತ್ರ್ಯ ಮತ್ತು ಸೌಹಾರ್ದತೆ ಭಾವನೆ ಸರ್ವರಿಗೂ ಸಮನಾಗಿ ದೊರೆಯಬೇಕು ಎಂಬ ಆಶಯದಿಂದ ಡಾ| ಬಿ.ಆರ್. ಅಂಬೇಡ್ಕರ ಅವರ ಸತತ ಪರಿಶ್ರಮದಿಂದ ಸಂವಿಧಾನ ರಚನೆಯಾಯಿತು. ಈ ಸಂವಿಧಾನದ
ನಿಯಮಗಳಿಗೆ ಅನುಗುಣವಾಗಿ ಎಲ್ಲರೂ ಈ ಮೇಲಿನ ಎಲ್ಲ ಅಂಶ ಪಾಲಿಸಿಕೊಂಡು ಸಂವಿಧಾನದ ಮಹತ್ವ ಅರಿಯಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.
ಸಮಾಜ ವಿಜ್ಞಾನ ಶಿಕ್ಷಕರಕಾದ ಪವನ ಪಾಟೀಲ ಮಾತನಾಡಿ ಸಂವಿಧಾನವು ಏಕೆ ರಚನೆಯಾಯಿತು, ಹೇಗೆ ರಚನೆಯಾಯಿತು,
ಮತ್ತು ಸಂವಿಧಾನವು ಎಲ್ಲೆಲ್ಲಿ ತನ್ನ ಛಾಪು ಮೂಡಿಸಿದೆ ಎಂಬ ಬಗ್ಗೆ ಮಕ್ಕಳಿಗೆ ಅವರ ದೈನಂದಿನ ಚಟುವಟಿಕೆಗಳನ್ನು ಸಂವಿಧಾನದೊಂದಿಗೆ ಹೋಲಿಕೆ ಮಾಡುತ್ತಾ ಅರ್ಥೈಸಿದರು. ಇದೇ ಸಂದರ್ಭದಲ್ಲಿ ನಮ್ಮ ದೇಶದಲ್ಲಿ ಕಂಡಬರುವ ವಿಜ್ಞಾನ, ತಂತ್ರಜ್ಞಾನ, ಕ್ರೀಡೆ ಮತ್ತು ಸಾಂಸ್ಕೃತಿಕತೆ ಎಲ್ಲರೂ ಸಂವಿಧಾನದ ಒಂದು ಭಾಗವೆಂದು ತಿಳಿಸಿಕೊಟ್ಟರು. ಅಂಬೇಡ್ಕರ ಎಂಬುವವರು ಕೇವಲ ಒಬ್ಬ ವ್ಯಕ್ತಿಯಲ್ಲ ಒಂದು ಶಕ್ತಿ ಎಂದು ಮಕ್ಕಳಿಗೆ ಮನವರಿಕೆ ಮಾಡಿದರು.
ಶಿಕ್ಷಕ ಪೀರಮಹಾಸಿದ್ಧ ಚೌಗಲೆ ಮಾತನಾಡಿದರು. ಇದೇ ಸಂದರ್ಭದಲ್ಲಿ ಸಿಕ್ ಗುರು ಗುರುನಾನಕ್ ಅವರ ಜಯಂತಿ ಕೂಡಾ
ಆಚರಿಸಲಾಯಿತು. ಗುರುನಾನಕರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು. ಗುರುನಾನಕರ್ ಆದರ್ಶ ಗುಣಗಳನ್ನು ಅಳವಡಿಸಿಕೊಳ್ಳಲು ಶಿಕ್ಷಕಿ ನಹಿದಾ ಜಾಗೀರದಾರ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಶಿಕ್ಷಕಿ ವಿಜಯಲಕ್ಷ್ಮೀ ವನಸಿ ಸಂವಿಧಾನದ ಪೂರ್ವ ಪೀಠಿಕೆ ಬೋಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು