ರಾಜಕೀಯ ಧರ್ಮ ಮರೆತವರಿಗೆ ತಕ್ಕ ಉತ್ತರ ಕೊಡಿ: ಮಲ್ಲಿಕಾರ್ಜುನ ಚರಂತಿಮಠ

ಅಭಿವೃದ್ಧಿಯ ಜತೆಗೆ ಸಾಮಾಜಿಕ ಸಾಮರಸ್ಯವೂ ಮುಖ್ಯ ; ಸಂತ್ರಸ್ತರ ಗೌರವಿಸುವ ಕೆಲಸ ಆಗಿಲ್ಲ

Team Udayavani, May 5, 2023, 11:53 AM IST

ರಾಜಕೀಯ ಧರ್ಮ ಮರೆತವರಿಗೆ ತಕ್ಕ ಉತ್ತರ ಕೊಡಿ: ಮಲ್ಲಿಕಾರ್ಜುನ ಚರಂತಿಮಠ

ಬಾಗಲಕೋಟೆ: ರಾಜಕೀಯ ಮೂಲ ಚಿಂತನೆಗಳನ್ನೇ ಮರೆತು, ರಾಜಕೀಯ ಧರ್ಮ ಪಾಲಿಸದೇ ಆಡಳಿತ ನೀಡುತ್ತಿರುವ ನಾಯಕರಿಗೆ ಈ ಬಾರಿ ಚುನಾವಣೆಯಲ್ಲಿ ಕ್ಷೇತ್ರದ ಜನರು ತಕ್ಕ ಉತ್ತರ ನೀಡಲಿದ್ದಾರೆ. ಎಲ್ಲೆಡೆ ಆಟೋ ರಿಕ್ಷಾ ಚಿಹ್ನೆಗೆ ಬೆಂಬಲ ವ್ಯಕ್ತವಾಗುತ್ತಿದ್ದು, ಜನ ಆಶೀರ್ವದಿಸುವ ಮೂಲಕ 1983ರ ಇತಿಹಾಸ ಮರುಕಳಿಸಲಿದೆ ಎಂದು ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಚರಂತಿಮಠ ಹೇಳಿದರು.

ನಗರದ ಕೌಲಪೇಠ ಸೇರಿದಂತೆ ವಿವಿಧಓಣಿಗಳಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿ ಮತಯಾಚನೆ ನಡೆಸಿದರು.
ಈ ಕ್ಷೇತ್ರದಿಂದ ಹಲವು ಬಾರಿ ಆಯ್ಕೆಯಾದವರು, ಬಡವರ ಕಣ್ಣೀರು ಒರೆಸುವ ಕೆಲಸ ಮಾಡಿಲ್ಲ. ವಿದ್ಯಾವಂತರಿಗೆ
ಕೆಲಸ ಕೊಡಿಸುವ ಕಾರ್ಯವಾಗಿಲ್ಲ. ಇದರಿಂದ ಇಡೀ ಬಾಗಲಕೋಟೆ ನಗರ, ಗ್ರಾಮೀಣ ಭಾಗದಲ್ಲಿ ನಿರುದ್ಯೋಗ ಸಮಸ್ಯೆ ತೀವ್ರವಾಗಿದೆ ಎಂದರು.

ಜನರ ಸ್ವಾವಲಂಬನೆಯ ಬದುಕಿಗೆ ಯಾವ ಆಸರೆಯೂ ಇಲ್ಲ. ಮನೆ-ಭೂಮಿ ಕಳೆದುಕೊಂಡ ಸಂತ್ರಸ್ತರನ್ನು, ಸ್ವಾತಂತ್ರ್ಯ ಯೋಧರಂತೆ ಕಾಣಬೇಕು ಎಂದು ಹಿರಿಯರು ಹೇಳುತ್ತಾರೆ. ಆದರೆ, ನಮ್ಮಲ್ಲಿ ಸಂತ್ರಸ್ತರನ್ನು ಕಡೆಯಾಗಿ ನೋಡಲಾಗುತ್ತಿದೆ. ಬಿಟಿಡಿಎ ಕಚೇರಿಗೆ ಹೋದರೆ, ಹಣ ಕೊಡದೇ ಯಾವ ಕೆಲಸವೂ ಆಗಲ್ಲ. ಇಂತಹ ಹಲವಾರು
ಸಮಸ್ಯೆಗಳ ಮಧ್ಯೆ ಈಗ ಚುನಾವಣೆ ಬಂದಿದೆ. ಜನರು, ನಿಮ್ಮ ಕೆಲಸಕ್ಕಾಗಿ ಕೈ ಕಟ್ಟಿಕೊಂಡು ನಿಲ್ಲುವ ಸಂಪ್ರದಾಯಕ್ಕೆ ಕೊನೆ ಹಾಡಬೇಕು. ಮತದಾರಿಗೆ ಈಗ ಬಹುದೊಡ್ಡ ಅವಕಾಶವಿದೆ. ಪ್ರಜ್ಞಾವಂತಿಕೆಯಿಂದ ಮತ ಚಲಾಯಿಸಬೇಕು. ಯಾವುದೇ ಜಾತಿ, ಆಮಿಷಗಳಿಗೆ ಬಲಿಯಾಗಬೇಡಿ. ನಿರ್ಭಯದಿಂದ ಬದಲಾವಣೆಗೆ
ಮುಂದಾಗಿ ಎಂದು ಮನವಿ ಮಾಡಿದರು.

