ತೀವ್ರಗೊಂಡ ಮಹಾಲಿಂಗಪುರ ತಾಲೂಕು ಹೋರಾಟ

ಮಹಾಲಿಂಗಪುರ ಹಾಗೂ 9 ಹಳ್ಳಿಗಳನ್ನು ತೇರದಾಳ ತಾಲೂಕಿಗೆ ಸೇರಿಸಬೇಡಿ

Team Udayavani, Apr 6, 2022, 7:56 PM IST

ತೀವ್ರಗೊಂಡ ಮಹಾಲಿಂಗಪುರ ತಾಲೂಕು ಹೋರಾಟ

ಮಹಾಲಿಂಗಪುರ: ನಡೆಯಲಿರುವ ಬಾಗಲಕೋಟೆಯ ಕೆಡಿಪಿ ಸಭೆಯಲ್ಲಿ ಯಾವುದೇ ಕಾರಣಕ್ಕೂ ಮಹಾಲಿಂಗಪುರ ಪಟ್ಟಣ ಮತ್ತು ಸುತ್ತಲಿನ 9 ಹಳ್ಳಿಗಳನ್ನು ನೂತನ ತೇರದಾಳ ತಾಲೂಕಿಗೆ ಸೇರಿಸಬೇಡಿ, ಒಂದು ವೇಳೆ ಸೇರಿಸಿದರೇ ಉಗ್ರಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಮಹಾಲಿಂಗಪೂರ ಹೋರಾಟ ಸಮೀತಿಯ ಸದಸ್ಯರು, ವಿವಿಧ ಪಕ್ಷಗಳ ಮುಖಂಡರುಗಳು ರಾಜ್ಯ ಸರ್ಕಾರ ಮತ್ತು ಸಂಬಂಧಿಸಿದ ಸಚಿವರುಗಳು, ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ಬುಧವಾರ ಮಹಾಲಿಂಗಪುರ ಹಾಗೂ ಸುತ್ತಮುತ್ತಲಿನ 9 ಗ್ರಾಮಗಳ ಹಿರಿಯರು, ವಿವಿಧ ಪಕ್ಷಗಳು ಮುಖಂಡರ ನೇತೃತ್ವದಲ್ಲಿ ಮಹಾಲಿಂಗಪುರ ತಾಲೂಕಿಗೆ ಒತ್ತಾಯಿಸಿ ಹೋರಾಟ ಸಮಿತಿಯು ಕರೆನೀಡಿದ್ದ ಮಹಾಲಿಂಗಪುರ ಬಂದ್ ಹಾಗೂ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ವಿವಿಧ ಪಕ್ಷಗಳ ಮುಖಂಡರು, ರೈತ ಸಂಘದ ಮುಖಂಡರು, ಹೋರಾಟ ಸಮಿತಿಯ ಮುಖಂಡರುಗಳು ಮಾತನಾಡಿ ಕಳೆದ 30 ವರ್ಷಗಳಿಂದ ಹೋರಾಟ ಮಾಡುತ್ತಿದ್ದರು ಸಹ ಸರ್ಕಾರಗಳು ನಮ್ಮ ಬೇಡಿಕೆಗಳಿಗೆ ಸ್ಪಂದಿಸಿಲ್ಲ. ಈ ಬಾರಿಯ ಹೋರಾಟವು ಮಾಡು ಇಲ್ಲವೇ ಮಡಿ ಹೋರಾಟವಾಗಿರುವ ಕಾರಣ, ಈ ಬಾರಿ ಮಹಾಲಿಂಗಪುರ ತಾಲೂಕು ಘೋಷಣೆಯಾಗುವರೆಗೂ ಹೋರಾಟ ನಿರಂತರವಾಗಿ ಮುನ್ನಡೆಯುತ್ತದೆ ಎಂದರು.

