ಗ್ರಾಮಗಳಿಗೆ ತಲುಪಿದ ಮಲಪ್ರಭಾ ನೀರು-ಆತಂಕ

ಹಲವಾರು ಗ್ರಾಮಗಳಿಗೆ ಎದುರಾದ ಪ್ರವಾಹ ಭೀತಿ ಮಲಪ್ರಭಾ ಕಾಡಾ ಉಪಾಧ್ಯಕ್ಷ ನಾಗಪ್ಪ ಅಡಪಟ್ಟಿ ಭೇಟಿ

Team Udayavani, Sep 15, 2022, 4:46 PM IST

19

ಕುಳಗೇರಿ ಕ್ರಾಸ್‌: ಮಳೆ ಕಡಿಮೆಯಾದರೂ ಮಲಪ್ರಭಾ ಪ್ರವಾಹದ ನೀರು ಮಾತ್ರ ನದಿಯಂಚಿನ ಗ್ರಾಮಕ್ಕೆ ಬಂದು ತಲುಪಿದ್ದು ಜನರಲ್ಲಿ ಭೀತಿ ಶುರುವಾಗಿದೆ. ಸದ್ಯ ತಳಕವಾಡ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದ ಹತ್ತಿರ ಹಾಗೂ ಗೋವನಕೊಪ್ಪ ಬನಶಂಕರಿ ದೇವಸಾಥನದ ಹತ್ತಿರ ಮಲಪ್ರಭಾ ಪ್ರವಾಹದ ನೀರು ಬಂದಿದ್ದು ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ.

ಕರ್ಲಕೊಪ್ಪ, ಹಾಗನೂರು, ಆಲೂರು ಎಸ್‌ಕೆ, ಬೀರನೂರು, ಕಳಸ, ಕಿತ್ತಲಿ ಹೀಗೆ ಹಲವಾರು ಗ್ರಾಮಗಳಿಗೆ ಪ್ರವಾಹದ ಭೀತಿ ಶುರುವಾಗಿದೆ. ಮಲಪ್ರಭಾ ಮಹಾ ಮಂಡಳಿ ಕಾಡಾ ಉಪಾಧ್ಯಕ್ಷ ನಾಗಪ್ಪ ಅಡಪಟ್ಟಿ ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿ ಪ್ರವಾಹದ ನೀರು ವೀಕ್ಷಿಸಿ ರೈತರನ್ನು ವಿಚಾರಿಸಿದರು.

ನಂತರ ಮಾತನಾಡಿದ ರೈತರು, ಇಲ್ಲಿ ಪ್ರವಾಹ ಉಕ್ಕಿ ಹರಿಯುತ್ತಿದೆ. ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ಸರ್ಕಾರ ಗಮನ ಹರಿಸುತ್ತಿಲ್ಲ. ಸುಮಾರು ವರ್ಷಗಳಿಂದ ನಮಗೆ ಪ್ರವಾಹ ಬರುತ್ತಲೇ ಇದೆ. ರೈತರಿಗೆ ಸರ್ಕಾರದ ಪರಿಹಾರ ಮಾತ್ರ ಮರೀಚಿಕೆಯಾಗಿದೆ ಎಂದು ಸರ್ಕಾರದ ವಿರುದ್ದ ಹರಿಹಾಯ್ದರು.

ಮಲಪ್ರಭಾ ನದಿ ದಡದಲ್ಲಿ ಬೆಳೆಯುವ ತೋಟಗಾರಿಕೆ ಬೆಳೆಗಳಿಗೆ ಸುಮಾರು ವರ್ಷಗಳಿಂದ ಪರಿಹಾರವೇ ಕೊಟ್ಟಿಲ್ಲ. ಗ್ರಾಮಗಳಲ್ಲಿ ಸಾಕಷ್ಟು ಮಣ್ಣಿನ ಮನೆಗಳು ಬಿದ್ದಿವೆ. ಇನ್ನೂ ಕೆಲವರಿಗೆ ಮನೆಗಳನ್ನೇ ಕೊಟ್ಟಿಲ್ಲ. ಹೀಗೆ ಹಲವಾರು ಸಮಸ್ಯೆಗಳಿದ್ದರೂ ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಿ ಸಂತ್ರಸ್ತರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು. ಇಲ್ಲದಿದ್ದರೆ ಹೋರಾಟ ಮಾಡುವುದಾಗಿ ರೈತರು ಎಚ್ಚರಿಸಿದರು.

ನವಿಲುತೀರ್ಥ ಜಲಾಶಯದಿಂದ ನೀರು ಬಿಡುಗಡೆ ಮಾಡಿದ ಹಿನ್ನೆಲೆ ಮಲಪ್ರಭಾ ನದಿಗೆ 12 ಸಾವಿರ ಕ್ಯೂಸೆಕ್‌ ನೀರು ನಿರಂತರ ಹರಿದು ಬರುತ್ತಿದೆ. ಮಲಪ್ರಭಾ ಅಕ್ಕ-ಪಕ್ಕ ಹೊಲಗದ್ದೆಗಳಿಗೆ ನೀರು ನುಗ್ಗಿದ ಪರಿಣಾಮ ತೋಟಗಾರಿಕೆ ಹಾಗೂ ಕೃಷಿ ಬೆಳೆಗಳು ಜಲಾವೃತಗೊಂಡಿವೆ. ವಾರದಿಂದ ನೀರಲ್ಲಿ ಮುಳುಗಿದ ಬೆಳೆಗಳು ಕೊಳೆಯುವ ಸ್ಥಿತಿಗೆ ತಲುಪಿದ್ದು, ರೈತರು ಪರಿಹಾರ ನೀಡುವಂತೆ ಒತ್ತಾಯಿಸುತ್ತಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.