ಮೀಸಲಿರಿಸಿದ ಹಣ ಸಮರ್ಪಕ ಬಳಕೆ ಮಾಡಿ
•ವಾಲ್ಮೀಕಿ ಭವನಕ್ಕೆ ಅನುದಾನ ಕೊಟ್ಟರೂ ಕೆಲಸ ಮಾಡಿಲ್ಲ •ಎಸ್ಸಿಪಿ-ಟಿಎಸ್ಪಿ ಅನುದಾನ ಸದ್ಬಳಕೆಗೆ ಸೂಚನೆ
Team Udayavani, Jun 16, 2019, 10:03 AM IST
ಬಾಗಲಕೋಟೆ: ನಗರದಲ್ಲಿ ಜಿಲ್ಲಾ ಮಟ್ಟದ ಜಾಗೃತ ನಿಯಂತ್ರಣ ಹಾಗೂ ಉಸ್ತುವಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಮಾತನಾಡಿದರು.
ಬಾಗಲಕೋಟೆ: ವಿವಿಧ ಇಲಾಖೆಯ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಗಳ ಕಾರ್ಯಕ್ರಮಗಳಿಗೆ ಮೀಸಲಿರಿಸಿದ ಹಣವನ್ನು ಸಮರ್ಪಕವಾಗಿ ಬಳಕೆಯಾಗದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶನಿವಾರ ಜರುಗಿದ ಎಸ್ಸಿಪಿ, ಟಿಎಸ್ಪಿ ಪ್ರಗತಿ ಪರಿಶೀಲನೆ, ಜಿಲ್ಲಾ ಮಟ್ಟದ ಜಾಗೃತ ನಿಯಂತ್ರಣ ಹಾಗೂ ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.
ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆ ಕಾರ್ಯಕ್ರಮಗಳಿಗೆ ನಿಗದಿಪಡಿಸಿದ ಅನುದಾನ ಕಡ್ಡಾಯವಾಗಿ ಖರ್ಚು ಮಾಡಬೇಕು. ಸಂಪೂರ್ಣವಾಗಿ ಖರ್ಚಾಗದೇ ಇದ್ದಲ್ಲಿ ಅಂತಹ ಅಧಿಕಾರಿಗಳ ಮೇಲೆ ಸೂಕ್ತ ಕ್ರಮಕ್ಕಾಗಿ ಹಿಂಜರಿಯುವುದಿಲ್ಲ ಎಂದು ತಿಳಿಸಿದರು.
ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪಂಗಡ ವರ್ಗದವರ ವಿಕಲಚೇತನರ ಸರ್ವೇ ಮಾಡಿ ಮಾಹಿತಿ ನೀಡುವಂತೆ ಆಯಾ ತಾಲೂಕಿನ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಆದರೆ ಬಾಗಲಕೋಟೆ ಮತ್ತು ಹುನಗುಂದ ತಾಲೂಕು ಹೊರತುಪಡಿಸಿ ಉಳಿದ ತಾಲೂಕಿನ ಮಾಹಿತಿ ನೀಡದ್ದನ್ನು ಕಂಡ ಜಿಲ್ಲಾಧಿಕಾರಿಗಳು ಶೀಘ್ರವಾಗಿ ಮಾಹಿತಿ ನೀಡಲು ಸೂಚಿಸಿದರು. ಅಲ್ಲದೇ ಜಿಲ್ಲೆಯಲ್ಲಿ ಈಗಾಗಲೇ 6ರಿಂದ 18 ವರ್ಷದೊಳಗಿನ 844 ಮಕ್ಕಳ ಪೈಕಿ 84 ಮಕ್ಕಳನ್ನು ಮರಳಿ ಶಾಲೆಗೆ ಕರೆತರಲಾಗಿರುವ ವಿಷಯವನ್ನು ಸಭೆಗೆ ತಿಳಿಸಿದಾಗ ಶಾಲೆ ಬಿಟ್ಟ ಪ್ರತಿಯೊಂದು ಮಗು ಮರಳಿ ಶಾಲೆಗೆ ದಾಖಲಾಗಬೇಕು. ಪ್ರತಿಯೊಬ್ಬ ಬಿಇಓ ಪ್ರತಿನಿದ ಒಂದು ಮಗುವನ್ನಾದರು ಶಾಲೆಗೆ ದಾಖಲಿಸಲು ಕಾಳಜಿ ವಹಿಸಬೇಕು ಎಂದು ತಿಳಿಸಿದರು.
