ಮಹಾಲಿಂಗಪುರ ತಾಲೂಕು ಆಗುವರೆಗೂ ಹೋರಾಟ ನಿರಂತರ


Team Udayavani, Aug 17, 2022, 7:21 PM IST

ಮಹಾಲಿಂಗಪುರ ತಾಲೂಕು ಆಗುವರೆಗೂ ಹೋರಾಟ ನಿರಂತರ

ಮಹಾಲಿಂಗಪುರ: ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿಸಲು ಒತ್ತಾಯಿಸಿ ಕಳೆದ ಏಪ್ರೀಲ್ 14 ರಿಂದ ನಡೆಯುತ್ತಿರುವ ಮಹಾಲಿಂಗಪುರ ತಾಲೂಕು ಹೋರಾಟವು ಬುಧವಾರ 126 ದಿನಗಳನ್ನು ಪೂರೈಸಿದೆ.

ಹೋರಾಟ ಪ್ರಾರಂಭಿಸಿ 125 ದಿನಗಳು ಕಳೆದರೂ ಸರ್ಕಾರದಿಂದ ಸೂಕ್ತ ಸ್ಪಂದನೆ ದೊರೆಯದ ಕಾರಣ ಸಾಮೂಹಿಕ ನಾಯಕತ್ವದಲ್ಲಿ ಬುಧವಾರ ಕರೆ ನೀಡಿದ್ದ ಮಹಾಲಿಂಗಪುರ ಬಂದ್ ಬೃಹತ್ ಪ್ರತಿಭಟನೆಯ ನಂತರ ಹೋರಾಟ ವೇದಿಕೆಯಲ್ಲಿ ನಡೆದ ಸಭೆಯಲ್ಲಿ ಪಕ್ಷಾತೀತವಾಗಿ ಮಹಾಲಿಂಗಪೂರ ತಾಲೂಕು ಹೋರಾಟ ಆಗುವರೆಗೂ ಹೋರಾಟವನ್ನು ಮುಂದುವರೆಸುವುದು, ಮುಖ್ಯವಾಗಿ ಬಾಗಲಕೋಟೆ ಜಿಲ್ಲಾಧಿಕಾರಿಗಳು ಹೋರಾಟ ವೇದಿಕೆಗೆ ಆಗಮಿಸಿ 125 ದಿನಗಳ ಮಹಾಲಿಂಗಪುರ ಹೋರಾಟದ ಕುರಿತು ಸರ್ಕಾರಕ್ಕೆ ಜಿಲ್ಲಾಡಳಿತದಿಂದ ನೀಡಿರುವ ವರದಿಯ ಮಾಹಿತಯನ್ನು ತಿಳಿಸಬೇಕೆಂದು ಹೋರಾಟಗಾರರು ಒತ್ತಾಯಿಸಿದರು.

ಮಹಾಲಿಂಗಪುರ ತಾಲೂಕು ಹೋರಾಟ ಸಮಿತಿಯ ಧರೆಪ್ಪ ಸಾಂಗ್ಲಿಕರ, ಸಂಗಪ್ಪ ಹಲ್ಲಿ, ಸಿದ್ದು ಪಾಟೀಲ, ನಿಂಗಪ್ಪ ಬಾಳಿಕಾಯಿ, ಚನ್ನಬಸು ಹುರಕಡ್ಲಿ, ಸಿದ್ದು ಶಿರೋಳ, ಮಹಾದೇವ ಮೇಟಿ, ಅರ್ಜುನ ಹಲಗಿಗೌಡರ, ಕಲಾವಿದ ರಂಗನಾಥ ಡಿ.ಕೆ, ರೈತ ಸಂಘದ ಮುತ್ತಪ್ಪ ಕೋಮಾರ, ಗಂಗಾಧರ ಮೇಟಿ, ಸುಭಾಸ ಶಿರಬೂರ, ಕಾಂಗ್ರೆಸ್ ಮುಖಂಡರಾದ ಎ.ಆರ್.ಬೆಳಗಲಿ, ಎಸ್.ಎಂ.ಉಳ್ಳಾಗಡ್ಡಿ, ರಂಗನಗೌಡ ಪಾಟೀಲ, ಗುರಲಿಂಗಯ್ಯಾ ಮಠಪತಿ, ಶಂಕರ ಹುಕ್ಕೇರಿ, ಡಾ| ಬಿ.ಡಿ.ಸೋರಗಾಂವಿ, ನ್ಯಾಯವಾದಿ ಬಿ.ವ್ಹೀ.ಕೆರೂರ, ಶಿವಲಿಂಗ ಟಿರ್ಕಿ, ಎಚ್.ಎಸ್.ಭಜಂತ್ರಿ  ಸೇರಿದಂತೆ ಹಲವರು ಮಾತನಾಡಿ ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿಯವರು ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಿ, ಮಹಾಲಿಂಗಪೂರ ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕೆಂದು ಒತ್ತಾಯಿಸಿದರು.

