ಕೋವಿಡ್ ಲಾಕ್‌ಡೌನ್‌ನಿಂದ ದರ್ಜಿಗಳ ಬದುಕು ಅತಂತ್ರ

ಲೋಕಾಪುರದಲ್ಲಿ 200 ದರ್ಜಿ ಕುಟುಂಬಗಳು ಉದ್ಯೋಗವಿಲ್ಲದೇ ಪರದಾಟ -ಸೌಲಭ್ಯ ನೀಡಲು ಸರ್ಕಾರಕ್ಕೆ ಆಗ್ರಹ

Team Udayavani, May 8, 2020, 5:07 PM IST

08-May-23

ಸಾಂದರ್ಭಿಕ ಚಿತ್ರ

ಲೋಕಾಪುರ: ಲಾಕ್‌ಡೌನ್‌ನಿಂದ ಗ್ರಾಮದ ಟೇಲರ್‌ (ದರ್ಜಿ) ಕುಟುಂಬಗಳು ಅತಂತ್ರ ಪರಿಸ್ಥಿಯನ್ನು ಎದುರಿಸುವಂತಾಗಿದೆ. ಪಾರಂಪರಿಕವಾಗಿ ಟೇಲರ್‌ ವೃತ್ತಿಯನ್ನು ಅವಲಂಬಿಸಿರುವ ಸಿಂಪಿಗ, ಕ್ಷತ್ರಿಯ, ಮುಸ್ಲಿಂ ಸಮಾಜದವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಲೋಕಾಪುರ ಗ್ರಾಮ ಹಾಗೂ ಸುತ್ತಲಿನ ಸುಮಾರು 200ಕ್ಕೂ ಹೆಚ್ಚು ಕುಟುಂಬ ಬಟ್ಟೆ ಹೊಲಿಯುವುದನ್ನೇ ಕಾಯಕ ಮಾಡಿಕೊಂಡಿದ್ದು, ಅವರಲ್ಲಿ ಬಹುತೇಕರು ತುತ್ತು ಅನ್ನಕ್ಕೂ ಪರದಾಡುವಂತಾಗಿದೆ.

ಗ್ರಾಮದಲ್ಲಿ ಕೆಲವರು ಬಾಡಿಗೆ ಕಟ್ಟಡದಲ್ಲಿ ಬಟ್ಟೆ ಅಂಗಡಿಗಳ ಮುಂದೆ ಹೊಲಿಗೆ ಕಾಯಕದಲ್ಲಿ ನಿರತರಾಗಿದ್ದರು. ಮಹಿಳೆಯರು ಮನೆಯಲ್ಲಿಯೆ ಹೊಲಿಗೆ ಮೂಲಕ ಮನೆಯ ಖರ್ಚು ನಿಭಾಯಿಸುತ್ತಿದ್ದರು. ಈಗ ಮನೆಯಿಂದ ಹೊರಗೆ ಬರದ ಸ್ಥಿತಿಯಿಂದಾಗಿ ಅಂಗಡಿ, ಮನೆ ಬಾಡಿಗೆ ಕಟ್ಟುವುದು ಹೇಗೆ ಎಂಬ ಚಿಂತೆಯಲ್ಲಿದ್ದಾರೆ. ಇನ್ನು ಹಳೆಯ ಬಟ್ಟೆಗಳನ್ನು ದುರಸ್ತಿ ಮಾಡಿಕೊಡುವ ಟೇಲರ್‌ ಗಳು ಜೀವನ ಸಾಗಿಸುವುದು ಕಷ್ಟವಾಗಿದೆ.

ಯುಗಾದಿ, ಬಸವ ಜಯಂತಿ, ರಂಜಾನ್‌ ಹಬ್ಬಗಳ ಆಚರಣೆ, ಮದುವೆ, ಶಾಲಾ ಮಕ್ಕಳ ಸಮವಸ್ತ್ರ, ಮತ್ತಿತರ ಶುಭ ಸಮಾರಂಭಗಳು ನಡೆಯುತ್ತಿದ್ದವು. ಈ ಅವಧಿಯಲ್ಲಿ ಬಟ್ಟೆ ಹೊಲಿಗೆಗೆ ಹೆಚ್ಚಿನ ಬೇಡಿಕೆ ಇರುತ್ತಿತ್ತು. ಈಗ ಯಾರು ಬರುತ್ತಿಲ್ಲ. ಹೀಗಾಗಿ ದುಡಿಮೆಯೇ ಇಲ್ಲದಂತಾಗಿದೆ. ಟೇಲರಿಂಗ್‌ಗೆ ಬೇಕಾಗುವ ದಾರ, ಕ್ಯಾನ್ವಾಸ್‌, ಬಟನ್‌, ಜಿಪ್‌, ಮತ್ತಿತರ ಸಾಮಗ್ರಿಗಳ ಅಂಗಡಿ ಮುಚ್ಚಿವೆ. ಇದು ವಹಿವಾಟಿಗೆ ತೊಂದರೆಯಾಗಿದೆ. ಸಂಘಟಿತ ವಲಯದ ಕಾರ್ಮಿಕರಿಗೆ ನೀಡುವ ಸೌಲಭ್ಯವನ್ನು ಸರ್ಕಾರ ನಮಗೂ ನೀಡಲಿ ಎಂಬುದು ಟೇಲರ್‌ಗಳ ಆಗ್ರಹವಾಗಿದೆ.

ಸುಮಾರು 18 ವರ್ಷಗಳಿಂದ ಟೇಲರ್‌ ವೃತ್ತಿ ಮಾಡುತ್ತಿದ್ದೇನೆ. ಈ ವೃತ್ತಿಯನ್ನೆ ಅವಲಂಬಿಸಿ ಅಂಗಡಿ, ಮನೆಗಳ ಬಾಡಿಗೆ ಕಟ್ಟುವುದು ಮತ್ತು ಜೀವನ ನಡೆಸುವುದು ಬಹಳ ಕಷ್ಟವಾಗಿದೆ. ಸಂಘಟಿತ ವಲಯದ ಕಾರ್ಮಿಕರಿಗೆ ನೀಡುವ ಸೌಲಭ್ಯವನ್ನು ಸರ್ಕಾರ ನಮಗೂ ನೀಡಬೇಕು.
ವಿಜಯಕುಮಾರ ಹಿರೇಮಠ,
ಟೇಲರ್‌

ಬಹಳ ಜನರು ಟೇಲರಿಂಗ್‌ ಉದ್ಯೋಗ ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಲಾಕ್‌ಡೌನ್‌ ಜಾರಿಯಾದಾಗಿನಿಂದ ಇಲ್ಲಿಯವರೆಗೆ ಯಾರೂ ಬಟ್ಟೆ ಹೊಲಿಸಲು ಬಂದಿಲ್ಲ. ಜೀವನ ನಿರ್ವಹಣೆಯೇ ಕಷ್ಟವಾಗಿದೆ. ಸರ್ಕಾರ ಟೇಲರಿಂಗ್‌ ಉದ್ಯೋಗದವರಿಗೆ ಸೂಕ್ತ ಪರಿಹಾರ ಘೋಷಣೆ ಮಾಡಿ ನೆರವಿಗೆ ಧಾವಿಸಬೇಕು.
ರಾಮಚಂದ್ರ ಘಾಟಗೆ,
ಅರುಣ ಟೇಲರ್‌ ಮಾಲೀಕ

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.