ಶರಣ ಸಾಹಿತ್ಯವನ್ನು ರಕ್ಷಣೆ ಮಾಡಿದವರಲ್ಲಿ ಮಾಚಿದೇವರು ಒಬ್ಬರು: ಶಾಸಕ ಸಿದ್ದು ಸವದಿ
Team Udayavani, Feb 1, 2022, 6:44 PM IST
ರಬಕವಿ–ಬನಹಟ್ಟಿ: ಹನ್ನೆರಡನೆ ಶತಮಾನದಲ್ಲಿ ಅತ್ಯಂತ ಕ್ರಿಯಾಶೀಲ ವ್ಯಕ್ತಿತ್ವ ಹೊಂದಿದ ಮಡಿವಾಳ ಮಾಚಿದೇವರು ಬಿಜ್ಜಳ ಸೈನಿಕರ ಜೊತೆಗೆ ಹೋರಾಡಿ ಶರಣ ಸಾಹಿತ್ಯವನ್ನು ರಚನೆ ಮಾಡಿದವರಲ್ಲಿ ಪ್ರಮುಖರು ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.
ಅವರು ಮಂಗಳವಾರ ಸ್ಥಳೀಯ ತಹಶೀಲ್ದಾರ್ ಕಾರ್ಯಾಲಯದಲ್ಲಿ ಮಡಿವಾಳ ಮಾಚಿದೇವರ ಜಯಂತ್ಯುತ್ಸವದ ನಿಮಿತ್ತವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಾಚಿದೇವರ ವಚನಗಳಲ್ಲಿ ಸರಳ ಶೈಲಿ ಮತ್ತು ಪ್ರೌಢ ಶೈಲಿಗಳಲ್ಲಿ ಇದ್ದು, ಸಾಮಾಜಿಕ ಸಮಸ್ಯೆ, ವೈಚಾರಿಕ ನಿಯಮಗಳನ್ನು ಎತ್ತಿ ತೋರುಸುತ್ತವೆ. ಮಡಿವಾಳ ಮಾಚಿದೇವ ಶರಣರ ಬಟ್ಟೆಗಳನ್ನು ಶುಚಿಗೊಳಿಸುವ ಕಾಯಕ ಮಾಡುತ್ತಿದ್ದರು. ಅವರ ತತ್ವ ಸಿದ್ಧಾಂತಗಳನ್ನು ಇಂದಿನ ಎಲ್ಲ ಜನಾಂಗದವರು ತಮ್ಮಲ್ಲಿ ಅಳವಡಿಕೊಳ್ಳುವುದರ ಜೊತೆಗೆ ಸಮಾಜದ ಮಕ್ಕಳಿಗೆ ಸೂಕ್ತ ವಿದ್ಯಾಭ್ಯಾಸದಲ್ಲಿ ತೊಡಗಿಸಬೇಕು ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಸಂಜಯ ಇಂಗಳೆ, ಉಪ ತಹಶೀಲ್ದಾರ್ ಬಸವರಾಜ ಬಿಜ್ಜರಗಿ, ಎಸ್.ಎಲ್.ಕಾಗಿಯವರ, ಚಂದ್ರಶೇಖರ ಹೊಸಮನಿ, ಪ್ರಕಾಶ ಮಠಪತಿ, ಚನಬಸಯ್ಯ ಮಠಪತಿ, ಮಡಿವಾಳಪ್ಪ ಮಡಿವಾಳರ, ಈರಪ್ಪ ಮಡಿವಾಳರ, ಪರಮಾನಂದ ಪರೀಟ, ಶೇಕರ ಪರೀಟ, ಶಿವಾನಂದ ಮಮದಾಪುರ, ಸಂಜು ಪರೀಟ, ರಾಚಪ್ಪ ಪರೀಟ ಸಂಗಮೇಶ ಮಡಿವಾಳರ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ
ಬಿಜೆಪಿ ಶಾಸಕ ಯತ್ನಾಳ ಶುಗರ್ ಫ್ಯಾಕ್ಟ್ರಿ ಹೆಂಗ್ ಕಟ್ಟಿದ್ರು: ಶಿವಾನಂದ ಪಾಟೀಲ
Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
MUST WATCH
ಹೊಸ ಸೇರ್ಪಡೆ
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?
Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್