ಬಸವ’ರಾಜ’ನ ಮೇಲೆ ಬಸವನಾಡಿನ ನಿರೀಕ್ಷೆ

ಪೂರ್ಣಗೊಳ್ಳಬೇಕಿದೆ ಯುಕೆಪಿ­! ಸಮಗ್ರ ಅಭಿವೃದ್ಧಿಗೆ ಬೇಕಿದೆ ಸಂಕಲ್ಪ­! ದೂರಾಗಲಿ ನೇಕಾರರ ಸಂಕಷ್ಟ

Team Udayavani, Jul 29, 2021, 2:27 PM IST

dfs

ಬಾಗಲಕೋಟೆ: ಬಸವರಾಜ ಬೊಮ್ಮಾಯಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿದ್ದು, ಈ ಭಾಗದ ಪ್ರಮುಖ ಸಮಸ್ಯೆಗಳಿಗೆ ಮುಕ್ತಿ ದೊರೆಯಲಿದೆ ಎಂಬ ಆಶಾಭಾವ ವ್ಯಕ್ತವಾಗುತ್ತಿದೆ. ಅದರಲ್ಲೂ ಬಸವನಾಡು ಬಾಗಲಕೋಟೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಾಡಿನ ನೂತನ ದೊರೆ ಸಂಕಲ್ಪ ತೋರುತ್ತಾರೆಂಬ ವಿಶ್ವಾಸದ ಮಾತುಗಳೂ ಕೇಳಿ ಬರುತ್ತಿವೆ.

ಹೌದು. ಬಸವರಾಜ ಬೊಮ್ಮಾಯಿ ಅವರೇ ಈ ರಾಜ್ಯದ ಜಲ ಸಂಪನ್ಮೂಲ ಸಚಿವರಾಗಿದ್ದ ವೇಳೆ ಕೃಷ್ಣಾ ನ್ಯಾಯಾಧಿಕರಣದ ಅಂತಿಮ ತೀರ್ಪು ಹೊರ ಬಿದ್ದಿತ್ತು. ಆಲಮಟ್ಟಿ ಜಲಾಶಯವನ್ನು ಈಗಿರುವ 519.60 ಮೀಟರ್‌ನಿಂದ 524.256 ಮೀಟರ್‌ಗೆ ಎತ್ತರಿಸುವ ಜತೆಗೆ ಇನ್ನೂ ಹೆಚ್ಚುವರಿಯಾಗಿ 100 ಟಿಎಂಸಿ ಅಡಿ ನೀರು ಸಂಗ್ರಹಿಸಲು ಅಧಿಕೃತ ಅನುಮೋದನೆ ದೊರೆತು ಅದಾಗಲೇ 11 ವರ್ಷ ಕಳೆದಿವೆ. ಆದರೆ ಈವರೆಗೂ ಯೋಜನೆ ಪೂರ್ಣಗೊಳಿಸುವ ಸಂಕಲ್ಪವಾಗಿಲ್ಲ. ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ಸಮಗ್ರವಾದ ಆಳಗಲ ಅರಿತಿರುವ ಬೊಮ್ಮಾಯಿ ಅವರೇ ಇದೀಗ ಸಿಎಂ ಆಗಿದ್ದು, ಜಲಾಶಯ ಎತ್ತರಿಸುವ, ಮುಳುಗಡೆಯಾಗುವ 22 ಗ್ರಾಮಗಳ ಸ್ಥಳಾಂತರ ಹಾಗೂ ಸ್ವಾಧೀನಗೊಳ್ಳಲಿರುವ 1.36 ಲಕ್ಷ ಹೆಕ್ಟೇರ್‌ ಭೂಮಿಯ ರೈತರಿಗೆ ಹೆಚ್ಚಿನ ಪರಿಹಾರಧನ ದೊರೆಯಲಿದೆ ಎಂಬ ನಿರೀಕ್ಷೆ ಗಟ್ಟಿಗೊಂಡಿವೆ.

