ಮತ ಎಣಿಕೆ ಜವಾಬ್ದಾರಿಯಿಂದ ನಿರ್ವಹಿಸಿ
Manage vote count responsibly
Team Udayavani, May 21, 2019, 7:20 AM IST
ಬಾಗಲಕೋಟೆ: ನಗರದಲ್ಲಿ ನಡೆದ ಮತ ಎಣಿಕೆ ವಿಧಾನ ಕುರಿತು ಕೊನೆಯ ಹಂತದ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಆರ್. ರಾಮಚಂದ್ರನ್ ಮಾತನಾಡಿದರು.
ಬಾಗಲಕೋಟೆ: ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಮೇ 23ರಂದು ಬಾಗಲಕೋಟೆ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿ ಜವಾಬ್ದಾರಿಯಿಂದ ಕೆಲಸ ನಿರ್ವಹಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಸೂಚಿಸಿದರು.
ಜಿಲ್ಲಾಡಳಿತ ಭವನದಲ್ಲಿರುವ ನೂತನ ಸಭಾಭವನದಲ್ಲಿ ಮತ ಎಣಿಕೆ ಮೇಲ್ವಿಚಾರಕರು, ಸಹಾಯಕರು ಹಾಗೂ ಮೈಕ್ರೋ ವೀಕ್ಷಕರಿಗೆ ಹಮ್ಮಿಕೊಂಡ ಮತ ಎಣಿಕೆ ವಿಧಾನ ಕುರಿತು ಕೊನೆಯ ಹಂತದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತೋಟಗಾರಿಕೆ ವಿವಿಯಲ್ಲಿ ಬಾಗಲಕೋಟೆ ಲೋಕಸಭಾ ಮತಕ್ಷೇತ್ರಗಳಿಗೆ ಸಂಬಂಧಿಸಿದ 8 ವಿಧಾನಸಭಾ ಮತಕ್ಷೇತ್ರಗಳ ಎಣಿಕೆ ಕಾರ್ಯ ನಡೆಸಲಾಗುತ್ತಿದ್ದು, ಮತ ಎಣಿಕೆಗೆ ಸಂಬಂಧಿಸಿದ ಯಾವುದೇ ಕರ್ತವ್ಯ ನಿರ್ವಹಿಸುವ ಅಧಿಕಾರಿ ಹಾಗೂ ಸಿಬ್ಬಂದಿ ಮತದಾನದ ರಹಸ್ಯ ಕಾಪಾಡತಕ್ಕದ್ದು ಎಂದರು.
ಪ್ರತಿ ಮತಕ್ಷೇತ್ರಕ್ಕೆ 14 ಟೇಬಲ್ಗಳನ್ನು ಇರಿಸಲಾಗುತ್ತಿದ್ದು, ಪ್ರತಿ ಟೇಬಲ್ಗೆ ತಲಾ ಒಬ್ಬರಂತೆ ಮತ ಎಣಿಕಾ ಮೇಲ್ವಿಚಾರಕ, ಸಹಾಯಕ ಮತ್ತು ಮೈಕ್ರೋ ವೀಕ್ಷಕರು ಕಾರ್ಯನಿರ್ವಹಿಸಲಿದ್ದಾರೆ. ಬಾಗಲಕೋಟೆ ಲೋಕಸಭಾ ಮತಕ್ಷೇತ್ರಕ್ಕೆ ಒಟ್ಟು 8 ಮತಕ್ಷೇತ್ರಗಳಿದ್ದು, ಮತ ಎಣಿಕೆ ಕಾರ್ಯಕ್ಕೆ ಪ್ರತಿ ಮತಕ್ಷೇತ್ರಗಳಿಗೆ 16 ಜನ ಮೇಲ್ವಿಚಾರಕರು, ಸಹಾಯಕರು ಹಾಗೂ ಮೈಕ್ರೋ ವೀಕ್ಷಕರನ್ನು ನೇಮಿಸಲಾಗಿದೆ. ಮತ ಎಣಿಕೆ ಕಾರ್ಯಕ್ಕೆ ನಿಯೋಜನೆಗೊಂಡ ಪ್ರತಿಯೊಬ್ಬರು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಮತ ಎಣಿಕೆ ಕಾರ್ಯದಲ್ಲಿ ತೊಡಗಿದ ಸಿಬ್ಬಂದಿಗೆ ಬೆಳಗಿನ ಉಪಹಾರ, ಟೀ ಹಾಗೂ ಮಧ್ಯಾಹ್ನದ ಊಟ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಮತ ಎಣಿಕಾ ಕೇಂದ್ರದಲ್ಲಿ ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದ್ದು, ಮತ ಎಣಿಕಾ ಕೇಂದ್ರದೊಳಗೆ ಬರುವ ಪ್ರತಿಯೊಬ್ಬರು ಆಯಾ ಪ್ರವೇಶದ್ವಾರ ಹಾಗೂ ನಿಗದಿಪಡಿಸಿದ ಸ್ಥಳಗಳಲ್ಲಿ ಮೊಬೈಲ್ ಡಿಪಾಜಿಟ್ ಮಾಡಲು ವ್ಯವಸ್ಥೆ ಮಾಡಲಾಗಿದೆ. ಯಾವುದೇ ಉಹಾಪೋಹಗಳಿಗೆ ಅವಕಾಶವಿಲ್ಲದಂತೆ ಚುನಾವಣಾ ಆಯೋಗದ ನಿರ್ದೇಶನ ಮತ್ತು ಮಾರ್ಗದರ್ಶನದನ್ವಯ ಮತ ಎಣಿಕೆ ಕಾರ್ಯವನ್ನು ಯಶಸ್ವಿಯಾಗಿ ನಡೆಸುವಂತೆ ಸೂಚಿಸಿದರು.
ಮಾಸ್ಟರ್ ಟ್ರೈನರ್ ಗಂಗಾಧರ ದಿವಟರ್ ಮತ ಎಣಿಕೆಗೆ ಸಂಬಂಧಿಸಿದಂತೆ ಎಣಿಕೆ ಟೇಬಲ್, ವಿದ್ಯುನ್ಮಾನ ಮತಯಂತ್ರಗಳ ಮತ ಎಣಿಕೆ ವಿಧಾನ, ಮತ ಎಣಿಕೆ ಪ್ರಕ್ರಿಯೆಯಲ್ಲಿ ಮೂಡಿಬಂದ ಸಂದೇಶಗಳು, ವಿಶೇಷ ಪ್ರಕರಣ, ಮತದಾನ ಖಾತ್ರಿ ಯಂತ್ರದಲ್ಲಿ ಮತ ಎಣಿಕೆ ವಿಧಾನ, ಅಂಚೆ ಮತಪತ್ರಗಳ ಎಣಿಕೆ, ಮತದಾನದ ಗೌಪ್ಯತೆ ಕುರಿತು ವಿವರಿಸಿದರು.
ಅಪರ ಜಿಲಾಧ್ಲಿಕಾರಿ ಶಶಿಧರ ಕುರೇರ, ಉಪವಿಭಾಗಾಧಿಕಾರಿ ಎಚ್.ಜಯಾ, ಇಕ್ರಮ ಸೇರಿದಂತೆ ಆಯಾ ಮತಕ್ಷೇತ್ರಗಳ ಚುನಾವಣಾಧಿಕಾರಿಗಳು, ಮತ ಎಣಿಕಾ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