ಮಹಾಲಿಂಗಪುರ: ಯಥಾಸ್ಥಿತಿಯಲ್ಲಿ ಘಟಪ್ರಭಾ ನೀರಿನ ಮಟ್ಟ


Team Udayavani, Aug 9, 2020, 1:03 PM IST

ಮಹಾಲಿಂಗಪುರ: ಯಥಾಸ್ಥಿತಿಯಲ್ಲಿ ಘಟಪ್ರಭಾ ನೀರಿನ ಮಟ್ಟ

ಮಹಾಲಿಂಗಪುರ: ಮಹಾರಾಷ್ಟ್ರದಲ್ಲಿ ಮಳೆಯಿಂದಾಗಿ ಘಟಪ್ರಭಾ ನದಿಗೆ ಬರುತ್ತಿರುವ ನೀರಿನ ಪ್ರಮಾಣವು ಸತತ ಮೂರನೇ ದಿನವು ಯಥಾಸ್ಥಿತಿಯಲ್ಲಿ ಮುಂದುವರಿದಿದ್ದು, ನೀರಿನ ಪ್ರಮಾಣದಲ್ಲಿ ಇಳಿಕೆಯಾಗಿಲ್ಲ. ಕಳೆದ ನಾಲ್ಕು ದಿನಗಳಿಂದ ಢವಳೇಶ್ವರ-ಢವಳೇಶ್ವರ, ನಂದಗಾಂವ- ಅವರಾದಿ, ಅಕ್ಕಿಮರಡಿ-ಮಿರ್ಜಿ ಸೇತುವೆಗಳು ಜಲಾವೃತಗೊಂಡು ಬೆಳಗಾವಿ ಜಿಲ್ಲೆಯ ಗಡಿಗ್ರಾಮಗಳ ಸಂಪರ್ಕ ಕಡಿತವಾಗಿದೆ. ಇದರಿಂದಾಗಿ ಪ್ರಯಾಣಿಕರು ಮುಧೋಳ ಮತ್ತು ಗೋಕಾಕ ಮಾರ್ಗವಾಗಿ ಸುತ್ತುವರಿದು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹೊಲಗದ್ದೆಗಳು ಜಲಾವೃತ: ಘಟಪ್ರಭಾ ನದಿಯು ಉಕ್ಕಿ ಹರಿಯುತ್ತಿರುವ ಕಾರಣ ಸೇತುವೆಗಳನ್ನು ದಾಟಿ ನೂರಾರು ಎಕರೆ ಹೊಲಗದ್ದೆಗಳಿಗೆ ನೀರು ನುಗ್ಗಿದೆ. ಇದರಿಂದಾಗಿ ಕೆಲಗ್ರಾಮಗಳಲ್ಲಿ ರೈತರ ಅಳವಡಿಸಿದ್ದ ಪಂಪಸೆಟ್‌ಗಳು ಸಹ ನೀರಲ್ಲಿ ಕೊಚ್ಚಿಕೊಂಡು ಹೋಗಿ, ರೈತರು ಸಂಕಟ ಪಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಧುಪದಾಳ ಜಲಾಶಯಕ್ಕೆ ಸುಮಾರು 24480 ಕ್ಯೂಸೆಕ್‌ ನೀರಿನ ಒಳಹರಿವು ಇದ್ದು, ಅದರಲ್ಲಿ 23625 ಕ್ಯೂಸೆಕ್‌ ನೀರನ್ನು ಘಟಪ್ರಭಾ ನದಿಗೆ ಮತ್ತು 855 ಕ್ಯೂಸೆಕ್‌ ನೀರನ್ನು ಘಟಪ್ರಭಾ ಎಡದಂಡೆ ಕಾಲುವೆ ಹರಿಸಲಾಗುತ್ತಿದೆ. ಹೆಚ್ಚಿನ ಪ್ರವಾಹ ಉಂಟಾಗಬಹುದ ಆತಂಕ ನದಿ ಪಾತ್ರದ ಗ್ರಾಮಗಳ ಜನರನ್ನು ಕಾಡುತ್ತಿದೆ.

ಅಧಿಕಾರಿಗಳ ಭೇಟಿ: ನಂದಗಾಂವ, ಢವಳೇಶ್ವರ ಮತ್ತು ಮಾರಾಪೂರ ಗ್ರಾಮಗಳ ಪ್ರವಾಹ ಸ್ಥಳಕ್ಕೆ ರಬಕವಿ-ಬನಹಟ್ಟಿ ತಾಲೂಕು ಕಂದಾಯ ಇಲಾಖೆ ಅಧಿಕಾರಿ ಬಿ.ಆರ್‌.ತಾಳಿಕೋಟಿ, ನೊಡಲ್‌ ಅಧಿಕಾರಿಗಳಾದ ಬಿ.ಆರ್‌.ಕಮತಗಿ, ಡಿ.ಬಿ. ಪಠಾಣ, ಬಸಪ್ಪ, ಮಹಾಲಿಂಗಪುರ ಠಾಣಾ ಧಿಕಾರಿ ಜಿ.ಎಸ್‌. ಉಪ್ಪಾರ, ಗ್ರಾಮಲೆಕ್ಕಾ ಧಿಕಾರಿ ತ್ರಿವೇಣಿ ದೇವರಮನಿ, ಗ್ರಾಪಂ ಪಿಡಿಒ ಭೇಟಿ ನೀಡಿದ್ದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.