ವಿವಿಧ ಸ್ಥಳೀಯ ಸಂಸ್ಥೆಗಳು ಸಂಗ್ರಹಿಸಲಾದ ಹಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ವರ್ಗಕ್ಕೆ ಮೀಸಲಿರಿಸಲಾದ ಹಣ ಸಂಪೂರ್ಣ ಖರ್ಚಾಗಬೇಕು. ವಿನಾಕಾರಣ ಸಬೂಬು ಹೇಳಬಾರದು. ಸಭೆಯಲ್ಲಿ ಕೇಳಿದ ಪ್ರಶ್ನೆಗೆ ಮಾತ್ರ ಸೂಕ್ತ ಉತ್ತರ ನೀಡಬೇಕು. ವಿನಾಕಾರಣ ಸಮಯ ಹಾಳು ಮಾಡಬಾರದು. ಕೆಲಸದಲ್ಲಿ ಬೇಜವಾಬ್ದಾರಿತನ ತೋರಿದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದರ ಜೊತೆಗೆ ನಿಮ್ಮ ಮೇಲೆ ಪ್ರಕರಣ ದಾಖಲಿಸಲು ಹಿಂಜರಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಕೆಬಿಜಿಎನ್ಎಲ್ ಅವರು ಮೀಸಲಿರಿಸಿದ ಅನುದಾನದಲ್ಲಿ ಬೋರವೆಲ್ ಕೊರೆಯಲು ಅವಕಾಶ ಇದ್ದು, ನಾಮನಿರ್ದೇಶಿತ ಸದಸ್ಯ ಶಂಭುಗೌಡ ಪಾಟೀಲ ಸಭೆಗೆ ತಿಳಿಸಿದಾಗ ಬೋರ್ವೆಲ್ ಕೊರೆದ ಬಗ್ಗೆ ಕೆಬಿಜಿಎನ್ಎಲ್ ಅವರಿಂದ ಸಂಪೂರ್ಣ ಮಾಹಿತಿ ಪಡೆಯುವಂತೆ ಸೂಚಿಸಿದರು.
ಬಾದಾಮಿ ಪಟ್ಟಣದಲ್ಲಿ ವಾಲ್ಮೀಕಿ ಭವನ ನಿರ್ಮಾಣಕ್ಕಾಗಿ ಕಳೆದ 2ವರ್ಷಗಳಿಂದ ಅನುದಾನ ಬಿಡುಗಡೆ ಮಾಡಿದರೂ ಸಹ ಕೆಆರ್ಐಡಿಎಲ್ನವರು ಕಾಮಗಾರಿ ಪ್ರಾರಂಭಿಸದಿಲ್ಲ. ಸಂಬಂಧಿಸಿದ ಕಾರ್ಯನಿರ್ವಾಹಕ ಅಧಿಕಾರಿಗಳ ಮೇಲೆ ನೋಟಿಸ್ ಜಾರಿ ಮಾಡಿ ಬಿಡುಗಡೆ ಮಾಡಿದ ಹಣವನ್ನು ವಾಪಸ್ ಪಡೆದು ಇನ್ನು ಮುಂದೆ ಕೆಆರ್ಐಡಿಎಲ್ನವರಿಗೆ ಯಾವುದೇ ರೀತಿಯ ಕಾಮಗಾರಿ ನೀಡದಂತೆ ಸೂಚಿಸಲಾಯಿತು.
