ಮಕ್ಕಳಿಗೆ ಕೃಷಿಯ ಅರಿವು ಮೂಡಿಸುವ ಕಾರ್ಯವಾಗಲಿ

ಸುಮಾರು 500ವಿದ್ಯಾರ್ಥಿಗಳು ರೈತರ ಉಡುಗೆಯಲ್ಲಿ ಮಿಂಚಿದ್ದು ವಿಶೇಷ.

Team Udayavani, Jan 3, 2023, 5:40 PM IST

ಮಕ್ಕಳಿಗೆ ಕೃಷಿಯ ಅರಿವು ಮೂಡಿಸುವ ಕಾರ್ಯವಾಗಲಿ

ಮುಧೋಳ: ರೈತ ಶ್ರಮಪಡದಿದ್ದರೆ ನಮಗೆ ಉಸಿರಾಡಲು ಉತ್ತಮ ಗಾಳಿ, ಶಾಂತಿಯುತವಾಗಿ ವಿಶ್ರಾಂತಿ ಪಡೆಯಲು ಅವಕಾಶ ಇರುವುದಿಲ್ಲ ಎಂಬುದನ್ನು ನೆನಪಿನಲ್ಲಿಡಬೇಕು, ವಿದ್ಯಾರ್ಥಿ ದೆಸೆಯಿಂದಲೇ ನಾವು ಕೃಷಿಯ ಅರಿವನ್ನು ಮಕ್ಕಳ ಮನಸಿನಲ್ಲಿ ಬಿತ್ತುವ ಕಾರ್ಯ ವಾಗಬೇಕು ಎಂದು ಯುವ ಕೃಷಿಕ ಸಿದ್ದು ಕಳ್ಳೆನ್ನವರ ಹೇಳಿದರು.

ನಗರದ ತ್ರಿವೇಣಿ ಶಿಕ್ಷಣ ಸಂಸ್ಥೆಯ ಶ್ರೀ ಸಂಗಮನಾಥ ಕನ್ನಡ ಮಾಧ್ಯಮ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಯುವ ಕೃಷಿಕರಿಗೆ ನೀಡುವ 2022-23ನೇ ಸಾಲಿನ ಶ್ರೀ ಸಂಗಮ ಯುವ ಕೃಷಿ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವಿಕರಿಸಿ ಅವರು ಮಾತನಾಡಿದರು. ಕೃಷಿ ಕಷ್ಟವಾಗಬಹುದು. ಆದರೆ, ಮುಂದೊಂದು ದಿನ ಅದಕ್ಕೆ ಮಹತ್ವ ಬರುತ್ತದೆ. ರೈತರಿಗೆ ನ್ಯಾಯಯುತ ಬೆಲೆ ಸಿಕ್ಕಾಗ ಕೃಷಿಯತ್ತ ಯುವಕರು ಸಾಗರೋಪಾದಿಯಲ್ಲಿ ಬರುತ್ತಾರೆ ಎಂದು ಹೇಳಿದರು.

ಪ್ರಶಸ್ತಿ ಪುರಸ್ಕೃತ ಉತ್ತೂರ ಗ್ರಾಮದ ರೈತ ಈರಣ್ಣ ಬೋರಡ್ಡಿ ಮಾತನಾಡಿ ನಾವು ಶಿಕ್ಷಣ ಪಡೆದು ಕೃಷಿಯಲ್ಲಿ ಸಾಧನೆ ಮಾಡಬೇಕು ಎಂದು ಕೊಂಡಾಗ ನಮ್ಮ ಕಾಲೆಳೆದವರೇ ಹೆಚ್ಚು ಅಂತಹ ಸಮಾಜವನ್ನು ಎದಿರಿಸಿದಾಗ ಭೂತಾಯಿ ನಮ್ಮನ್ನು ಕೈ ಬಿಡಲಿಲ್ಲ ವರ್ಷಕ್ಕೆ ಎಕರೆಗೆ ಹತ್ತು ಲಕ್ಷದವರೆಗೆ ಆದಾಯ ಪಡೆಯುವಂತಾಗಿದ್ದೇವೆ ಎಂದು ಹೇಳಿದರು.

