![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಕಳಪೆ ಗುಣಮಟ್ಟದ ಕಾಮಗಾರಿ: ಆಕ್ರೋಶ
Team Udayavani, May 15, 2019, 11:23 AM IST
![bagalkote-tdy-4..](https://www.udayavani.com/wp-content/uploads/2019/05/bagalkote-tdy-4..-3-620x202.jpg)
ಹುನಗುಂದ: ತಾಲೂಕಿನ ಅಡಿಹಾಳ ಪುನರ್ವಸತಿ ಕೇಂದ್ರದಲ್ಲಿ ನಡೆಯುತ್ತಿರುವ ಕಾಮಗಾರಿ.
ಹುನಗುಂದ: ತಾಲೂಕಿನ ಅಡಿಹಾಳ ಗ್ರಾಮದ ಪುನರ ವಸತಿ ಕೇಂದ್ರದಲ್ಲಿ ನಡೆಯುತ್ತಿರುವ ಚರಂಡಿ ರಸ್ತೆ ಸೇರಿದಂತೆ ಅನೇಕ ಕಾಮಗಾರಿ ಕಳಪೆ ಮಟ್ಟದಿಂದ ಕೂಡಿದ್ದು, ಪುನರ್ವಸತಿ ಮತ್ತು ಪುನರ್ನಿರ್ಮಾಣದ ಆಯುಕ್ತರು ಸಮಗ್ರ ಪರಿಶೀಲನೆ ನಡೆಸಬೇಕು ಎಂದು ಸಂತ್ರಸ್ತರಾದ ಅಡಿಹಾಳ ಗ್ರಾಮದ ರಾಜು ಚಲವಾದಿ, ಬಸವರಾಜ ಚಲವಾದಿ ಹಾಗೂ ಅಮರೇಶ ಅಡಿಹಾಳ ಒತ್ತಾಯಿಸಿದರು.
ಸಂತ್ರಸ್ತ ಅಮರೇಶ ಅಡಿಹಾಳ ಮಾತನಾಡಿ, 2009ರಲ್ಲಿ ಜಲಪ್ರಳಯ ಮತ್ತು ನಾರಾಯಣಪುರ ಜಲಾಶಯದ ಹಿನ್ನೀರಿನಿಂದ ಬಾಧಿತಗೊಂಡು ಅಡಿಹಾಳ ಗ್ರಾಮದ ಜನರು ಮನೆ ಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಅಂತಹ ಸಂತ್ರಸ್ತರಿಗೆ ಸರ್ಕಾರ ಕೋಟಿ ಕೋಟಿ ಅನುದಾನ ಬಿಡುಗಡೆಗೊಳಿಸಿ ಸುಭದ್ರವಾದ ಪುರ ವಸತಿ ಮತ್ತು ಪುನರ ನಿರ್ಮಾಣ ಕಾರ್ಯಕ್ಕೆ ಮುಂದಾದರೆ, ಇಂಜನಿಯರ್ಗಳ ಬೇಜವಾಬ್ದಾರಿ ಮತ್ತು ಗುತ್ತಿಗೆದಾರರು ಹಣ ಕೊಳ್ಳೆ ಹೊಡೆಯುವ ಉದ್ಧೇಶದಿಂದ ಕಳಪೆ ಮಟ್ಟದ ಕಾಮಗಾರಿ ಮಾಡಿ ಸರ್ಕಾರದ ಕಣ್ಣಿಗೆ ಮಣ್ಣೆರೆಚುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಅಡಿಹಾಳ ಪುನರ್ವಸತಿ ಕೇಂದ್ರದಲ್ಲಿ ಸುಮಾರು 6ಕಿ.ಮೀ. ಚರಂಡಿ ಕಾಮಗಾರಿ ಮೂರು ಜನ ಗುತ್ತಿಗೆದಾರರಿಗೆ ಹಂಚಿಕೆ ಮಾಡಲಾಗಿದೆ. ಅದರಲ್ಲಿ 2 ಕೋಟಿ ರೂ. ಅನುದಾನ ಚರಂಡಿ ಕಾಮಗಾರಿ ಕಳಪೆ ಮಟ್ಟದ್ದಾಗಿದೆ. ಕಾಮಗಾರಿಗೆ ಬಳಸಿದ ಸಾಮಗ್ರಿಗಳು ಕಳಪೆಯಿಂದ ಕೂಡಿದೆ ಎಂದು ಸಂತ್ರಸ್ತರು ಆರೋಪಿಸಿದರು.
ಕಳಪೆ ಮಟ್ಟದಿಂದ ಕೂಡಿದ ಚರಂಡಿ ಕಾಮಗಾರಿಯನ್ನು ಯುಕೆಪಿಯ ಎಇಇ ಡಿ.ಸಿ. ಮಸಿ ಭೇಟಿ ನೀಡಿ ವೀಕ್ಷಿಸಿ ಸ್ವಲ್ಪ ಪ್ರಮಾಣದಲ್ಲಿ ಕಳಪೆಯಾಗಿದೆ. ಸರಿಯಾದ ಕ್ಯೂರಿಂಗ್ ಆಗದಿರುವುದೇ ಇದಕ್ಕೆ ಮುಖ್ಯ ಕಾರಣ ಎಂದು ಸ್ಥಳದಲ್ಲಿಯೇ ಗುತ್ತಿಗೆದಾರರನ್ನು ತರಾಟೆಗೆ ತಗೆದುಕೊಂಡಂತೆ ನಟಿಸಿದರು. ಇದರಿಂದ ಗ್ರಾಮಸ್ಥರು ಆಕ್ರೋಶಗೊಂಡರು. ಚರಂಡಿ ಕಾಮಗಾರಿಗೆ ಬಳಸಿದ ಸಾಮಗ್ರಿಯ ಬಗ್ಗೆ ಗ್ರಾಮಸ್ಥರು ಎಇಇ ಇಂಜಿನಿಯರ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಲು ಚಡಪಡಿಸಿದರು. ನಂತರ ಕಾಮಗಾರಿಯನ್ನು ಪುನರ ವಸತಿ ಮತ್ತು ಪುನರ ನಿರ್ಮಾಣದ ಆಯುಕ್ತರ ಬಂದು ತನಿಖೆ ಮಾಡುವರೆಗೂ ಕಾಮಗಾರಿ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ](https://www.udayavani.com/wp-content/uploads/2024/07/bagalakote-150x90.jpg)
Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ
![ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ](https://www.udayavani.com/wp-content/uploads/2024/07/rabakavi-1-150x84.jpg)
ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ
![Fetoside](https://www.udayavani.com/wp-content/uploads/2024/07/Fetoside-150x90.jpg)
Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!
![Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ](https://www.udayavani.com/wp-content/uploads/2024/07/sandalwood-150x77.jpg)
Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ
![4-](https://www.udayavani.com/wp-content/uploads/2024/07/4--150x90.jpg)
Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.