ಬಾಂಗ್ಲಾದೇಶಕ್ಕೆ ರಫ್ತಾಯ್ತು ಮೆಕ್ಕೆ ಜೋಳ

25 ಸಾವಿರ ಕ್ವಿಂಟಲ್‌ ರೈಲಿನಲ್ಲಿ ಸಾಗಾಟ

Team Udayavani, Nov 20, 2020, 3:29 PM IST

ಬಾಂಗ್ಲಾದೇಶಕ್ಕೆ ರಫ್ತಾಯ್ತು ಮೆಕ್ಕೆ ಜೋಳ

ಬಾಗಲಕೋಟೆ: ಕೋವಿಡ್ ಹಾಗೂ ಪ್ರವಾಹದ ಸಂಕಷ್ಟದಲ್ಲೂ ರೈತರು ಕಷ್ಟಪಟ್ಟು ಬೆಳೆದ ಜಿಲ್ಲೆಯ ಮೆಕ್ಕೆಜೋಳ ಪಕ್ಕದ ಬಾಂಗ್ಲಾದೇಶಕ್ಕೆ ಸಾಗಾಟ ಮಾಡಲಾಗಿದೆ.

ಜಿಲ್ಲೆಯ ಸುಮಾರು 12,853 ರೈತರು ಮೆಕ್ಕೆಜೋಳ ಬೆಳೆದಿದ್ದು, ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆ ಮೂಲಕ ಖರೀದಿ ಮಾಡಲಾಗಿದೆ. ಜಿಲ್ಲೆಯ ವರ್ತಕರು ರೈತರಿಂದ ಖರೀದಿಸಿದ್ದ ಸುಮಾರು 25 ಸಾವಿರ ಕ್ವಿಂಟಲ್‌ ಮೆಕ್ಕೆಜೋಳವನ್ನು ಗುರುವಾರ ಗೂಡ್ಸ್‌ ರೈಲಿನ ಮೂಲಕ ಬಾಂಗ್ಲಾದೇಶಕ್ಕೆ ಕಳುಹಿಸಲಾಯಿತು. ಸುಮಾರು 42 ಬೋಗಿಗಳಲ್ಲಿ ತುಂಬಿದ್ದ 25 ಸಾವಿರ ಕ್ವಿಂಟಲ್‌ ಮೆಕ್ಕೆಜೋಳ ರಫ್ತು ಕಾರ್ಯಕ್ಕೆ ಬಾಗಲಕೋಟೆ ಶಾಸಕ ಡಾ| ವೀರಣ್ಣ ಚರಂತಿಮಠ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ನಗರದ ಎಪಿಎಂಸಿ ವರ್ತಕರು ರೈತರಿಂದ ಖರೀದಿಸಿದ್ದ 2500 ಟನ್‌ ಮೆಕ್ಕೆಜೋಳವನ್ನು 42ಬೋಗಿಗಳ ಗೂಡ್ಸ್‌ ರೈಲಿನಲ್ಲಿ ಬಾಗಲಕೋಟೆಯಿಂದ ನೇರವಾಗಿ ಬಾಂಗ್ಲಾದೇಶಕ್ಕೆ ರಫ್ತು ಮಾಡಿದ್ದಾರೆ. ಗೂಡ್ಸ್‌ ರೈಲಿನ ಬಾಡಿಗೆ ಹಣ 75 ಲಕ್ಷವನ್ನು ರೈಲ್ವೆ ಇಲಾಖೆಗೆ ಪಾವತಿಸಿದ್ದಾರೆ. ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದರಿಂದ ರೈತರು ಅತ್ಯುತ್ತಮ ಗುಣಮಟ್ಟದ ಮೆಕ್ಕೆಜೋಳ ಬೆಳೆದಿದ್ದಾರೆ. ಸದ್ಯ ಉತ್ತಮ ಬೆಲೆ ಕೂಡ ಸಿಕ್ಕಿದೆ. ಬೇರೆ ದೇಶಕ್ಕೆ ಮೆಕ್ಕೆಜೋಳ ರಫ್ತು ಮಾಡುವುದರಿಂದ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ತೀವ್ರ ಮಳೆ, ಪ್ರವಾಹ ಹಾಗೂ ಕೋವಿಡ್ ದಿಂದ ರೈತರು ಸಂಕಷ್ಟದಲ್ಲಿದ್ದರು. ಮೆಕ್ಕೆಜೋಳ ಬೆಳೆದ ರೈತರಿಗೆ ಸರ್ಕಾರವೂ ತಲಾ 5 ಸಾವಿರ ಸಹಾಯಧನ ನೀಡಿದೆ. ಇದರ ಜತೆಗೆ ಉತ್ತಮ ಗುಣಮಟ್ಟದ ಮೆಕ್ಕೆಜೋಳವನ್ನು ವಿದೇಶಕ್ಕೆ ರಫ್ತು ಮಾಡುತ್ತಿದ್ದು, ಬಾಗಲಕೋಟೆಯ ರೈತರ ಹಾಗೂ ವರ್ತಕರ ಸಂಘಟಿತ ವಿಶೇಷ ಸಾಧನೆ ಇದಾಗಿದೆ ಎಂದರು.

ಗೂಡ್ಸ್‌ ರೈಲಿನ 42 ಬೋಗಿಗಳಲ್ಲಿ 2500 ಟನ್‌ ಮೆಕ್ಕೆಜೋಳ ರಫ್ತು ಮಾಡಲಾಗಿದೆ. ಸುಮಾರು 350ರಿಂದ 400 ಕೋಟಿ ಮೌಲ್ಯದ ಮೆಕ್ಕೆಜೋಳ ಇದಾಗಿದೆ. ಅಲ್ಲದೇ ಈ ಬಾರಿ ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಮಳೆಯಾಗಿದ್ದರಿಂದ ಅಲ್ಲಿ ಮೆಕ್ಕೆಜೋಳ ಹೆಚ್ಚಿನ ಪ್ರಮಾಣದಲ್ಲಿ ಬೆಳೆದಿಲ್ಲ. ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಬೆಳೆದ ಮೆಕ್ಕೆಜೊಳಕ್ಕೆ ವಿದೇಶಗಳಲ್ಲಿ ಉತ್ತಮ ಬೆಲೆ ಇದೆ ಎಂದರು.

ವರ್ತಕ ವಿಶ್ವನಾಥ ಅಥಣಿ ಮಾತನಾಡಿ, ಜಿಲ್ಲೆಯ ರೈತರಿಂದ ಖರೀದಿಸಿದ ಮೆಕ್ಕೆಜೋಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ. ಗ್ರೇನ್‌ಸೈಜ್‌ನ ಮೆಕ್ಕೆಜೋಳಕ್ಕೆ ಭಾರೀ ಬೇಡಿಕೆ ಇದ್ದು, ಅದನ್ನೇ ಬಾಗಲಕೋಟೆಯಿಂದ ಪ್ರಥಮ ಬಾರಿಗೆ ಬಾಂಗ್ಲಾದೇಶಕ್ಕೆ ರಫ್ತು ಮಾಡಲಾಗುತ್ತಿದೆ ಎಂದರು.

ವರ್ತಕರೂ ಆಗಿರುವ ಬಿವಿವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ವರ್ತಕರಾದ ರವಿ ಕುಮಟಗಿ, ಮುರಗೇಶ ನಾಗರಾಳ, ನಗರಸಭೆ ಪೌರಾಯುಕ್ತ ಮುನಿಶಾಮಪ್ಪ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.