ಈಗಿರುವ ಪಕ್ಷಾತೀತ ಮತ್ತು ಜಾತ್ಯಾತೀತ ಹೋರಾಟ ಸಮಿತಿಗೆ ಮಹಾಲಿಂಗಪುರ ಮತ್ತು 9 ಗ್ರಾಮಗಳ ಸಾರ್ವಜನಿಕರು, ಸರ್ವ ಪಕ್ಷಗಳ ಮುಖಂಡರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಹೋರಾಟದ ಯಶಸ್ವಿಯಾಗಿ ತನು,ಮನ, ಧನದ ಮೂಲಕ ನಿರಂತರವಾಗಿ ಹೋರಾಟಕ್ಕೆ ಬೆಂಬಲಿಸಬೇಕು. ಮಹಾಲಿಂಗಪುರ ಮತ್ತು ಸುತ್ತಮುತ್ತಲಿನ ಗ್ರಾಮಗಳನ್ನು ನೂತನ ತೇರದಾಳ ತಾಲೂಕಿಗೆ ಸೇರಿಸುವದು ಅವೈಜ್ಞಾನಿಕ, ಒಂದು ತಾಲೂಕು(ರಬಕವಿ-ಬನಹಟ್ಟಿ)ನ್ನು ದಾಟಿ ತಾಲೂಕಿಗೆ ಹೋಗಬೇಕಾಗುವದು. ಅದಕ್ಕಾಗಿ ಯಾವುದೇ ಕಾರಣ ಸೇರಿಸಬಾರದು ಎಂದು ಒತ್ತಾಯಿಸಿದರು.

ರೈತ ಸಂಘದ ಮುಖಂಡರಾದ ಸುಭಾಸ ಶಿರಬೂರ, ಗಂಗಾಧರ ಮೇಟಿ, ಬಂದು ಪಕಾಲಿ, ಜಿಪಂ ಮಾಜಿ ಸದಸ್ಯ ಮಹಾಂತೇಶ ಹಿಟ್ಟಿನಮಠ, ಎಂ.ಎಸ್.ಉಳ್ಳೇಗಡ್ಡಿ, ಸಿದ್ದು ಕೊಣ್ಣುರ, ಸಂಗಪ್ಪ ಹಲ್ಲಿ, ಡಾ| ಎ.ಆರ್.ಬೆಳಗಲಿ, ಮನೋಹರ ಶಿರೋಳ, ಮಹಾದೇವ ಮಾರಾಪೂರ, ಯಲ್ಲನಗೌಡ ಪಾಟೀಲ, ಬಸವನಗೌಡ ಪಾಟೀಲ, ಧರೆಪ್ಪ ಸಾಂಗ್ಲಿಕರ್, ಎಂ.ಆಯ್.ಕೋಳಿಗುಡ್ಡ, ನಿಂಗಪ್ಪ ಬಾಳಿಕಾಯಿ, ಚನಬಸು ಹುರಕಡ್ಲಿ ಅವರು ಮಾತನಾಡಿ ಮಹಾಲಿಂಗಪುರ ಹಾಗೂ ಸುತ್ತಮುತ್ತಲಿನ 9 ಗ್ರಾಮಗಳನ್ನು ಯಾವುದೇ ಕಾರಣಕ್ಕೂ ನೂತನ ತೇರದಾಳ ತಾಲೂಕಿಗೆ ಸೇರಿಸಬಾರದು, ಮುಧೋಳ ತಾಲೂಕಿನ ರನ್ನಬೆಳಗಲಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳನ್ನು ಸೇರಿಸಿ ಮಹಾಲಿಂಗಪುರ ನೂತನ ತಾಲೂಕನ್ನು ಘೋಷಿಸಬೇಕೆಂದು ಒತ್ತಾಯಿಸಿದರು.

ಬೃಹತ್ ಪ್ರತಿಭಟನಾ ಮೇರವಣಿಗೆ : ಮಹಾಲಿಂಗಪುರ ತಾಲೂಕಾ ಘೋಷಣೆಗೆ ಒತ್ತಾಯಿಸಿ ತಾಲೂಕಾ ಹೋರಾಟ ಸಮಿತಿ ಸದಸ್ಯರು ಪಟ್ಟಣದ ಬಸವವೃತ್ತದಿಂದ ಡಬಲ್ ರಸ್ತೆ, ನಡಚೌಕಿ, ಜವಳಿಬಜಾರ, ಗಾಂಧಿವೃತ್ತ ಮಾರ್ಗವಾಗಿ ಚನ್ನಮ್ಮ ವೃತ್ತಕ್ಕೆ ಬಂದು ಟೈಯರ್‌ಗೆ ಬೆಂಕಿ ಹಚ್ಚಿ, ಮಾನವ ಸರಪಳಿ ನಿರ್ಮಿಸಿ ಅರ್ಧಗಂಟೆಗಳ ಕಾಲ ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿಯನ್ನು ಬಂದ ಮಾಡಿ, ಘೋಷಣೆಗಳನ್ನು ಕೂಗಿ, ಪ್ರತಿಭಟನೆ ನಡೆಸಿದರು.

