200 ದಿನಗಳನ್ನು ಪೂರೈಸಿದ ಮಹಾಲಿಂಗಪುರ ತಾಲೂಕು ಹೋರಾಟ!

ತಾಲೂಕು ಆಗುವರೆಗೂ ಹೋರಾಟ ನಿರಂತರ : ತಾಲೂಕು ಘೋಷಣೆ ಯಾವಾಗ?

Team Udayavani, Oct 30, 2022, 5:24 PM IST

8

ಮಹಾಲಿಂಗಪುರ: ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿಸಬೇಕೆಂದು ಆಗ್ರಹಿಸಿ ಪಕ್ಷಾತೀತ ಮತ್ತು ಜಾತ್ಯಾತೀತವಾಗಿ ಕಳೆದ ಏಪ್ರೀಲ್ 14 ರಂದು ಪಟ್ಟಣದ ಚನ್ನಮ್ಮ ವೃತ್ತದಲ್ಲಿ ವೇದಿಕೆ ನಿರ್ಮಿಸಿ, ತಾಲೂಕು ಹೋರಾಟ ವೇದಿಕೆಯ ನೇತೃತ್ವದಲ್ಲಿ ಪ್ರಾರಂಭಿಸಿರುವ ಅನಿರ್ಧಿಷ್ಟಾವಧಿ ಹೋರಾಟವು ಅ.30ರ ರವಿವಾರ 200 ದಿನಗಳನ್ನು ಪೂರೈಸಿದೆ.

ಮೊದಲು ಮುಧೋಳ ತಾಲೂಕಿನಲ್ಲಿದ್ದ ಮಹಾಲಿಂಗಪುರ ಪಟ್ಟಣವನ್ನು 2018ರಲ್ಲಿ ಹಿಂದಿನ ಕಾಂಗ್ರೆಸ್ ಸರಕಾರ ನೂತನ ರಬಕವಿ-ಬನಹಟ್ಟಿ ತಾಲೂಕಿಗೆ ಸೇರ್ಪಡೆ ಮಾಡಿತ್ತು. ಇದರಿಂದ ಪಟ್ಟಣದ ಜನತೆಗೆ ಮುಧೋಳಕ್ಕಿಂತ ನೂತನ ರಬಕವಿ-ಬನಹಟ್ಟಿ ತಾಲೂಕು ಮತ್ತೇ 10 ಕೀ.ಮಿ ಸಮೀಪವಾಯಿತು.

30 ವರ್ಷಗಳ ಬೇಡಿಕೆ:     

ಪಟ್ಟಣವನ್ನು ತಾಲೂಕು ಕೇಂದ್ರ ಮಾಡಬೇಕೆಂಬುದು ಕಳೆದ 30 ವರ್ಷಗಳ ನಿರಂತರ ಬೇಡಿಕೆಯಾಗಿದೆ. ಈ ಹಿಂದೆ ತಾಲೂಕಿಗಾಗಿ 2003ರಲ್ಲಿ ಪಟ್ಟಣದ ಬಸವವೃತ್ತದಲ್ಲಿ ಒಂದು ತಿಂಗಳ ಕಾಲ ಪ್ರತಿಭಟನೆ ಮಾಡಲಾಗಿತ್ತು. ಅಂದು ನಡೆದ ತಾಲೂಕು ಹೋರಾಟದ ಫಲವಾಗಿ ಟಿ.ಎಂ.ಹುಂಡೆಕಾರ ವರದಿಯು ನಿಯೋಜಿತ ನಕ್ಷೆಯೊಂದನ್ನು ಸಿದ್ದಪಡಿಸಿ ಸರಕಾರಕ್ಕೆ ಶಿಪಾರಸ್ಸು ಮಾಡಿತ್ತು. ಅದರಂತೆ ಅಂದಿನ ಕಂದಾಯ ಸಚಿವ ಬಿ.ಎಂ.ಶ್ರೀಕಂಠಯ್ಯ ಅವರು ಏಪ್ರೀಲ್ 1ರಂದು ಮಹಾಲಿಂಗಪುರಕ್ಕೆ ಉಪತಹಶೀಲ್ದಾರ ಹುದ್ದೆಯ ಮಂಜೂರಿಯ ಆದೇಶ ಪತ್ರವನ್ನು ಕಳಿಸಿದ್ದರಿಂದ ಹೋರಾಟವನ್ನು ಮೊಟಕುಗೊಳಿಸಲಾಗಿತ್ತು. ಮುಂದೆ ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ಹೋರಾಟ ಮುಂದುವರೆಯಲಿಲ್ಲ, ತಾಲೂಕು ಆಗಲೇ ಇಲ್ಲ.