ನಿರ್ಮಿತಿ ಕೇಂದ್ರದಿಂದ ಒಟ್ಟು 40 ವಿವಿಧ ಭವನ ಹಾಗೂ ಸಮುದಾಯಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿ ಇಲಾಖೆಗೆ ಹಸ್ತಾಂತರಿಸಿದರು. ಇಲಾಖೆಯಿಂದ 2.13 ಕೋಟಿ ರೂ. ಬಾಕಿ ಉಳಿಸಿಕೊಂಡಿರುವುದಾಗಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶಂಕರಲಿಂಗ ಗೋಗಿ ಸಭೆಗೆ ತಿಳಿಸಿದರು. ಬಾಕಿ ಹಣ ನೀಡಲು ಕ್ರಮಕ್ಕಾಗಿ ಜಿಲ್ಲಾಧಿಕಾರಿಗಳು ಸೂಚಿಸಿದರು.
ಕಳೆದ ಸಾಲಿನಲ್ಲಿ ಮೀನುಗಾರಿಕೆ, ಅರಣ್ಯ, ಸಹಕಾರ, ಸಣ್ಣ ನೀರಾವರಿ, ಲೋಕೋಪಯೋಗಿ ಇಲಾಖೆ, ಭಾರಿ ನೀರಾವರಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಇಂಧನ ಇಲಾಖೆಗಳು ನೂರಕ್ಕೆ ನೂರರಷ್ಟು ಪ್ರಗತಿ ಸಾಧಿಸಿದ್ದಕ್ಕೆ ಸಭೆಯಲ್ಲಿ ಸಂತಸ ವ್ಯಕ್ತಪಡಿಸಿದರು.
ಕಡಿಮೆ ಪ್ರಗತಿ ಸಾಧಿಸಿದ ಆರೋಗ್ಯ, ನಗರಾಭಿವೃದ್ದಿ, ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳ ಕಾರ್ಯವೈಖರಿಯಿಂದ ಅಸಮಾದಾನಗೊಂಡರು. ಅಧಿಕಾರಿಗಳು ಮುತುವರ್ಜಿ ವಹಿಸಿ ಕಾಳಜಿ ವಹಿಸಿ ಹಾಗೂ ಕಾನೂನಾತ್ಮಕವಾಗಿ ಕೆಲಸ ಮಾಡುವಂತೆ ಸೂಚಿಸಿದರು.
ನಗರಾಭಿವೃದ್ದಿ ಇಲಾಖೆಯಲ್ಲಿ ವಿವಿಧ ಯೋಜನೆಗಳಿಗೆ ಸಂಪೂರ್ಣ ಖರ್ಚು ಮಾಡಿ ಉಳಿದ ಹಣಕ್ಕೆ ಇತರೆ ಕಾರ್ಯ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡುವಂತೆ ನಗರಾಭಿವೃದ್ಧಿ ಇಲಾಖೆಯ ಮೇಲಧಿಕಾರಿಗಳಿಗೆ ಪತ್ರ ಬರೆಯುವಂತೆ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು ಎಸ್ಸಿಪಿ ಯೋಜನೆಯಡಿ 97.12 ಕೋಟಿ ರೂ. ಖರ್ಚು ಮಾಡುವ ಮೂಲಕ ಶೇ.95.23 ಪ್ರಗತಿ ಸಾಧಿಸಿದರೆ, ಟಿಎಸ್ಪಿ ಯೋಜನೆಯಡಿ 37.13 ಕೋಟಿ ರೂ. ವೆಚ್ಚ ಮಾಡಿ ಶೇ.94.50 ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ ಖರೆ, ಅಪರ ಜಿಲ್ಲಾಧಿಕಾರಿ ದುರ್ಗೇಶ ರುದ್ರಾಕ್ಷಿ, ಜಿಪಂ ಉಪ ಕಾರ್ಯದರ್ಶಿ ಎಸ್.ಎಸ್. ಹಿರೇಮಠ, ಉಪ ವಿಭಾಗಾಧಿಕಾರಿ ಎಚ್. ಜಯಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
MUST WATCH
ಹೊಸ ಸೇರ್ಪಡೆ
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?