ಆ.17 ರಂದು ನಾಳೆ ಮಹಾಲಿಂಗಪುರ ಬಂದ್: ಸಾಮೂಹಿಕ ನಾಯಕತ್ವದಡಿ ಹೋರಾಟ
Team Udayavani, Aug 15, 2022, 5:57 PM IST
ಮಹಾಲಿಂಗಪುರ: ಪಟ್ಟಣವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಣೆ ಮಾಡದ ಸರ್ಕಾರದ ಕಾರ್ಯವೈಖರಿ ಖಂಡಿಸಿ ಆ.17 ರಂದು ಮಹಾಲಿಂಗಪುರ ಬಂದ್ಗೆ ಕರೆ ನೀಡಲಾಗಿದ್ದು, ಸಾಮೂಹಿಕ ನಾಯಕತ್ವದಡಿ ತಾಲ್ಲೂಕು ಕೇಂದ್ರಕ್ಕೆ ಹೋರಾಟ ನಡೆಸಲಾಗುವುದು ಎಂದು ತಾಲ್ಲೂಕು ಹೋರಾಟ ಸಮಿತಿ ಸದಸ್ಯರು ತಿಳಿಸಿದರು.
ಹೋರಾಟದ ವೇದಿಕೆಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.15 ರೊಳಗೆ ಮಹಾಲಿಂಗಪುರ ಪಟ್ಟಣವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಣೆ ಮಾಡದಿದ್ದರೆ ಆ.17ರಂದು ಮಹಾಲಿಂಗಪುರ ಬಂದ್ ಮಾಡಿ ಪ್ರತಿಭಟನೆ ಮಾಡಲಾಗುವುದೆಂದು ಈಗಾಗಲೇ ತಿಳಿಸಲಾಗಿತ್ತು. ಇನ್ನುವರೆಗೂ ಸರ್ಕಾರ ಮಹಾಲಿಂಗಪುರವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಿಲ್ಲ. ಹೀಗಾಗಿ ಆ.17ರಂದು ಮಹಾಲಿಂಗಪುರ ಬಂದ್ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲಾಗುವುದು ಎಂದರು.
ಆ.17ರಂದು ಮುಂಜಾನೆ 9 ಗಂಟೆಗೆ ಬಸವೇಶ್ವರ ವೃತ್ತದಿಂದ ನಡುಚೌಕಿ, ಜವಳಿ ಬಜಾರ್, ಗಾಂಧಿ ವೃತ್ತದ ಮಾರ್ಗವಾಗಿ ಪ್ರತಿಭಟನಾ ಮೆರವಣಿಗೆ ನಡೆಸಿ ಚನ್ನಮ್ಮ ವೃತ್ತದಲ್ಲಿ ಸಮಾಪ್ತಿಗೊಳಿಸಿ ಹೋರಾಟ ವೇದಿಕೆಯಲ್ಲಿ ಸಭೆ ನಡೆಸಲಾಗುವುದು.
ಜಿಲ್ಲಾಧಿಕಾರಿಗೆ ಮನವಿ : ಸಭೆಯ ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು. ಜಿಲ್ಲಾಧಿಕಾರಿಗಳು ಹೋರಾಟ ವೇದಿಕೆಗೆ ಆಗಮಿಸಿ, 125 ದಿನಗಳ ಕಾಲ ನಡೆದ ತಾಲೂಕು ಹೋರಾಟದ ಕುರಿತು ಸರ್ಕಾರಕ್ಕೆ ಸಲ್ಲಿಸಿದ ವರದಿಯನ್ನು ಬಹಿರಂಗಪಡಿಸಬೇಕು.ಒಂದು ವೇಳೆ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರದಿದ್ದರೆ ಅವರು ಬರುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಎಚ್ಚರಿಸಿದರು.
ಮಹಾಲಿಂಗಪುರ ಬಂದ್ ಹಿನ್ನೆಲೆ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗುವುದು. ಪಟ್ಟಣದ ಸಾರ್ವಜನಿಕರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಸ್ವಯಂ ಪ್ರೇರಿತರಾಗಿ ತಮ್ಮ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ, ಪಕ್ಷಾತೀತವಾಗಿ ಎಲ್ಲರೂ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಬಸನಗೌಡ ಪಾಟೀಲ, ಯಲ್ಲನಗೌಡ ಪಾಟೀಲ, ಜಾವೇದ ಬಾಗವಾನ, ನಿಂಗಪ್ಪ ಬಾಳಿಕಾಯಿ, ಸಂಗಪ್ಪ ಹಲ್ಲಿ, ಮಹಾಲಿಂಗಪ್ಪ ಕುಳ್ಳೊಳ್ಳಿ, ಬಿ.ಎಂ.ಯಾದವಾಡ, ಸುನೀಲಗೌಡ ಪಾಟೀಲ, ಅರ್ಜುನ ಹಲಗಿಗೌಡರ, ಗಂಗಾಧರ ಮೇಟಿ, ಮಹಾದೇವ ಮಾರಾಪುರ, ಪರಮಾನಂದ ಸಂಕ್ರಟ್ಟಿ, ಈರಪ್ಪ ದಿನ್ನಿಮನಿ, ವೀರೇಶ ಆಸಂಗಿ, ಹಣಮಂತ ಜಮಾದಾರ, ಸಿದ್ದಪ್ಪ ಶಿರೋಳ, ಶಿವಲಿಂಗ ಟಿರಕಿ, ಪರಪ್ಪ ಸತ್ತಿಗೇರಿ, ವಿಠ್ಠಲ ಕುಳಲಿ, ಮಹಾಲಿಂಗ ಮಾಳಿ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
MUST WATCH
ಹೊಸ ಸೇರ್ಪಡೆ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil