ಡಬಲ್ ಸೆಂಚುರಿ ಬಾರಿಸಿದ ಮಹಾಲಿಂಗಪುರ ತಾಲೂಕು ಹೋರಾಟ

ಶೀಘ್ರ ತಾಲೂಕು ಘೋಷಣೆಗೆ ಮುಖಂಡರ ಒತ್ತಾಯ

Team Udayavani, Oct 30, 2022, 6:44 PM IST

10

ಮಹಾಲಿಂಗಪುರ: ರವಿವಾರ ಮಹಾಲಿಂಗಪುರ ತಾಲೂಕು ಹೋರಾಟವು 200 ದಿನಗಳನ್ನು ಪೂರೈಸಿದ ಹಿನ್ನಲೆಯಲ್ಲಿ ತಾಲೂಕು ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಚನಬಸು ಹುರಕಡ್ಲಿಯವರು ತಮ್ಮ ಬಸವನಗರದ ಗುರು-ಹಿರಿಯರು, ಮಹಿಳೆಯರು, ಯುವಕರು ಸೇರಿದಂತೆ ನೂರಾರು ಜನರೊಂದಿಗೆ ಡಬಲ್ ಸೆಂಚೂರಿ ಹೋರಾಟದಲ್ಲಿ ಭಾಗವಹಿಸಿ ಅಭೂತಪೂರ್ವ ಬೆಂಬಲ ಸೂಚಿಸಿದರು.

ಅದ್ದೂರಿ ಪ್ರತಿಭಟನಾ ಮೆರವಣಿಗೆ :

200ನೇ ದಿನದ ತಾಲೂಕು ಹೋರಾಟದ ನಿಮಿತ್ತ ಪುರಸಭೆ ಸದಸ್ಯೆ ಸವಿತಾ ಹುರಕಡ್ಲಿ, ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಚನಬಸು ಹುರಕಡ್ಲಿ ಅವರ ನೇತೃತ್ವದಲ್ಲಿ ಬಸವನಗರ ಬಸವೇಶ್ವರ ಸಮುದಾಯ ಭವನದಿಂದ ಬಸವವೃತ್ತ, ಡಬಲ ರಸ್ತೆ, ವಿವೇಕ ವೃತ್ತ, ನಡಚೌಕಿ, ಜವಳಿ ಬಜಾರ, ಗಾಂಧಿವೃತ್ತ ಮಾರ್ಗವಾಗಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಶೀಘ್ರ ತಾಲೂಕು ಘೋಷಣೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಗೆ ವಿಶೇಷ ಮೆರಗು:

ಬಸವನಗರದಿಂದ ಹೋರಾಟ ವೇದಿಕೆವರೆಗೆ ನಡೆದ ಬೃಹತ್ ಪ್ರತಿಭಟನಾ ಜಾಥಾದಲ್ಲಿ ನಾಲ್ಕು ಕುದುರೆಗಳ ಮೇಲೆ ಛತ್ರಪತಿ ಶಿವಾಜಿ ಮಹಾರಾಜರು, ಕಿತ್ತೂರ ಚನ್ನಮ್ಮ, ಸಂಗೊಳ್ಳಿ ರಾಯಣ್ಣ ವೇಷಭೂಷಣ ಧರಿಸಿ ಜಾಥಾದಲ್ಲಿ ಭಾಗವಹಿಸಿದ್ದರು.

ತೆರೆದ ಜೀಪ್‌ನಲ್ಲಿ ಅಂಬೇಡ್ಕರ್, ಗಾಂಧೀಜಿ, ಝಾನ್ಸಿರಾಣಿ ಲಕ್ಮೀ ಬಾಯಿ ಸೇರಿದಂತೆ ವಿವಿಧ ರಾಷ್ಟ್ರಪುರುಷರ ವೇಷದಲ್ಲಿ ಭಾಗವಹಿಸಿದ್ದ ಮಕ್ಕಳು ಗಮನ ಸೆಳೆದರು. ಹಾಸ್ಯ ಕಲಾವಿದ ರಾಜು ಗೆದ್ದೆಪ್ಪನವರ ತಲೆಗುಂಡು ಹೊಡೆಸಿಕೊಂಡು ಮಹಾತ್ಮ ಗಾಂಧಿ ವೇಷಧಲ್ಲಿ ಪ್ರತಿಭಟನೆಯ ಜಾಥಾ ಮತ್ತು ಹೋರಾಟ ವೇದಿಕೆಯಲ್ಲಿ ಸಂಜೆವರೆಗೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಜಾಥಾದಲ್ಲಿ ಭಾಗವಹಿಸಿದ್ದ ಹಲವರು ಗಾಂಧಿ ಛದ್ಮವೇಷಧಾರಿಗಳೊಂದಿಗೆ ಸೆಲ್ಪಿ ತೆಗೆದುಕೊಂಡು ಸಂಭ್ರಮಿಸಿದರು.

ಶೀಘ್ರ ತಾಲೂಕು ಘೋಷಣೆಗೆ ಒತ್ತಾಯ :

ತಾಲಕು ಹೋರಾಟ ವೇದಿಕೆ ಪ್ರಧಾನ ಕಾರ್ಯದರ್ಶಿ ಚನಬಸು ಹುರಕಡ್ಲಿ ಮಾತನಾಡಿ, ಮಹಾಲಿಂಗಪುರ ತಾಲೂಕು ಆಗಲು ಎಲ್ಲಾ ರೀತಿಯಲ್ಲಿಯೂ ಯೋಗ್ಯವಾದ ಪಟ್ಟಣವಾಗಿದೆ. ಹೋರಾಟವು ಈಗಾಗಲೇ 200 ದಿನಗಳನ್ನು ಪೂರೈಸಿರುವುದರಿಂದ ತೇರದಾಳ ಮತಕ್ಷೇತ್ರದ ಶಾಸಕರು ಸರ್ಕಾರದ ಮೇಲೆ ಒತ್ತಡ ಹೇರಿ ಶೀಘ್ರ ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕೆಂದು ಒತ್ತಾಯಿಸಿದರು.

