ಚರಂಡಿ ಸ್ವಚ್ಛತೆ -ಕಸ ವಿಲೇವಾರಿಗೆ ಆದ್ಯತೆ ನೀಡಿ

ಡಿವೈಡರ್‌-ಪಾದಚಾರಿ ರಸ್ತೆ ನಿರ್ಮಿಸಿಸಿದ್ದ ಸರೋವರ ಕೆರೆ ಪ್ರವಾಸಿ ತಾಣವನ್ನಾಗಿ ಮಾಡಿ

Team Udayavani, Jan 9, 2020, 1:15 PM IST

9-January-14

ಮಹಾಲಿಂಗಪುರ: ಅಭಿವೃದ್ಧಿ ಕಾರ್ಯಗಳಿಗಿಂತ ಪಟ್ಟಣದ ರಸ್ತೆ, ಚರಂಡಿಗಳ ಸ್ವಚ್ಛತೆ, ಸಮರ್ಪಕ ಕಸ ವಿಲೇವಾರಿಗೆ ಪುರಸಭೆ ಬಜೆಟ್‌ನಲ್ಲಿ ಆದ್ಯತೆ ನೀಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು.

ಬುಧವಾರ ನಡೆದ ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದ ಪುರಸಭೆ ಸದಸ್ಯರು ಹಾಗೂ ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದರು. ಪುರಸಭೆ ಸದಸ್ಯ ಪ್ರಹ್ಲಾದ ಸಣ್ಣಕ್ಕಿ ಮಾತನಾಡಿ, ಪಟ್ಟಣದ ಚನ್ನಮ್ಮ ವೃತ್ತದಿಂದ ರಬಕವಿ ರಸ್ತೆಯ ಮಹಾದ್ವಾರದವರೆಗೆ ಮತ್ತು ಬಸವ ವೃತ್ತದಿಂದ ಎಪಿಎಂಸಿ ಮಹಾದ್ವಾರದವರೆಗೆ ಡಬಲ್‌ ರಸ್ತೆ, ಡಿವೈಡರ್‌, ಪಾದಚಾರಿ ರಸ್ತೆ ನಿರ್ಮಿಸಬೇಕು ಎಂದರು.

ಮನೋಹರ ಶಿರೋಳ ಮಾತನಾಡಿ, ನಗರ ನೈರ್ಮಲ್ಯಕ್ಕೆ ಆದ್ಯತೆ ನೀಡಬೇಕು ಎಂದರು. ಪುರಸಭೆ ಸದಸ್ಯ ಬಸವರಾಜ ಹಿಟ್ಟಿನಮಠ ಮಾತನಾಡಿ, ಪಟ್ಟಣದ ಸಿದ್ದಸರೋವರ ಕೆರೆಯ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಿ, ಅದನ್ನು ಪ್ರವಾಸಿ ತಾಣವನ್ನಾಗಿ ಮಾಡಬೇಕು ಎಂದು ಹೇಳಿದರು.

ಸಿದ್ದು ಶಿರೋಳ ಮಾತನಾಡಿ, ಹಿಂದೂ ಸ್ಮಶಾನ ಮತ್ತು ಉದ್ಯಾನವನಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದರು. ರಾಜೇಶ ಭಾವಿಕಟ್ಟಿ ಮಾತನಾಡಿ, ಗಾಂಧಿ ವೃತ್ತದಿಂದ ಚನಗೀರೇಶ್ವರ ದೇವಸ್ಥಾನ, ವಿನಾಯಕ ಹೋಟೆಲ್‌ನಿಂದ ಮಹಾಲಿಂಗೇಶ್ವರ ದೇವಸ್ಥಾನವರೆಗೆ ಟ್ರಾಫಿಕ್‌ ಸಮಸ್ಯೆಯಾಗುತ್ತಿರುವುದರಿಂದ ಅತಿಕ್ರಮಣ ತೆರವುಗೊಳಿಸಿ ಡಬಲ್‌ ರಸ್ತೆ ಮಾಡಬೇಕು ಎಂದರು.