ಉದ್ಘಾಟನೆಗೆ ಮಾತ್ರ ಸೀಮಿತ ? : 

ತೇರದಾಳ ಮತಕ್ಷೇತ್ರದ ಅಂದಿನ ಶಾಸಕಿ, ಸಚಿವೆ ಉಮಾಶ್ರೀ ಅವರು 9-2-2018ರಂದು ಅಧಿಕೃತವಾಗಿ ರಬಕವಿ-ಬನಹಟ್ಟಿ ತಾಲೂಕಾ ಪ್ರಾರಂಭೋತ್ಸವ ಸಮಾರಂಭವನ್ನು ಮಾಡಿದ್ದರು. ಆದರೆ ನೂತನ ತಾಲೂಕು ಘೋಷಣೆಯಾಗಿ 4 ವರ್ಷ 8 ತಿಂಗಳು ಕಳೆದರು ಸಹ, ಇದುವರೆಗೆ ಎಲ್ಲಾ ಇಲಾಖೆಗಳು ಪೂರ್ಣ ಪ್ರಮಾಣದಲ್ಲಿ ಸ್ಥಳಾಂತರಗೊಂಡಿಲ್ಲ. ಇದರಿಂದಾಗಿ ಸಾರ್ವಜನಿಕರು ಮನೆ-ಹೊಲ ಖರೀದಿಗಾಗಿ ಮುಧೋಳಕ್ಕೆ, ತಹಶೀಲ್ದಾರ ಕೆಲಸಗಳಿಗಾಗಿ ರಬಕವಿ-ಬನಹಟ್ಟಿಗೆ, ಮಾಶಾಸನ, ಜಾತಿ-ಆದಾಯ ಪತ್ರಗಳಿಗಾಗಿ ತೇರದಾಳಕ್ಕೆ ಸೇರಿದಂತೆ ಇಂದಿಗೂ ಮೂರು ಕಡೆಗೆ ಅಲೆದಾಡುವದು ತಪ್ಪಿಲ್ಲ.

2019ರಿಂದ ಮತ್ತೇ ಹೋರಾಟ ತೀವೃ:             ‌‌

ಮಾಜಿ ಸಿಎಂ ಕುಮಾರಸ್ವಾಮಿಯವರು 2018 ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಬಂದಾಗ ನಾನು ಸಿಎಂ ಆದರೆ ತೇರದಾಳ ತಾಲೂಕಾ ಕೇಂದ್ರ ಮಾಡುವುದಾಗಿ ಘೋಷಿಸಿದ್ದರು. ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಮೈತ್ರಿ ಸರ್ಕಾರದ ಸಿಎಂ ಖುರ್ಚಿ ಅಲಂಕರಿಸಿದ ನಂತರ ಕುಮಾರಸ್ವಾಮಿಯವರು 2019-20ನೇ ಸಾಲಿನ ಬಜೆಟ್‍ನಲ್ಲಿ ತೇರದಾಳನ್ನು ನೂತನ ತಾಲೂಕು ಘೋಷಿಸಿದರು.

ತೇರದಾಳ ತಾಲೂಕು ಘೋಷಣೆ ನಂತರ 2019ರಿಂದ ಮಹಾಲಿಂಗಪುರ ತಾಲೂಕು ಹೋರಾಟ ತೀವ್ರ ಸ್ಪರೂಪ ಪಡೆದುಕೊಂಡು, 2019ರಿಂದ 2021ರವರೆಗೆ ಹಲವು ಬಾರಿ ಬೆಂಗಳೂರು ನಿಯೋಗ ತೆರಳಿ ಮುಖ್ಯಮಂತ್ರಿ, ಕಂದಾಯ ಮಂತ್ರಿಗಳಿಗೆ ಮನವಿ ಸಲ್ಲಿಸಿ, ತಾಲೂಕು ಕೇಂದ್ರಕ್ಕಾಗಿ ಒತ್ತಾಯಿಸಲಾಗಿತ್ತು.

ಅಂತಿಮವಾಗಿ ಅನಿರ್ಧಿಷ್ಟಾವಧಿ ಹೋರಾಟ : 