ನೇಕಾರ ಮುಖಂಡ ಅಂಬಾದಾಸ ಕಾಮೂರ್ತಿ, ರನ್ನ ಬೆಳಗಲಿ ಗ್ರಾ.ಪಂ. ಮಾಜಿ ಅಧ್ಯಕ್ಷ ಸಿದ್ದುಗೌಡ ಪಾಟೀಲ, ರೈತ ಸಂಘದ ಗಂಗಾಧರ ಮೇಟಿ, ಸುಭಾಸ ಶಿರಬೂರ, ಬಂದು ಪಕಾಲಿ, ಆಮ ಆದ್ಮಿಯ ಅರ್ಜುನ ಹಲಗಿಗೌಡರ, ಹೋರಾಟ ವೇದಿಕೆ ಅಧ್ಯಕ್ಷ ಸಂಗಪ್ಪ ಹಲ್ಲಿ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಮೋರೆ, ಖಜಾಂಚಿಗಳಾದ ನಿಂಗಪ್ಪ ಬಾಳಿಕಾಯಿ, ಮಹಾದೇವ ಮೇಟಿ, ಮಹಿಳಾ ಸಂಘದ ಭಾರತಿ ಹಿಟ್ಟಿನಮಠ, ಕಾಂಗ್ರೆಸ್ ಮುಖಂಡ ಮಲ್ಲಪ್ಪ ಸಿಂಗಾಡಿ ಸೇರಿದಂತೆ ಹಲವರು ಮಾತನಾಡಿ 30 ವರ್ಷಗಳ ಬೇಡಿಕೆ ಹಾಗೂ ಎಲ್ಲಾ ರೀತಿಯಲ್ಲಿಯೂ ಯೋಗ್ಯವಾದ ಮಹಾಲಿಂಗಪುರ ಪಟ್ಟಣವನ್ನು ಅತಿ ಶೀಘ್ರದಲ್ಲೇ ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕೆಂದು ಜನಪ್ರತಿನಿಧಿಗಳು ಮತ್ತು ಸರ್ಕಾರಕ್ಕೆ ಆಗ್ರಹಿಸಿದರು.

200ನೇ ದಿನ ಬೃಹತ್ ಪ್ರತಿಭಟನಾ ಮೆರವಣಿಗೆ ಮತ್ತು ಹೋರಾಟದಲ್ಲಿ ಡಾ| ಅಜೀತ ಕನಕರಡ್ಡಿ, ಎಸ್.ಎಂ.ಪಾಟೀಲ, ಶಿವನಗೌಡ ಪಾಟೀಲ, ಭೀಮಪ್ಪ ಪೂಜೇರಿ, ಶ್ರೀಶೈಲಪ್ಪ ಬಾಡನವರ, ಡಾ. ಎಂ.ಬಿ.ಪೂಜೇರಿ, ಸಿದ್ದರಾಮ ಯರಗಟ್ಟಿ, ನ್ಯಾಯವಾದಿ ಎಂ.ಎಸ್.ಮನ್ನಯ್ಯನವರಮಠ, ಪ್ರಕಾಶ ಬಾಡನವರ, ಸಂಜು ಬಾರಕೋಲ, ವೆಂಕಣ್ಣ ಬಿರಾದರ, ಬಸವರಾಜ ಹುಲ್ಯಾಳ, ವಿಜಯ ಸಬಕಾಳೆ, ಆನಂದ ಬೆಳ್ಳಿಕಟ್ಟಿ, ಬಸವರಾಜ ಗಿರಿಸಾಗರ, ಶಿವರಾಜ್ ಕಡಬಲ್ಲವರ, ರವಿ ಗಿರಿಸಾಗರ, ಮಹಾಂತೇಶ ಪಾತ್ರೋಟ, ಹಣಮಂತ ಬಂಡಿವಡ್ಡರ, ಮಹಾಲಿಂಗ ಹುದ್ದಾರ, ಪುರಸಭೆ ಸದಸ್ಯೆ ಸವಿತಾ ಹುರಕಡ್ಲಿ, ಮಹಾನಂದಾ ಗುನಾರಿ, ಭಾರತಿ ಹಿಟ್ಟಿನಮಠ, ಅರುಣಾ ಹಣಗಂಡಿ, ರಾಜಶ್ರೀ ಗಿರಿಸಾಗರ, ಬಸವರಾಜ ಹುರಕಡ್ಲಿ, ತಾಲುಕಾ ಹೋರಾಟ ಸಮಿತಿಯ ಪರಪ್ಪ ಸತ್ತಿಗೇರಿ, ಸಿದ್ದು ಶಿರೋಳ, ಮಾರುತಿ ಕರೋಶಿ, ಮನೋಹರ ಶಿರೋಳ, ಸುರೇಶ ಮಡಿವಾಳರ, ರಪೀಕ್ ಮಾಲದಾರ, ವಿರೇಶ ನ್ಯಾಮಗೌಡ, ಭೀಮಸಿ ಕೌಜಲಗಿ ಸೇರಿದಂತೆ ನೂರಾರು ಜನರು 200ನೇ ದಿನದ ತಾಲೂಕು ಹೋರಾಟದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.