ಬಸನಗೌಡ ಗೋಲಪ್ಪನವರ ಮಾತನಾಡಿ, ಸಂತೆಯನ್ನು ಡಬಲ್‌ ರಸ್ತೆಯ ಮುಖ್ಯಮಾರುಕಟ್ಟೆಗೆ ಸ್ಥಳಾಂತರಿಸಬೇಕು ಎಂದರು. ಜೆಡಿಎಸ್‌ ಮುಖಂಡ ನಿಂಗಪ್ಪ ಬಾಳಿಕಾಯಿ ಮಾತನಾಡಿ, ಕೆರೆ ಮತ್ತು ಬಸ್‌ ನಿಲ್ದಾಣ ಪಕ್ಕದ ಪುರಸಭೆಯ ನಾಲ್ಕು ಎಕರೆ ಜಾಗೆಯು ಅತಿಕ್ರಮಣವಾಗುತ್ತಿದೆ. ತಕ್ಷಣ ಜಾಗದ ಸರ್ವೇ ಮಾಡಿ ಕಾಂಪೌಂಡ್‌ ಹಾಕಿ. ಬಸ್‌ ನಿಲ್ದಾಣದ ಕೆಲಸ ಮುಕ್ತಾಯಗೊಳ್ಳುವವರೆಗೆ ಬಸ್‌ ನಿಲುಗಡೆಗೆ ಅವಕಾಶ ನೀಡಲು ತಿಳಿಸಿದರು.

ಪುರಸಭೆ ಮಾಜಿ ಸದಸ್ಯ ಶಿವಲಿಂಗ ಘಂಟಿ ಮಾತನಾಡಿ, ಕರ ಪಾವತಿಸಲು ಬಂದ ಸಾರ್ವಜನಿಕರಿಗೆ ಸರಿಯಾಗಿ ಚಲನ್‌ ಮಾಡಿಕೊಡುವುದಿಲ್ಲ, ಹೀಗಾದರೆ ಕರ ವಸೂಲಿ ಮತ್ತು ಸ್ಥಳೀಯ ಸಂಪನ್ಮೂಲ ಕ್ರೋಢಿಕರಣ ಹೇಗೆ ಸಾಧ್ಯ ಎಂದರು. ಮಾಜಿ ಅಧ್ಯಕ್ಷ ಜಿ.ಎಸ್‌.ಗೊಂಬಿ ಮಾತನಾಡಿ ಮುಂದಿನ ಎರಡು ವರ್ಷಗಳ ಕಾಲ ಪುರಸಭೆಯ ಯಾವುದೇ ಕರಗಳನ್ನು ಹೆಚ್ಚಿಸದೇ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದರು. ಯಲ್ಲನಗೌಡ ಪಾಟೀಲ, ಮಹಾಲಿಂಗಪ್ಪ ಕುಳ್ಳೋಳ್ಳಿ, ಚನಬಸು ಹುರಕಡ್ಲಿ, ಮಹಾಲಿಂಗಪ್ಪ ಕೋಳಿಗುಡ್ಡ, ಶಿವಾನಂದ ಅಂಗಡಿ, ಬಿ.ಎಂ.ಯಾದವಾಡ, ಭೀಮಸಿ ಗೌಂಡಿ, ವಿರೂಪಾಕ್ಷ ಬಾಟ, ಮಹಾಲಿಂಗಪ್ಪ ಮುದ್ದಾಪುರ ಮಾತನಾಡಿದರು. ಮುಖ್ಯಾ ಧಿಕಾರಿ ಬಾಬುರಾವ್‌ ಕಮತಗಿ, ಶ್ರೀಮಂತ ಹಳ್ಳಿ, ಈರಪ್ಪ ದಿನ್ನಿಮನಿ, ಸವಿತಾ ಕೋಳಿಗುಡ್ಡ, ರಾಜು ಗೌಡಪ್ಪಗೋಳ, ಸುನೀಲಗೌಡ ಪಾಟೀಲ, ವಿ.ಜಿ. ಕುಲಕರ್ಣಿ, ಎಸ್‌.ಎನ್‌. ಪಾಟೀಲ, ಬಿ.ವೈ. ಮರದಿ ಇದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.