ಮಹಾಲಿಂಗಪುರ ಯಾವ ತಾಲೂಕಿಗೆ ಬರುತ್ತೆ?

•ಮೂರೂ ತಾಲೂಕಿಗೆ ಅಲೆದಾಡುವ ಸ್ಥಿತಿ•ಉದ್ಘಾಟನೆಗೆ ಮಾತ್ರ ಸೀಮಿತವಾದ ರಬಕವಿ- ಬನಹಟ್ಟಿ ತಾಲೂಕು

Team Udayavani, Jun 10, 2019, 1:52 PM IST

bk-tdy-3..

ಮಹಾಲಿಂಗಪುರ: 2003ರಲ್ಲಿ ಟಿ.ಎಂ.ಹುಂಡೇಕಾರ ವರದಿ ಸರಕಾರಕ್ಕೆ ಶಿಫಾರಸು ಮಾಡಿದ್ದ ನಿಯೋಜಿತ ಮಹಾಲಿಂಗಪುರ ತಾಲೂಕು ನೀಲನಕ್ಷೆ.

ಮಹಾಲಿಂಗಪುರ: ಹೊಲ ಮನೆ ಖರೀದಿ, ನ್ಯಾಯಾಲಯ ವ್ಯಾಜ್ಯಗಳಿಗೆ ಮುಧೋಳ ತಾಲೂಕು, ಮನವಿ ಸಲ್ಲಿಸಲು ಮಾತ್ರ ನೂತನ ರಬಕವಿ-ಬನಹಟ್ಟಿ ತಾಲೂಕು, ನೆಮ್ಮದಿ ಕೇಂದ್ರಕ್ಕೆ ಸಂಬಂಧಿಸಿದ ಕೆಲಸಗಳಿಗೆ ತೇರದಾಳ ತಾಲೂಕಿಗೆ ಹೋಗಬೇಕಿರುವುದರಿಂದ ಮಹಾಲಿಂಗಪುರ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ತಮ್ಮ ಪ್ರತಿ ಕೆಲಸ ಕಾರ್ಯಗಳಿಗೆ ಇಂದು ಮೂರೂ ತಾಲೂಕಿಗೆ ಅಲೆದಾಡುವ ಪರಿಸ್ಥಿತಿ ಬಂದಿರುವುದು ವಿಪರ್ಯಾಸ ಸಂಗತಿ.

ಹಿಂದಿನ ಕಾಂಗ್ರೆಸ್‌ ಸರಕಾರ ಪಟ್ಟಣವನ್ನು 2018 ಫೆಬ್ರುವರಿಗೂ ಮೊದಲು ಮೊದಲು ನೂತನ ರಬಕವಿ-ಬನಹಟ್ಟಿ ತಾಲೂಕಿಗೆ ಸೇರ್ಪಡೆ ಮಾಡಿತ್ತು. ಇದರಿಂದ ಪಟ್ಟಣದ ಜನತೆ ಮುಧೋಳಕ್ಕಿಂತ ನೂತನ ರಬಕವಿ-ಬನಹಟ್ಟಿ ತಾಲೂಕು 10 ಕಿ.ಮೀ. ಸಮೀಪವಾಯ್ತು ಎಂದುಕೊಂಡು ಖುಷಿಯಾಗ್ದಿರು.

ತೇರದಾಳ ಮತಕ್ಷೇತ್ರದ ಅಂದಿನ ಶಾಸಕಿ, ಸಚಿವೆ ಉಮಾಶ್ರೀ 9-2-2018ರಂದು ಅಧಿಕೃತವಾಗಿ ರಬಕವಿ-ಬನಹಟ್ಟಿ ತಾಲೂಕು ಪ್ರಾರಂಭೋತ್ಸವ ಸಮಾರಂಭ ನೆರವೇರಿಸಿದ್ದರು. ಆದರೆ ನೂತನ ತಾಲೂಕು ಘೋಷಣೆಯಾಗಿ ಒಂದು ವರ್ಷ ನಾಲ್ಕು ತಿಂಗಳು ಗತಿಸಿದರೂ ಇದುವರೆಗೆ ಯಾವುದೇ ಇಲಾಖೆಗಳು ಪೂರ್ಣ ಪ್ರಮಾಣದಲ್ಲಿ ಸ್ಥಳಾಂತರಗೊಂಡಿಲ್ಲ. ಹೀಗಾಗಿ ಮಹಾಲಿಂಗಪುರ ಮತ್ತು ಈ ಭಾಗದ ಹತ್ತಾರು ಹಳ್ಳಿಗಳ ಜನರು ತಾಲೂಕು ಕೆಲಸ-ಕಾರ್ಯಗಳಿಗೆ ಇಂದಿಗೂ ಮುಧೋಳ ಪಟ್ಟಣವನ್ನೇ ಅವಲಂಬಿಸುವಂತಾಗಿದೆ. ರಬಕವಿ-ಬನಹಟ್ಟಿ ತಾಲೂಕು ಕೇವಲ ಉದ್ಘಾಟನೆಗೆ ಮಾತ್ರ ಸೀಮಿತ ಎಂಬಂತಾಗಿದೆ.

