ಮಹಾಲಿಂಗಪುರ ಬಂದ್ ಯಶಸ್ವಿ : 126 ದಿನದ ತಾಲೂಕು ಹೋರಾಟಕ್ಕೆ ಅಭೂತಪೂರ್ವ ಬೆಂಬಲ
Team Udayavani, Aug 17, 2022, 3:09 PM IST
ಮಹಾಲಿಂಗಪುರ : ಪಟ್ಟಣವನ್ನು ತಾಲೂಕು ಕೇಂದ್ರ ಮಾಡಬೇಕೆಂದು ಒತ್ತಾಯಿಸಿ ಸಾಮೂಹಿಕ ನಾಯಕತ್ವದಡಿ ಬುಧವಾರ ಹಮ್ಮಿಕೊಂಡಿದ್ದ ಮಹಾಲಿಂಗಪುರ ಬಂದ್ ಯಶಸ್ವಿಯಾಗಿದೆ.
ಬುಧವಾರ ಮುಂಜಾನೆ 10 ಗಂಟೆಗೆ ಪಟ್ಟಣದ ಬಸವವೃತ್ತದಲ್ಲಿ ತಾಲೂಕು ಹೋರಾಟ ಸಮೀತಿ ಸದಸ್ಯರು ಹಾಗೂ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಮುಖಂಡರು, ಹೋರಾಟಗಾರರು,ರೈತರು ಭಾಗವಹಿಸಿ ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಮಹಾಲಿಂಗಪುರ ಬಂದ್ ಹೋರಾಟದ ಬೃಹತ್ ಮೇರವಣಿಗೆಗೆ ಚಾಲನೆ ನೀಡಲಾಯಿತು.
ನಂತರ ಡಬಲ್ ರಸ್ತೆ, ವಿವೇಕ ವೃತ್ತ, ನಡಚೌಕಿ, ಜವಳಿ ಬಜಾರ, ಗಾಂಧಿ ವೃತ್ತ ಮಾರ್ಗವಾಗಿ ಚನ್ನಮ್ಮ ವೃತ್ತದಲ್ಲಿನ ತಾಲೂಕು ಹೋರಾಟದ ವೇದಿಕೆವರೆಗೆ ಬೃಹತ್ ಮೇರವಣಿಗೆ ನಡೆಸಲಾಯಿತು.
ಸಂಗಾನಟ್ಟಿಯ ಹಲಗೆಮೇಳ, ಮಹಾಲಿಂಗಪುರದ ಡೊಳ್ಳಿನ ಕಲಾವಿದರು ಪ್ರತಿಭಟನಾ ಮೇರವಣಿಗೆಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದರು. ಮಹಾಲಿಂಗಪುರ ಬಂದ್ ನಿಮಿತ್ಯ ಪಟ್ಟಣದಲ್ಲಿನ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಬೆಂಬಲ ಸೂಚಿಸಿದರು.
ಬಸ್ ಸಂಚಾರ ಸಂಪೂರ್ಣ ಬಂದ್ : ಮುಂಜಾಗ್ರತಾ ಕ್ರಮವಾಗಿ ಮಹಾಲಿಂಗಪುರ ಬಂದ್ ಹಿನ್ನೆಲೆಯಲ್ಲಿ ಬಸ್ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿತ್ತು. ಬೃಹತ್ ಮೆರವಣಿಗೆಯಲ್ಲಿ ಭಾಗವಹಿಸಿದ್ದ ವಿವಿಧ ಗ್ರಾಮಗಳ ಮುಖಂಡರು, ವಿವಿಧ ಪಕ್ಷಗಳ ಮುಖಂಡರು ಭಾಗವಹಿಸಿ ಇದು ಪಕ್ಷಾತೀತ ಮತ್ತು ಜಾತ್ಯಾತೀತವಾಗಿ ನಡೆಯುತ್ತಿರುವ ಹೋರಾಟವಾಗಿದೆ. ಸರಕಾರ ಈ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿ ಆದಷ್ಟು ಬೇಗ ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕೆಂದು ಒತ್ತಾಯಿಸಿದರು. ತಾಲೂಕು ಹೋರಾಟದ 126 ನೇ ದಿನದ ಹೋರಾಟದ ನಿಮಿತ್ಯ ಹಮ್ಮಿಕೊಂಡ ಮಹಾಲಿಂಗಪುರ ಬಂದ್ ಪ್ರತಿಭಟನೆಯಲ್ಲಿ ಪಕ್ಷಾತೀತವಾಗಿ ಎಲ್ಲಾ ಪಕ್ಷಗಳ ಮುಖಂಡರು, ವಿವಿಧ ಗ್ರಾಮಗಳ ಮುಖಂಡರು, ಹೋರಾಟಗಾರರು, ಕಲಾವಿದರು, ರೈತ ಸಂಘಟನೆಗಳ ಮುಖಂಡರು ಸೇರಿದಂತೆ ಸಾವಿರಾರು ಜನರು ಭಾಗವಹಿಸಿದ್ದರು.
ಕಾಂಗ್ರೆಸ್ ಸದಸ್ಯರ ರಾಜೀನಾಮೆ : ಮಹಾಲಿಂಗಪುರ ತಾಲೂಕು ರಚನೆಗೆ ಆಗ್ರಹಿಸಿ ಪಟ್ಟಣದ ಪುರಸಭೆಯ ಕಾಂಗ್ರೆಸ್ ನ 9, ಬಿಜೆಪಿಯ 3 ಬಂಡಾಯ ಸದಸ್ಯರು ಸೇರಿ 12 ಸದಸ್ಯರು ರಾಜೀನಾಮೆ ಘೋಷಿಸಿ, ತಾಲೂಕು ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಈ ಮೂಲಕ 126 ದಿನದ ತಾಲೂಕು ಹೋರಾಟದ ಬಂದ್ ಪ್ರತಿಭಟನೆಯು ತಾಲೂಕು ಹೋರಾಟದ ಸ್ವರೂಪ ಬದಲಾವಣೆಯ ಮುನ್ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