ಬಿಜೆಪಿ ಮಡಿಲಿಗೆ ಮಹಾಲಿಂಗಪುರ ಪುರಸಭೆ ಅಧ್ಯಕ್ಷ ಸ್ಥಾನ

ಬಸವರಾಜ ಹಿಟ್ಟಿನಮಠ ಅಧ್ಯಕ್ಷರಾಗಿ ಆಯ್ಕೆ

Team Udayavani, Jul 15, 2022, 2:47 PM IST

1-ssdsdsdd

ಮಹಾಲಿಂಗಪುರ: ಭಾರಿ ಕುತೂಹಲಕ್ಕೆ ಕಾರಣವಾಗಿದ್ದ ಮಹಾಲಿಂಗಪುರ ಪುರಸಭೆಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ಬಸವರಾಜ ಹಿಟ್ಟಿನಮಠ ಆಯ್ಕೆಯಾಗಿದ್ದಾರೆ.

ಶುಕ್ರವಾರ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿಯಿಂದ ಬಸವರಾಜ ಹಿಟ್ಟಿನಮಠ, ಕಾಂಗ್ರೆಸ್ ನಿಂದ ಜಾವೇದ್ ಬಾಗವಾನ್ ಮತ್ತು ಯಲ್ಲನಗೌಡ ಪಾಟೀಲ್ ನಾಮಪತ್ರ ಸಲ್ಲಿಸಿದ್ದರು. ಮಧ್ಯಾಹ್ನ 1 ಗಂಟೆಗೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ನಿಂದ ನಾಮಪತ್ರ ಸಲ್ಲಿಸಿದ್ದ ಯಲ್ಲನಗೌಡ ಪಾಟೀಲ್ ಕೊನೆಯ ಕ್ಷಣದಲ್ಲಿ ಕಣದಿಂದ ಹಿಂದೆ ಸರಿದರು. ಅಂತಿಮವಾಗಿ ಬಿಜೆಪಿಯಿಂದ ಬಸವರಾಜ ಹಿಟ್ಟಿನಮಠ, ಕಾಂಗ್ರೆಸ್ ನಿಂದ ಜಾವೇದ್ ಬಾಗವಾನ ಸ್ಪರ್ಧೆಯಲ್ಲಿ ಉಳಿದರು.

ನಂತರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಬಿಜೆಪಿಯ 10 ಸದಸ್ಯರು, ಶಾಸಕ ಸಿದ್ದು ಸವದಿ, ಸಂಸದ ಪಿ.ಸಿ.ಗದ್ದಿಗೌಡರ ಹಾಗೂ ಪಕ್ಷೇತರ ಅಭ್ಯರ್ಥಿ ಸಜನಸಾಬ ಪೆಂಡಾರಿ ಅವರು ಬಿಜೆಪಿ ಅಭ್ಯರ್ಥಿ ಪರ ಮತ ಚಲಾಯಿಸಿದ್ದರಿಂದ ಬಿಜೆಪಿಯ 9ನೇ ವಾರ್ಡಿನ ಸದಸ್ಯ ಬಸವರಾಜ ಹಿಟ್ಟಿನಮಠ ಅವರು ಮಹಾಲಿಂಗಪುರ ಪುರಸಭೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು.

ಕಾಂಗ್ರೆಸ್ ನ 9 ಸದಸ್ಯರು, ಬಿಜೆಪಿಯ ಮೂರು ಜನ ಬಂಡಾಯ ಸದಸ್ಯೆಯರು ಸೇರಿ 12 ಮತಗಳನ್ನು ಪಡೆದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಾವೇದ್ ಬಾಗವಾನ್ ಅವರು ಕೇವಲ 1 ಮತದ ಅಂತರದಲ್ಲಿ ಪರಾಭವಗೊಂಡರು. ರಬಕವಿ-ಬನಹಟ್ಟಿ ತಹಶೀಲ್ದಾರ ಎಸ್.ಬಿ.ಇಂಗಳೆ ಅವರು ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.

ಬಿಗಿಬಂದೋಬಸ್ತ್

ಕಳೆದ ಬಾರಿಯ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ನಡೆದಂತೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಮಖಂಡಿ ಡಿವೈಎಸ್ ಪಿ ಪಾಂಡುರಂಗಯ್ಯ, ಬನಹಟ್ಟಿ ಸಿಪಿಆಯ್ ಈರಯ್ಯ ಮಠಪತಿ, ತೇರದಾಳ ಪಿಎಸ್ ಆಯ್ ರವಿ ಪವಾರ, ಮಹಾಲಿಂಗಪುರ ಠಾಣಾಧಿಕಾರಿ ವಿಜಯ ಕಾಂಬಳೆ ಹಾಗೂ 200ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯು ಬಿಗಿಬಂದೋಬಸ್ತ್ ಒದಗಿಸಿದ್ದರು.

ಕಾರ್ಯಕರ್ತರ ಸಂಭ್ರಮ

ಭಾರಿ ಪೈಪೋಟಿ ನಡುವೆ ಪಕ್ಷೇತರ ಅಭ್ಯರ್ಥಿ ಕೃಪೆಯಿಂದ ಪುರಸಭೆ ಅಧ್ಯಕ್ಷ ಸ್ಥಾನವು ಬಿಜೆಪಿ ಮಡಿಲಿಗೆ ಬರುತ್ತಿದ್ದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಪಟ್ಟಣದ ವಿವಿಧ ವೃತ್ತಗಳಲ್ಲಿ ಪಟಾಕಿ ಸಿಡಿಸಿ, ಕೇಸರಿ ಬಣ್ಣ ಎರಚಿಕೊಂಡು ಸಂಭ್ರಮಿಸಿದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.