ಕುಮಾರ ಶ್ರೀಗಳ ರಥಯಾತ್ರೆ ಯಶಸ್ವಿಗೊಳಿಸಿ; ಸದಾಶಿವ ಶ್ರೀ

ಡಿ. 29ರಂದು ಮ.4ಕ್ಕೆ ಗುಳೇದಗುಡ್ಡದಿಂದ ಬಾದಾಮಿಗೆ ಆಗಮಿಸಿ ನಂತರ ಶಿವಯೋಗಮಂದಿರಕ್ಕೆ ತೆರಳಲಿದೆ

Team Udayavani, Dec 26, 2022, 7:00 PM IST

ಕುಮಾರ ಶ್ರೀಗಳ ರಥಯಾತ್ರೆ ಯಶಸ್ವಿಗೊಳಿಸಿ; ಸದಾಶಿವ ಶ್ರೀ

ಬಾದಾಮಿ: ಧಾರ್ಮಿಕ, ಸಾಮಾಜಿಕ ಕಳಕಳಿ, ಶೈಕ್ಷಣಿಕ ಅಭಿವೃದ್ಧಿಗೆ ಭದ್ರಬುನಾದಿ ಮೂಲಕ ಶತಮಾನದ ಹಿಂದೆ ಕ್ರಾಂತಿಕಾರಿ ಕಾರ್ಯೋನ್ಮುಖೀಯಾಗಿ ಕಾಯಕ ಯೋಗಿ ಲಿಂ| ಗುರುಕುಮಾರ ಶಿವಯೋಗಿಗಳವರ ಚಲನಚಿತ್ರ ವಿರಾಟಪುರ ವಿರಾಗಿ ಪ್ರಚಾರ ಹಾಗೂ ಕುಮಾರ ಶ್ರೀಗಳವರ ರಥಯಾತ್ರೆ ಯಶಸ್ವಿಗೊಳಿಸಬೇಕು ಎಂದು ಶಿವಯೋಗ ಮಂದಿರ ಸಂಸ್ಥೆಯ ಉಪಾಧ್ಯಕ್ಷ ಹಾವೇರಿ ಹುಕ್ಕೇರಿ ಮಠದ ಸದಾಶಿವ ಶ್ರೀ ಹೇಳಿದರು.

ಇಲ್ಲಿಯ ಶಿವಯೋಗಮಂದಿರ ಶಾಖಾ ಮಠದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುಮಾರ ಶ್ರೀಗಳು ನಮಗೆ ದೇವರ ಸ್ವರೂಪ. ಸಂಸ್ಕಾರದ ದಾರಿ ತೋರಿದ ಅವರನ್ನು ನಿತ್ಯ ಸ್ಮರಿಸಿ ಜೀವಿಸುವುದು ಎಲ್ಲರ ಕರ್ತವ್ಯ. ರಾಜ್ಯದ ವಿವಿಧೆಡೆ ಈಗಾಗಲೆ ರಥಯಾತ್ರೆ ಆರಂಭಗೊಂಡಿದೆ. ಡಿ. 29ರಂದು ಮ.4ಕ್ಕೆ ಗುಳೇದಗುಡ್ಡದಿಂದ ಬಾದಾಮಿಗೆ ಆಗಮಿಸಿ ನಂತರ ಶಿವಯೋಗಮಂದಿರಕ್ಕೆ ತೆರಳಲಿದೆ. ನಗರದ ಬಸವೇಶ್ವರ ಸರ್ಕಲ್‌ಗೆ ಆಗಮಿಸುವ ರಥ ಯಾತ್ರೆಯನ್ನು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಬೇಕು. ಅದ್ದೂರಿಯಿಂದ ಸ್ವಾಗತಿಸಿ ಪ್ರಸಾದ ವ್ಯವಸ್ಥೆಗೆ ನಿರ್ಣಯಿಸಲಾಗಿದೆ.

ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕುಮಾರ ಶ್ರೀಗಳ ಕೃಪೆಗೆ ಪಾತ್ರರಾಗಬೇಕು ಎಂದರು. ಶಿವಯೋಗ ಮಂದಿರ ಧರ್ಮದರ್ಶಿ ಎಂ.ಬಿ.ಹಂಗರಗಿ, ಮಾಜಿ ಶಾಸಕ ಎಂ.ಕೆ.ಪಟ್ಟಣಶೆಟ್ಟಿ, ವೀರಪುಲಿಕೇಶಿ ವಿದ್ಯಾ ಸಂಸ್ಥೆ ಚೇರಮನ್‌ ಎ.ಸಿ. ಪಟ್ಟಣದ, ನಿವೃತ್ತ ಪ್ರಾಚಾರ್ಯ ಆರ್‌.ಬಿ.ಸಂಕದಾಳ ಮಾತನಾಡಿದರು.

ಮುಖಂಡರಾದ ಮುದಕಯ್ಯನವರು ಹಿರೇಮಠ, ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಕುಮಾರಗೌಡ ಜನಾಲಿ, ಶರಣಗೌಡ ಪಾಟೀಲ, ಪಿ.ಆರ್‌. ಗೌಡರ, ಪುರಸಭೆ ಅಧ್ಯಕ್ಷ ಆರ್‌. ಎಫ್‌.ಬಾಗವಾನ, ಮಹೇಶ ಹೊಸಗೌಡ್ರ, ಸಿದ್ದಣ್ಣ ಟೆಂಗಿನಕಾಯಿ, ಕಸ್ತೂರಮ್ಮ ಮಮದಾಪುರ, ಸುನೀಲ ಕಾರುಡಗಿಮಠ, ಪಂಪಣ್ಣ ಕಾಚೆಟ್ಟಿ, ನಾಗರತ್ನಾ ಪಟ್ಟಣದ, ಸಿದ್ದಣ್ಣ ಮಿಟ್ಟಲಕೋಡ, ಜಿ.ಎಂ.ಹಿರೇಮಠ, ನಾಗರಾಜ ಕಾಚೆಟ್ಟಿ, ಮುತ್ತಣ್ಣ ಚಿನಿವಾಲರ, ಶರಣಪ್ಪ ಮಾವಿನಮರದ, ಗಣೇಶ ಕುಬಸದ, ಇಷ್ಟಲಿಂಗ ಶಿರಸಿ, ಶಿವು ಹಿರೇಮಠ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.