ಅಲ್ಲಿಂದ ಪುರಸಭೆಗೆ ಆಗಮಿಸಿ ರಬಕವಿ-ಬನಹಟ್ಟಿ ಉಪ ತಹಶೀಲ್ದಾರ ಎಸ್.ಎಲ್.ಕಾಗಿಯವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ನಂತರ ಮಹಾಲಿಂಗಪುರ ಹಾಗೂ ಸುತ್ತಲಿನ 9 ಗ್ರಾಮಗಳಿಂದ 20ಕ್ಕೂ ಹೆಚ್ಚು ವಾಹನಗಳ ಮೂಲಕ ಬಾಗಲಕೋಟೆ ಕೆಡಿಪಿ ಸಭೆಗೆ ಹೋಗಿ, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಸಚಿವರು, ಶಾಸಕರು, ಅಧಿಕಾರಿಗೆ ಮುತ್ತಿಗೆ ಹಾಕಿ ಯಾವುದೇ ಕಾರಣಕ್ಕೂ ಮಹಾಲಿಂಗಪುರ ಹಾಗೂ 9 ಗ್ರಾಮಗಳನ್ನು ನೂತನ ತೇರದಾಳ ತಾಲೂಕಿಗೆ ಸೇರಿಸದಂತೆ ಪ್ರತಿಭಟನೆ ನಡೆಸಲು ತೀರ್ಮಾಣಿಸಲಾಯಿತು. ಗುರುವಾರ ಬಾಗಲಕೋಟೆಯಲ್ಲಿ ನಡೆಯುವ ಬೆಳವಣಿಗೆಯನ್ನು ನೋಡಿಕೊಂಡು, ಬರುವ ಶನಿವಾರ ಏ.9ರಂದು ಮುಂಜಾನೆ 10-30 ಕ್ಕೆ ತಾಲೂಕಾ ಹೋರಾಟದ ಮುಂದಿನ ರೂಪರೇಶೆಗಳ ಕುರಿತು ಬೃಹತ್ ಸಭೆ ನಡೆಸಲು ನಿರ್ಣಯಿಸಿ, ಸಭೆಯಲ್ಲಿ ಪಟ್ಟಣ ಹಾಗೂ ಗ್ರಾಮೀಣ ಭಾಗ ಸೇರಿ ಬೃಹತ್ ಸಂಖ್ಯೆಯಲ್ಲಿ ಸಾರ್ವಜನಿಕರು, ಮುಖಂಡರು ಭಾಗವಹಿಸಲು ತಿಳಿಸಲಾಯಿತು.

ತಾಲೂಕಾ ಹೋರಾಟಕ್ಕೆ ಪಟ್ಟಣದ ಅಂಗಡಿಕಾರರು ಅಂಗಡಿ ಮುಗ್ಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ ಮಾಡಿದ್ದರು. ಹೋರಾಟದಲ್ಲಿ ತಾಲೂಕಾ ಹೋರಾಟ ಸಮಿತಿ ಸದಸ್ಯರು, ಸರ್ವ ಪಕ್ಷಗಳ ಮುಖಂಡರು, ಕಾರ್ಯಕರ್ತರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು. ಠಾಣಾಧಿಕಾರಿ ವಿಜಯ ಕಾಂಬಳೆ ಮತ್ತು ಪೊಲೀಸ್ ಸಿಬ್ಬಂದಿ ಸೂಕ್ತಬಂದೋಬಸ್ತ್ ಒದಗಿಸಿದ್ದರು.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.