ಬಾಗಲಕೋಟೆಯಲ್ಲಿ ಬಹುತೇಕರ ಜನರು ನೆಮ್ಮದಿಯಾಗಿ ಬದುಕುತ್ತಿಲ್ಲ. ಭಯದಲ್ಲೇ ಬದುಕುವ ಪರಿಸ್ಥಿತಿ ಇದೆ. ಇದಕ್ಕೆ ಕಡಿವಾಣ ಹಾಕಬೇಕು. ಎಲ್ಲವೂ ನನ್ನಿಂದಲೇ ಎನ್ನುವವರಿಗೆ ಮತದಾನದ ಮೂಲಕ ಬುದ್ದಿ ಕಲಿಸಬೇಕು.
ಕ್ಷೇತ್ರದ ಅಭಿವೃದ್ಧಿ ಎಷ್ಟು ಮುಖ್ಯವೋ, ಸಮಾಜದಲ್ಲಿ ಶಾಂತಿ-ನೆಮ್ಮದಿ ನೆಲೆಸುವುದೂ ಅಷ್ಟೇ ಮುಖ್ಯ ಎಂದು ಮಲ್ಲಿಕಾರ್ಜುನ ಚರಂತಿಮಠ ಹೇಳಿದರು.

ಮತದಾರರು ಕ್ಷೇತ್ರದ ಅಭಿವೃದ್ಧಿಗೆ, ಸಮಾಜ ಸೇವೆಯ ಮನಸ್ಸು ಹೊಂದಿರುವ, ಸೌಹಾರ್ದಯುತ ಕಾಪಾಡುವಂತಹ ನಾಯಕನನ್ನು ಆಯ್ಕೆ ಮಾಡಲು ಸಿದ್ಧರಾಗಿದ್ದಾರೆ. ಎಲ್ಲೆಡೆ ಆಟೋರಿಕ್ಷಾ ಚಿಹ್ನೆಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಮುಖಂಡರಾದ ಸಂತೋಷ ಹೊಕ್ರಾಣಿ, ಬಸವರಾಜ ಕಟಗೇರಿ, ರವಿ ಕುಮಟಗಿ, ಅಶೋಕ ಮುತ್ತಿನಮಠ, ಅಶೋಕ ಮಹೇಂದ್ರಕರ, ನಾಗರಾಜ ಕೆರೂರ, ಸಚಿನ್‌ ಮರಿಶೆಟ್ಟಿ, ಸಂಜೀವ ಡಿಗ್ಗಿ, ಶ್ರೀಶೈಲ ಅಂಗಡಿ, ರಾಜು ಗೌಳಿ, ಅರುಣ ಲೋಕಾಪುರ, ಶಂಕರ ಮಗಜಿ, ವಿಶಾಲ ಮಾಂಡಗಿ, ಮುತ್ತು ಸಜ್ಜನ, ಅಶೋಕ ಸಾಳಿಂಕೆ, ವಿಜಯ ಮನಗೂಳಿ, ಶಂಕ್ರಯ್ಯ ಹಂಚಿನಮಠ, ವೀರೇಶ ಹಿರೇಮಠ, ಚರಣ ಜಾಧವ, ವಿಠಲ ಕಾಳಬರ, ಈರಣ್ಣ ವಿಜಯಪುರ,
ಹನಮಂತ ಕರಾಡೆ, ನಾಗರಾಜ ಕಾಂಬಳೆ, ಶಾಂತಾಬಾಯಿ ಗೋಣಿ, ವಿಜಯಲಕ್ಷ್ಮೀ ಅಂಗಡಿ, ಗಂಗಮ್ಮ ರಜಪೂತ, ಉಮಾ ಗವಿಮಠ, ಸುಭದ್ರಾ ದಶಮನಿ, ಸಂಗಮ್ಮ ನಾಶಿ, ರೇಖಾ ಮುರಡಿ ಮುಂತಾದವರು ಪಾಲ್ಗೊಂಡಿದ್ದರು.

ಜನರ ಸ್ವಾವಲಂಬನೆಯ ಬದುಕಿಗೆ ಯಾವ ಆಸರೆಯೂ ಇಲ್ಲ. ಮನೆ-ಭೂಮಿ ಕಳೆದಕೊಂಡ ಸಂತರಸ್ತರನ್ನು, ಸ್ವಾತಂತ್ರ್ಯ ಯೋಧರಂತೆ ಕಾಣಬೇಕು ಎಂದು ಹಿರಿಯರು ಹೇಳುತ್ತಾರೆ. ಆದರೆ, ನಮ್ಮಲ್ಲಿ ಸಂತ್ರಸ್ತರನ್ನು ಅತ್ಯಂತ ಕಡೆಯಾಗಿ ನೋಡಲಾಗುತ್ತಿದೆ. ಬಿಟಿಡಿಎ ಕಚೇರಿಗೆ ಹೋದರೆ, ಹಣ ಕೊಡದೇ ಯಾವ ಕೆಲಸವೂ ಆಗಲ್ಲ. ಇಂತಹ ಹಲವಾರು ಸಮಸ್ಯೆಗಳ ಮಧ್ಯೆ ಈಗ ಚುನಾವಣೆ ಬಂದಿದೆ. ಜನರು, ನಿಮ್ಮ ಕೆಲಸಕ್ಕಾಗಿ ಕೈಕಟ್ಟಿಕೊಂಡು ನಿಲ್ಲುವ ಸಂಪ್ರದಾಯಕ್ಕೆ ಕೊನೆ ಹಾಡಬೇಕು.
-ಮಲ್ಲಿಕಾರ್ಜುನ ಚರಂತಿಮಠ,
ಪಕ್ಷೇತರ ಅಭ್ಯರ್ಥಿ

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.