ಸಂಪೂರ್ಣ ಲಾಕ್ಡೌನ್ಗೆ ಸಹಕರಿಸಿ
ಮುಂಜಾಗ್ರತ ಕ್ರಮ ಅನುಸರಿಸಿವರ್ತಕರು ನಿಗದಿತ ಸಮಯದಲ್ಲಿ ವ್ಯಾಪಾರ-ವಹಿವಾಟು ನಡೆಸಿ
Team Udayavani, Apr 10, 2020, 1:45 PM IST
ಮಹಾಲಿಂಗಪುರ: ವರ್ತಕರ ಸರಣಿ ಸಭೆಯಲ್ಲಿ ರಬಕವಿ-ಬನಹಟ್ಟಿ ತಹಶೀಲ್ದಾರ್ ಪ್ರಶಾಂತ ಚನಗೊಂಡ ಮಾತನಾಡಿದರು.
ಮಹಾಲಿಂಗಪುರ: ಪಟ್ಟಣದಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊರೊನಾ ವೈರಸ್ ತಡೆಗಟ್ಟಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ರಬಕವಿ-ಬನಹಟ್ಟಿ ತಹಶೀಲ್ದಾರ್ ಪ್ರಶಾಂತ ಚನಗೊಂಡ ಹೇಳಿದರು.
ಗುರುವಾರ ಪುರಸಭೆಯ ಸಭಾಭವನದಲ್ಲಿ ಕೊರೊನಾ ವೈರಸ್ ತಡೆಗಟ್ಟಲು ಪಟ್ಟಣದ ಔಷಧ ವ್ಯಾಪಾರಸ್ಥರು, ಪೆಟ್ರೋಲ್ ಪಂಪ್ ಮಾಲೀಕರು, ಕಿರಾಣಿ ವರ್ತಕರು ಮತ್ತು ಫರ್ಟಿಲೈಸರ್ ವ್ಯಾಪಾರಸ್ಥರ ಸರಣಿ ಸಭೆಯಲ್ಲಿ ಮಾತನಾಡಿದ ಅವರು, ಮಹಾಲಿಂಗಪುರದಲ್ಲಿ ಸಂಪೂರ್ಣ ಲಾಕ್ಡೌನ್ ಯಶಸ್ವಿಗಾಗಿ ಎಲ್ಲ ವ್ಯಾಪಾರಸ್ಥರು ಸ್ವಯಂಪ್ರೇರಿತರಾಗಿ ನಿಗದಿತ ಸಮಯದಲ್ಲಿ ವ್ಯಾಪಾರ ವಹಿವಾಟು ನಡೆಸಬೇಕು ಎಂದು ವಿನಂತಿಸಿದರು.
ವ್ಯಾಪಾರಸ್ಥರು ಮತ್ತು ಅಧಿಕಾರಿಗಳು ಚರ್ಚೆ ನಡೆಸಿ ಅಂತಿಮವಾಗಿ ಶುಕ್ರವಾರ ಏ. 10ರಿಂದ ಮಹಾಲಿಂಗಪುರದಲ್ಲಿ ತುರ್ತು ವಾಹನ ಸವಾರರ ಅನುಕೂಲಕ್ಕಾಗಿ ಬೆಳಗ್ಗೆ 6ರಿಂದ 12ರವರೆಗೆ ಪೆಟ್ರೋಲ್ ಪಂಪ್ ಆರಂಭ, ಸಾರ್ವಜನಿಕರಿಗೆ ದಿನಸಿ ಖರೀದಿಗಾಗಿ ಬೆಳಗ್ಗೆ 7ರಿಂದ 11ರವರೆಗೆ ಕಿರಾಣಿ ಅಂಗಡಿಗಳ ವಹಿವಾಟಿಗೆ ಅವಕಾಶ, ರೈತರ ಅನುಕೂಲಕ್ಕಾಗಿ ಬೆಳಗ್ಗೆ 8ರಿಂದ 11ರವರೆಗೆ ಫರ್ಟಿಲೈಜರ್ ಅಂಗಡಿಗಳಲ್ಲಿ ಬೀಜ ಮತ್ತು ರಸಗೊಬ್ಬರಗಳ ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ.
ರೋಗಿಗಳ ಅನುಕೂಲಕ್ಕಾಗಿ ಬೆಳಗ್ಗೆ 8ರಿಂದ ಮಧ್ಯಾಹ್ನ 2ರವರೆಗೆ ಔಷಧ ಅಂಗಡಿಗಳ ಆರಂಭಕ್ಕೆ ಅವಕಾಶ ನೀಡಲಾಯಿತು. ಜತೆಗೆ ತರಕಾರಿ ವ್ಯಾಪಾರಿಗಳು ಸಹ ಬೆಳಗ್ಗೆ 7ರಿಂದ 11ರೊಳಗೆ ಮನೆ-ಮನೆಗೆ ತೆರಳಿ ವ್ಯಾಪಾರ ಮುಕ್ತಾಯಗೊಳಿಸಲು ಸೂಚಿಸಲಾಯಿತು. ರಬಕವಿ-ಬನಹಟ್ಟಿಯ ಗ್ರೇಡ್ -2 ತಹಶೀಲ್ದಾರ್ ಎಚ್.ಬಿ.ಕಾಂಬಳೆ, ಕಂದಾಯ ನಿರೀಕ್ಷಕ ಬಸವರಾಜ ತಾಳಿಕೋಟಿ, ಮುಖ್ಯಾ ಧಿಕಾರಿ ಬಿ.ಆರ್. ಕಮತಗಿ, ಪುರಸಭೆ ಕಿರಿಯ ಆರೋಗ್ಯ ನಿರೀಕ್ಷಕ ರಾಜು ಹೂಗಾರ, ವ್ಯಾಪಾರಸ್ಥರಾದ ಬಸನಗೌಡ ಗೋಲಪ್ಪನವರ, ಶ್ರೀಪಾದ ಗುಂಡಾ, ಕಿರಾಣಿ ವರ್ತಕ ಸಂಘದ ಅಧ್ಯಕ್ಷ ಅಶೋಕ ಅಂಗಡಿ, ಬಸವರಾಜ ಕಲಾದಗಿ, ಚೇತನ ಬಂಡಿ, ವೆಂಕಣ್ಣ ಗುಂಡಾ, ರಾಹುಲ ಅವರಾದಿ, ಪ್ರಕಾಶ ಮಮದಾಪುರ, ಅಲಿ ಅವಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು