ಮಹಿಳೆಯರು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಿ

ಕೇಂದ್ರ ಸರ್ಕಾರದ ಸಹಯೋಗದಲ್ಲಿ ಸಹಸ್ರಾರು ಡಿಜಿಟಲ್‌ ಸೇವಾ ಕೇಂದ್ರಗಳನ್ನು ಆರಂಭಿಸಿದೆ.

Team Udayavani, Feb 4, 2022, 4:58 PM IST

ಮಹಿಳೆಯರು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಿ

ಕೆರೂರ: ಬಡ ಕುಟುಂಬಗಳ ಸರ್ವತೋಮುಖ ಬೆಳವಣಿಗೆ ಹಾಗೂ ಸ್ವಾವಲಂಬಿ ಬದುಕು ರೂಪಿಸಲು ಧರ್ಮಾಧಿ ಕಾರಿ ಡಾ| ವೀರೇಂದ್ರ ಹೆಗ್ಗಡೆ ಹುಟ್ಟು ಹಾಕಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಅನೇಕ ಬಡ ಕುಟುಂಬಗಳಿಗೆ ಹಾಗೂ ಮಹಿಳೆಯರಿಗೆ ಸ್ವಾವಲಂಬಿ ಬದುಕು ರೂಪಿಸಲು ಆಶಾಕಿರಣವಾಗಿದೆ ಎಂದು ಜಿಪಂ ಮಾಜಿ ಸದಸ್ಯ ಡಾ| ಎಂ.ಜಿ. ಕಿತ್ತಲಿ ಹೇಳಿದರು.

ಪಟ್ಟಣದಲ್ಲಿ ಏರ್ಪಡಿಸಿದ್ದ ಡಿಜಿಟಲ್‌ ಸೇವಾ ಕೇಂದ್ರದ ಉದ್ಘಾಟನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಮ್ಮ ಈ ಸೇವಾ ಕೇಂದ್ರಗಳಲ್ಲಿ ಇ-ಶ್ರಮ ಕಾರ್ಡ್‌ ಗಳನ್ನು ಉಚಿತವಾಗಿ ಮಾಡಿ ಕೊಡಲಾಗುತ್ತಿದೆ. ಕಾರ್ಮಿಕರು, ಬಡ ವರ್ಗದ ಶ್ರಮಿಕರು ಸೌಲಭ್ಯಗಳ ಸದ್ಬಳಕೆ ಪಡೆದುಕೊಳ್ಳಬೇಕು ಎಂದರು.

ಡಿಜಿಟಲ್‌ ಸೇವಾ ಕೇಂದ್ರಗಳಿಗೆ ಚಾಲನೆ ನೀಡಿದ ಬಾದಾಮಿ ತಾಲೂಕು ಯೋಜನಾಧಿಕಾರಿ ಗಣೇಶ ನಾಯ್ಕ ಮಾತನಾಡಿ, ರಾಜ್ಯದಲ್ಲಿ ಸ್ವಸಹಾಯ ಸಂಘಗಳು ಸೇರಿದಂತೆ ಅನೇಕ ಜನಪರ ಕಾರ್ಯಕ್ರಮಗಳ ಜತೆಗೆ ಈಗ ಕೇಂದ್ರ ಸರ್ಕಾರದ ಸಹಯೋಗದಲ್ಲಿ ಸಹಸ್ರಾರು ಡಿಜಿಟಲ್‌ ಸೇವಾ ಕೇಂದ್ರಗಳನ್ನು ಆರಂಭಿಸಿದೆ. ಸಾರ್ವಜನಿಕರಿಗೆ ಇ-ಶ್ರಮ, ಪಾನ್‌ಕಾರ್ಡ್‌, ಬಿಲ್‌ ಪೇಮೆಂಟ್ಸ್‌, ಆಧಾರ್‌ ತಿದ್ದುಪಡಿ ಮುಂತಾದ ಅನೇಕ ಜನಸ್ನೇಹಿ ಸೇವೆಗಳನ್ನು ಕಡಿಮೆ (ರಿಯಾಯತಿ) ದರದಲ್ಲಿ ಒದಗಿಸಲಾಗುತ್ತಿದೆ ಎಂದರು.

ನಿವೃತ್ತ ಉಪನ್ಯಾಸಕ ಆರ್‌.ಎಸ್‌.ನಿಡೋಣಿ ಅವರು, ಕ್ಷೇತ್ರದ ಧರ್ಮಾಧಿ ಕಾರಿಗಳ ಜನಪರ ಕಾಳಜಿಯಿಂದ ಬಾದಾಮಿ ತಾಲೂಕಿನಲ್ಲಿ ಈಗ 33 ಡಿಜಿಟಲ್‌ ಸೇವಾ ಕೇಂದ್ರಗಳು ಚಾಲನೆ ಪಡೆದಿವೆ. ಸಾರ್ವಜನಿಕರು ಜನಪರ ಸೌಲಭ್ಯಗಳ ಪ್ರಯೋಜನ ಪಡೆಯಬೇಕು ಎಂದರು.

ಹಳಪೇಟ ಓಣಿಯಲ್ಲಿ ಪಪಂ ಸದಸ್ಯ ವಿಜಯಕುಮಾರ ಐಹೊಳ್ಳಿ, ನೆಹರುನಗರದಲ್ಲಿ ಸುವರ್ಣಾ ತಿಪ್ಪಣ್ಣ ಪೂಜಾರ ಹೊಸ ಡಿಜಿಟಲ್‌ ಸೇವಾ ಕೇಂದ್ರಗಳಿಗೆ ಚಾಲನೆ ನೀಡಿದರು. ತಾಲೂಕು ನೋಡಲ್‌ ಅಧಿ ಕಾರಿ ಮಂಜು ಮೇದಾರ, ಮೇಲ್ವಿಚಾರಕಿ ರೇಖಾ ಭಜಂತ್ರಿ, ಅಕ್ಕಮ್ಮ ಘಟ್ಟದ, ಕೇಂದ್ರದ ಕಾರ್ಯ ನಿರ್ವಾಹಕಿ ಪ್ರಿಯಾಂಕ ಬೋರಣ್ಣವರ, ತನುಶ್ರೀ ಬೀಳಗಿ ಹಾಗೂ ದಾಕ್ಷಾಯಣಿ ಅಟಗಾಳಿ, ಜ್ಯೋತಿ ಲಕ್ಷೆಟ್ಟಿ, ಅಕ್ಕಮ್ಮ ಶೆಟ್ಟರ, ವಿಜಯಾ ಕಲ್ಯಾಣಿ, ಉಮಾ ಪೂಜಾರ, ಶೋಭಾ ಕಠಾರಿ, ಮಲ್ಲಮ್ಮ ಯಂಡಿಗೇರಿ, ಸಾವಿತ್ರಿ ಮುಂಡಾಸದ, ನಾಗರತ್ನ ಗದ್ದನಕೇರಿ, ಶೋಭಾ ಬಸರಕೋಡ, ರೇಣುಕಾ ಹಾಗೂ ಮೀನಾಕ್ಷಿ ಭಜಂತ್ರಿ, ರಾಜೇಶ್ವರಿ ನಾವಲಗಿ, ಮಂಜುಳಾ ಶಿವಪ್ಪಯ್ಯನಮಠ, ಉಮಾ ಶಿರೋಳ, ಕೃಷ್ಣಾ ಉರಣಕರ, ಅಕ್ಷತಾ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.