ಪ್ರವಾಸಿ ತಾಣಗಳಿಗೆ ಬರಲಿ ಶುಕ್ರದೆಸೆ:

ವಿಶ್ವದ ನಾನಾ ಭಗಕ್ಕೂ ಪರಿಚಿತವಾಗಿರುವ ಬಾದಾಮಿ ಚಾಲುಕ್ಯರ ಕಾಲದ ಪ್ರವಾಸಿ ತಾಣಗಳ ಸಮಗ್ರ ಅಭಿವೃದ್ಧಿಯ ಮಾತುಗಳು ಘೋಷಣೆಗೆ ಸಿಮೀತವಾಗಿವೆ ಹೊರತು, ಕೃತಿಯಲ್ಲಿ ಆಗುತ್ತಿಲ್ಲ. ಪಟ್ಟದಕಲ್ಲ, ಬಾದಾಮಿ, ಐಹೊಳೆ ಹಾಗೂ ಬಸವಣ್ಣನವರ ಐಕ್ಯ ಸ್ಥಳ ಕೂಡಲಸಂಗಮವನ್ನು ಅಕ್ಷರಧಾಮ ಮಾದರಿ ಸಮಗ್ರ ಅಭಿವೃದ್ಧಿ ಹೀಗೆ ಹಲವು ಪ್ರವಾಸಿ ತಾಣಗಳು ಅಭಿವೃದ್ಧಿಗೊಂಡರೆ ಅದು ಆರ್ಥಿಕತೆ ಬಲವರ್ಧನೆಗೂ ಕಾರಣವಾಗಲಿದೆ. ಜಿಲ್ಲೆಯ ನೇಕಾರರು, ಹಲವು ಸಮಸ್ಯೆ ಎದುರಿಸುತ್ತಿದ್ದಾರೆ. ಅವರ ಸಮಸ್ಯೆಗಳೂ ಮುಕ್ತಿಗೊಂಡು, ಪಾರಂಪರಿಕೆ ನೇಕಾರಿಗೆ ಇನ್ನಷ್ಟು ಗಟ್ಟಿಗೊಳ್ಳಲಿ ಎಂಬುದು ಹಲವರ ಒತ್ತಾಸೆ. ಇದೆಲ್ಲದರ ಮಧ್ಯೆ ಮುಳುಗಡೆಯ ಬಾಗಲಕೋಟೆ ಜಿಲ್ಲೆ ಸಮಗ್ರ ನೀರಾವರಿ, ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದೆ. ಕೈಗಾರಿಕೆ ಕ್ಷೇತ್ರದಲ್ಲಂತೂ ಅತ್ಯಂತ ಹಿಂದುಳಿದಿದೆ. ಸ್ಥಳೀಯವಾಗಿ ಹಲವು ರೀತಿಯ ಕೈಗಾರಿಕೆಗಳು ಸ್ಥಾಪನೆಗೊಂಡರೆ, ಸ್ಥಳೀಯ ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯಲಿದೆ.

ಒಟ್ಟಾರೆ ಬಸವರಾಜ ಬೊಮ್ಮಾಯಿ ಅವರು ನೂತನ ಸಿಎಂ ಆಗಿದ್ದಕ್ಕೆ ಈ ಭಾಗದ ಹಲವು ಭರವಸೆಗಳು ಚಿಗುರೊಡೆದಿವೆ. ಮುಖ್ಯವಾಗಿ ಯುಕೆಪಿ ಯೋಜನೆ ಪೂರ್ಣಗೊಳ್ಳಬೇಕು. ಪ್ರವಾಸಿ ತಾಣಗಳು ಅಭಿವೃದ್ಧಿಯಾಗಬೇಕೆಂಬುದು ಈ ಭಾಗದ ಜನರ ಬಹು ದಿನಗಳ ಬೇಡಿಕೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.