ತಹಶೀಲ್ದಾರಗೆ ಮನವಿ : ಮಧ್ಯಾಹ್ನ ತಾಲೂಕು ಹೋರಾಟದ ವೇದಿಕೆಗೆ ಭೇಟಿ ನೀಡಿದ ರಬಕವಿ-ಬನಹಟ್ಟಿಯ ತಹಶೀಲ್ದಾರ ಸಂಜಯ ಇಂಗಳೆ ಅವರಿಗೆ ತಾಲೂಕು ಹೋರಾಟ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.

ಮನವಿ ಸ್ವೀಕರಿಸಿದ ತಹಶೀಲ್ದಾರ ಸಂಜಯ ಇಂಗಳೆ ಮಾತನಾಡಿ ನೀವು ನೀಡಿದ ಮನವಿಯನ್ನು ಇಂದೇ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಕಳಿಸುತ್ತೇವೆ. ಇಂದು ಕೆರೆಗಳ ಒತ್ತುವರಿ ಕುರಿತು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ವಿಶೇಷ ಸಭೆಯ ನಿಮಿತ್ಯ ಜಿಲ್ಲಾಧಿಕಾರಿಗಳು ತಾಲೂಕು ಹೋರಾಟ ವೇದಿಕೆಗೆ ಬರಲು ಸಾಧ್ಯವಾಗಿಲ್ಲ. ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಜಿಲ್ಲಾಧಿಕಾರಿಗಳು ಭೇಟಿ ನೀಡುವ ದಿನಾಂಕವನ್ನು ತಿಳಿಸಲಾಗುವುದು ಎಂದರು. ಡಿಸಿ ಅವರು ಬರುವ ದಿನಾಂಕವನ್ನು ಗುರುವಾರವೇ ತಿಳಿಸಬೇಕೆಂದು ಹೋರಾಟ ಸಮಿತಿ ಸದಸ್ಯರು ಒತ್ತಾಯಿಸಿದರು.

ಬಸನಗೌಡ ಪಾಟೀಲ, ಮಹಾಂತೇಶ ಹಿಟ್ಟಿನಮಠ, ಆರ್.ಟಿ.ಪಾಟೀಲ, ಯಲ್ಲನಗೌಡ ಪಾಟೀಲ, ಜಾವೇದ ಬಾಗವಾನ, ಬಸವರಾಜ ಹಿಟ್ಟಿನಮಠ, ಶ್ರೀಮಂತ ಹಳ್ಳಿ, ಸುರೇಶ ಮಡಿವಳರ, ಪಂಡಿತ ಪೂಜೇರಿ, ಬನಪ್ಪಗೌಡ ಪಾಟೀಲ, ಸಂಜು ಬಾರಕೋಲ, ಎಂ.ಎಸ್.ಕಂಬಿ, ಬಸವರಾಜ ರಾಯರ, ಮಲ್ಲಪ್ಪ ಸಿಂಗಾಡಿ, ಮಹಾಲಿಂಗಪ್ಪ ಜಕ್ಕನ್ನವರ, ಮನೋಹರ ಶಿರೋಳ, ಮಲ್ಲಪ್ಪ ಭಾವಿಕಟ್ಟಿ, ಈಶ್ವರ ಚಮಕೇರಿ, ಎಸ್.ಎಂ.ಪಾಟೀಲ, ಚನ್ನು ದೇಸಾಯಿ, ಪರಪ್ಪ ಸತ್ತಿಗೇರಿ, ಅಣ್ಣೇಶ ಉಳ್ಳಾಗಡ್ಡಿ, ರಾಜು ಭಾವಿಕಟ್ಟಿ, ಜಿ.ಎಸ್.ಬರಗಿ, ಅಲ್ಲಪ್ಪ ಗುಂಜಿಗಾಂವಿ, ಮುಸ್ತಕ ಚಿಕ್ಕೋಡಿ, ಪರಪ್ಪ ಹುದ್ದಾರ, ಮಹಾಲಿಂಗಪ್ಪ ಲಾತೂರ, ಮಹಾಲಿಂಗಪ್ಪ ಸನದಿ, ಗುರುಪಾದ ಅಂಬಿ, ಕರೆಪ್ಪ ಮೇಟಿ ಸೇರಿದಂತೆ ಮಹಾಲಿಂಗಪುರ ಹಾಗೂ ಸುತ್ತಮುತ್ತಲಿನ 12 ಗ್ರಾಮಗಳ ಹಿರಿಯರು, ವಿವಿಧ ಪಕ್ಷಗಳ ಮುಖಂಡರು, ಹಲವಾರು ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು.

 

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.