ಯುವ ಕೃಷಿಕರಾದ ಮರೆಗುದ್ದಿಯ ಮಲ್ಲಪ್ಪ ಕಂಬಾರ ಮಾತನಾಡಿ, ಆಯಗಾರ ಮನೆತನದಿಂದ ಬಂದ ನಮಗೆ ಕೃಷಿಯಲ್ಲಿ ತೊಡಗುವ ಸಮಯದಲ್ಲಿ ಸಾಕಷ್ಟು ತೊಂದರೆಯಾಗಿದ್ದು ಅದನ್ನು ಎದುರಿಸಿ ಆಗದು ಎಂದು ಕೈ ಕಟ್ಟಿ ಕುಳಿತರೆ ಸಾಗದು ಎಂಬ ಕವಿಯ ವಾಣಿಯನ್ನು ಅರಿತು ಕಲ್ಲು, ಗರಸು ಮಣ್ಣು ಇರುವ ಪ್ರದೇಶದಲ್ಲಿ ಲಕ್ಷಾಂತರ ರೂ. ಗಳ ಆದಾಯ ಬರುವಂತೆ ಮಾಡಿ ಮಡ್ಡಿ ನೆಲವನ್ನು ಬಂಗಾರ ಭೂಮಿ ಮಾಡಿ ವರ್ಷಕ್ಕೆ ಮೂವತ್ತು ಲಕ್ಷ ಅದಾಯ ಪಡೆಯುತ್ತಿದ್ದೇನೆ
ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ತ್ರಿವೇಣಿ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ಶಿಶಿರ ಮಲಘಾಣ ಮಾತನಾಡಿ, ಶಾಲಾ ಮಟ್ಟದಲ್ಲಿ ಕೃಷಿಯ ಬಗ್ಗೆ ಮಾಹಿತಿಯನ್ನು ಪಠ್ಯದ ಜತೆಗೆ ಕ್ಷೇತ್ರ ಕಾರ್ಯಮಾಡಿಸುವ ಮೂಲಕ ಅನ್ನದಾತನಾಗಲು ಮುಂದೆ ಬರುವ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಬೇಕು ಎಂದು ಹೇಳಿದರು.

ಮುಖ್ಯೋಪಾಧ್ಯಾಯ ವೆಂಕಟೇಶ ಗುಡೆಪ್ಪನವರ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿಯಂತ ವಿದ್ಯಾರ್ಥಿಗಳಲ್ಲಿ ಆಸಕ್ತಿ ಇರುವ ವಿಷಯದ ಕಡೆಗೆ ಗಮನ ಹರಿಸುವ ನಿಟ್ಟಿನಲ್ಲಿ ಇಂತಹ ಕಾರ್ಯ ಹಮ್ಮಿಕೊಳ್ಳಲಾಗುತ್ತಿದೆ. ತೆರೆ ಮರೆಯಲ್ಲಿ ಸಾಧನೆ ಮಾಡಿದ ಸಾಧಲ ಕೃಷಿಕರನ್ನು ಸನ್ಮಾನಿಸುವ ಮೂಲಕೃಷಿಕರಿಗೆ ಗೌರವ ಸೂಚಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದು ಹೇಳಿದರು.

ಪ್ರಶಸ್ತಿ ಪ್ರದಾನ: ಪ್ರತಿ ವರ್ಷ ರೈತ ದಿನಾಚರಣೆ ನಿಮಿತ್ಯ ನೀಡಲಾಗುವ ಶ್ರೀ ಸಂಗಮ ಯುವ ಕೃಷಿ ರತ್ನ ಪ್ರಶಸ್ತಿಯನ್ನು ಮರೆಗುದ್ದಿಯ ಮಲ್ಲಪ್ಪ ಕಂಬಾರ, ಮುಗಳಖೋಡದ ಸಿದ್ದು ಕಳ್ಳೆನವರ, ಉತ್ತೂರದ ಈರಣ್ಣ ಬೋರಡ್ಡಿ ಅವರಿಗೆ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು. ಇದಕ್ಕೂ ಮುಂಚೆ ಸುಮಾರು 500ವಿದ್ಯಾರ್ಥಿಗಳು ರೈತರ ಉಡುಗೆಯಲ್ಲಿ ಮಿಂಚಿದ್ದು ವಿಶೇಷ.

ಕಾರ್ಯಕ್ರಮದಲ್ಲಿ ಕಾರ್ಯಾಧ್ಯಕ್ಷ ಶಿಶಿರ ಮಲಘಾಣ, ಆಡಳಿತಾಧಿಕಾರಿ ಮಲ್ಲು ಕಳ್ಳೆನವರ, ಪ್ರಾಚಾರ್ಯ ಡಾ| ಎಸ್‌.ಖಾನ್‌, ಮುಖ್ಯೋಪಾಧ್ಯಾಯ ವೆಂಕಟೇಶ ಗುಡೆಪ್ಪನವರ, ಪ್ರತಿಭಾ ಚವ್ಹಾಣ ಇದ್ದರು. ಭಾಗ್ಯ ನಾಯಿಕ ಸ್ವಾಗತಿಸಿ, ಪ್ರೇಮಾ ಮಾದರ, ಆಶಾಬಿ ಮುಲ್ಲಾ ನಿರೂಪಿಸಿ, ಸುಮನ್‌ ಕೊಡಗ ವಂದಿಸಿದರು. ನಂತರ ರೈತ ಜೀವನ ಕುರಿತ ಸಾಕ್ಷé ಚಿತ್ರ ಹಾಗೂ ನೃತ್ಯ ಕಾರ್ಯಕ್ರಮವನ್ನು ಸಂಗಮನಾಥ ಶಾಲಾ ವಿದ್ಯಾರ್ಥಿಗಳು ನಡೆಸಿಕೊಟ್ಟರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.