ಮೂರು ತಾಲೂಕಿಗೆ ಅಲೆದಾಡುವ ತ್ರಿಶಂಕು ಸ್ಥಿತಿಯಲ್ಲಿ ಸಿಕ್ಕಿ ಒದ್ದಾಡುವಂತಿರುವಾಗಲೇ ಈ ಮೊದಲು ರಬಕವಿ-ಬನಹಟ್ಟಿ ತಾಲೂಕಿಗೆ ಸೇರ್ಪಡೆಯಾಗಿದ್ದ ಮಹಾಲಿಂಗಪುರ ಪಟ್ಟಣ ಮತ್ತು ಸುತ್ತಮುತ್ತಲಿನ ಹಳ್ಳಿಗಳನ್ನು ನೂತನ ತೇರದಾಳ ತಾಲೂಕಿಗೆ ಸೇರ್ಪಡೆ ಮಾಡಿದ್ದ 2022ರ ಏಪ್ರೀಲ್‍ನಲ್ಲಿ ತಾಲೂಕು ಹೋರಾಟ ತೀವ್ರ ಸ್ವರೂಪಕ್ಕೆ ತಿರುಗಿ, ತೇರದಾಳ ತಾಲೂಕಿಗೆ ಸೇರಿಸಿದ್ದನ್ನು ವಿರೋಧಿಸಿ ರಬಕವಿ-ಬನಹಟ್ಟಿ ತಾಲೂಕಿನಲ್ಲಿಯೇ ಉಳಿಸಿಕೊಂಡು ಮಹಾಲಿಂಗಪುರ ತಾಲೂಕಿಗಾಗಿ ಅನಿರ್ಧಿಷ್ಟಾವಧಿ ಹೋರಾಟ ಆರಂಭಿಸಲಾಯಿತು.

ಅಭೂತಪೂರ್ವ ಬೆಂಬಲ :

ಕಳೆದ ಏಪ್ರೀಲ್ 14ರಂದು ಪ್ರಾರಂಭವಾದ ತಾಲೂಕು ಹೋರಾಟಕ್ಕೆ ಮಹಾಲಿಂಗಪುರ ಹಾಗೂ ಸುತ್ತಮುತ್ತಲಿನ 14 ಗ್ರಾಮಗಳ ಜನತೆಯು ಪಕ್ಷಾತೀತ ಮತ್ತು ಅಭೂತಪೂರ್ವ ಬೆಂಬಲ ವ್ಯಕ್ತಪಡಿಸಿದ್ದಾರೆ. ಎಲ್ಲಾ ಪಕ್ಷಗಳ ಹಾಲಿ, ಮಾಜಿ ಶಾಸಕರು, ಸಚಿವರು, ಪಕ್ಷದ ಮುಖಂಡರು ಹೋರಾಟ ವೇದಿಕೆಗೆ ಆಗಮಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಕಳೆದ ಸೆಪ್ಟೆಂಬರ್ 15ರಂದು ತಾಲೂಕು ಹಾರಾಟ ವೇದಿಕೆ ಹಾಗೂ ಸರ್ವಪಕ್ಷಗಳ ನಿಯೋಗದಿಂದ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ನಮ್ಮ ಸರ್ಕಾರದ ಅವಧಿಯಲ್ಲೇ ಸಿಹಿಸುದ್ದಿ ನೀಡುವ ಭರವಸೆ ಕೊಟ್ಟಿರುವ ಕಾರಣ, ಮಹಾಲಿಂಗಪುರ ತಾಲೂಕು ಹೋರಾಟವು 200 ದಿನಗಳ ನಂತರವು ಮುಂದುವರೆಯಲಿದೆ.‌ ‌‌‌‌‌‌‌

ಜನಪ್ರತಿನಿಧಿಗಳ ಮೇಲೆ ಹೆಚ್ಚಿದ ಒತ್ತಡ :    ‌        ‌‌‌‌‌‌‌‌‌‌       ‌‌‌‌‌‌‌‌

ಈಗಾಗಲೇ ತಾಲೂಕು ಹೋರಾಟ 200 ದಿನಗಳನ್ನು ಪೂರೈಸಿದ್ದು ಮತ್ತು ಇನ್ನು 5-6 ತಿಂಗಳಲ್ಲೇ ವಿಧಾನಸಭಾ ಚುನಾವಣೆಯು ಸಮೀಪಿಸುತ್ತಿರುವ ಕಾರಣ, ಅಂತಿಮವಾಗಿ 2023ರ ಫೆಬ್ರುವರಿ ತಿಂಗಳಲ್ಲಿ ನಡೆಯಬಹುದಾದ ಚುನಾವನೆಯ ಬಜೆಟ್ ಅಧಿವೇಶನದಲ್ಲಿಯಾದರೂ, ರಾಜ್ಯ ಸರ್ಕಾರದ ಮೇಲೆ ಒತ್ತಡ ತಂದು ಮಹಾಲಿಂಗಪುರ ಪಟ್ಟಣವನ್ನು ಶತಾಯಗತಾಯ ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕಾದ ಬಹುದೊಡ್ಡ ಜವಾಬ್ದಾರಿ, ಒತ್ತಡ ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ, ಮುಧೋಳ ಶಾಸಕರು, ಸಚಿವರಾದ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಸಿ.ಪಾಟೀಲ, ಸಂಸದ ಪಿ.ಸಿ.ಗದ್ದಿಗೌಡರ ಅವರ ಹೆಗಲ ಮೇಲಿದೆ.

-ಚಂದ್ರಶೇಖರ ಮೋರೆ

ಟಾಪ್ ನ್ಯೂಸ್

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.