ಮತ್ತೇ ತೇರದಾಳ ತಾಲೂಕು ಘೋಷಣೆ: ಕುಮಾರಸ್ವಾಮಿಯವರು 2018 ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಬಂದಾಗ ನಾನು ಸಿಎಂ ಆದರೆ ತೇರದಾಳವನ್ನು ತಾಲೂಕು ಕೇಂದ್ರ ಮಾಡುವುದಾಗಿ ಘೋಷಿಸಿದ್ದರು. ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಮೈತ್ರಿ ಸರ್ಕಾರದ ಸಿಎಂ ಖುರ್ಚಿ ಅಲಂಕರಿಸಿದ ನಂತರ ಕುಮಾರಸ್ವಾಮಿಯವರು 2019-20ನೇ ಸಾಲಿನ ಬಜೆಟ್‌ನಲ್ಲಿ ತೇರದಾಳನ್ನು ನೂತನ ತಾಲೂಕು ಎಂದು ಘೋಷಿಸಿದರು.

ಮೂರು ತಾಲೂಕು ವ್ಯಾಪ್ತಿಯಲ್ಲಿ ಮಹಾಲಿಂಗಪುರ: ಮುಧೋಳ ತಾಲೂಕಿನಿಂದ ನೂತನ ರಬಕವಿ-ಬನಹಟ್ಟಿಗೆ ತಾಲೂಕಿಗೆ ಸೇರ್ಪಡೆಯಾದಾಗ ಖುಷಿಯಾಗಿದ್ದ ಮಹಾಲಿಂಗಪುರ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಇಂದು ತ್ರಿಶಂಕು ಸ್ಥಿತಿಯಲ್ಲಿ ಸಿಲುಕಿ ಒದ್ದಾಡುವಂತಾಗಿದೆ. ಮೊದಲು ರಬಕವಿ-ಬನಹಟ್ಟಿ ತಾಲೂಕಿಗೆ ಸೇರ್ಪಡೆಯಾಗಿದ್ದ ಮಹಾಲಿಂಗಪುರ ಪಟ್ಟಣ ಮತ್ತು ಸುತ್ತಮುತ್ತಲಿನ ಹಳ್ಳಿಗಳನ್ನು ತೇರದಾಳ ತಾಲೂಕಿಗೆ ಸೇರ್ಪಡೆ ಮಾಡಿರುವುದು ಇಂದು ಹಲವಾರು ಸಮಸ್ಯೆಗಳಿಗೆ ಕಾರಣವಾಗಿದೆ.

ತೇರದಾಳಕ್ಕೆ ಸೇರಿಸಿದ್ದಕ್ಕೆ ವಿರೋಧ: ಪಟ್ಟಣವನ್ನು ತೇರದಾಳ ತಾಲೂಕಿಗೆ ಸೇರ್ಪಡೆ ಮಾಡಿದ್ದನ್ನು ವಿರೋಧಿಸಿದ ಸ್ಥಳೀಯ ತಾಲೂಕು ಹೋರಾಟಗಾರರು ರಬಕವಿ-ಬನಹಟ್ಟಿ ತಾಲೂಕಿನಲ್ಲೇ ಮಹಾಲಿಂಗಪುರ ಪಟ್ಟಣ ಉಳಿಸಬೇಕು ಇಲ್ಲವೇ 2003ರಲ್ಲಿ ನಡೆದ ತಾಲೂಕು ಹೋರಾಟದ ಫಲವಾಗಿ ಟಿ.ಎಂ.ಹುಂಡೇಕಾರ ವರದಿ ಸರಕಾರಕ್ಕೆ ಶಿಫಾರಸ್ಸು ಮಾಡಿದ್ದ ನಿಯೋಜಿತ ನಕ್ಷೆಯಂತೆ ಮಹಾಲಿಂಗಪುರವನ್ನು ಸ್ವತಂತ್ರ ತಾಲೂಕಾಗಿ ರಚಿಸಬೇಕೆಂದು ಹೋರಾಟ ನಡೆಸಿ ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಿ ಮನವಿ ಸಲ್ಲಿಸಿ ಬಂದಿದ್ದರು. ಆ ವೇಳೆ ಲೋಕಸಭಾ ಚುನಾವಣೆ ಬಂದಿದ್ದರಿಂದ ನೀತಿ ಸಂಹಿತೆ ಹಿನ್ನೆಲೆಯಲ್ಲಿ ತಾಲೂಕು ಹೋರಾಟ ಅಲ್ಲಿಗೆ ಸ್ಥಗಿತಗೊಂಡಿತ್ತು. ಸದ್ಯ ಮೈತ್ರಿ ಸರಕಾರವೇ ಡೋಲಾಯಮಾನದಲ್ಲಿ ಇರುವುದರಿಂದ ತಾಲೂಕು ಸಮಸ್ಯೆ ಯಾವಾಗ ಬಗೆಹರಿಯುವುದು ಎಂಬುವುದೇ ಯಕ್ಷ ಪ್ರಶ್ನೆಯಾಗಿದೆ.

•ಚಂದ್ರಶೇಖರ ಮೋರೆ

ಟಾಪ್ ನ್ಯೂಸ್

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.