ಮಂಗಳೂರು, ಕಾಸರಗೋಡು ಉಗ್ರರ ತಾಣ: ರಾಘವೇಶ್ವರ ಶ್ರೀ
Team Udayavani, Oct 5, 2017, 8:29 AM IST
ಬಾಗಲಕೋಟೆ: ದೇಶದಲ್ಲಿ ಐಸಿಸ್ ಉಗ್ರರ ಹತ್ತಿಕ್ಕುವ ಕೆಲಸ ನಡೆಯಬೇಕಿದೆ. ಮಂಗಳೂರು ಮತ್ತು ಕೇರಳದ ಕಾಸರಗೋಡು ಉಗ್ರರ ಆಶ್ರಯ ತಾಣವಾಗುತ್ತಿವೆ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಂಗಳೂರು, ಕಾಸರ ಗೋಡು ಐಸಿಸ್ ಉಗ್ರರ ತಾಣವಾಗಿ ಪರಿಣಮಿಸುತ್ತಿವೆ. ಇದರ ವಿರುದ್ಧ ಕಠಿಣ ಕ್ರಮ ಅಗತ್ಯ. ಎಂ.ಎಂ.ಕಲಬುರ್ಗಿ ಮತ್ತು ಗೌರಿ ಲಂಕೇಶ ಹತ್ಯೆ ಪ್ರಕರಣದಲ್ಲಿ ಬಲಪಂಥೀಯರ ಕೈವಾಡವಿದೆ ಎಂದು ಆರೋಪಿಸುವುದು ಸರಿಯಲ್ಲ. ಇದಕ್ಕೆ ಸೂಕ್ತ ಪುರಾವೆ ಇದ್ದರೆ ಮಾತ್ರ ಈ ರೀತಿ ಆರೋಪ ಮಾಡಬೇಕು. ಎಡಪಂಥೀಯರ ಹತ್ಯೆ ನಡೆದಾಕ್ಷಣ, ಬಲಪಂಥೀಯರ ಮೇಲೆ ಸಾರ್ವಜನಿಕವಾಗಿ ಆರೋಪಿಸುವುದು ಎಷ್ಟು ಸೂಕ್ತ? ಗೌರಿ ಮತ್ತು ಕಲಬುರ್ಗಿ ಅವರ ಹತ್ಯೆಯಲ್ಲಿ ಬಲ ಪಂಥೀಯರ ಕೈವಾಡ ಕುರಿತು ಆರೋಪ ಮಾಡುವವರ ಬಳಿ ಯಾವ ಸಾಕ್ಷಿ ಇವೆ ಎಂದು ಪಶ್ನಿಸಿದರು. ವೀರಶೈವ ಲಿಂಗಾಯತ, ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ರಾಜಕೀಯ ಇರುವುದು ನಿಜ. ಆದರೆ, ಈ ಬಗ್ಗೆ ನಾನು ಈಗಲೇ ಏನೂ ಹೇಳುವುದಿಲ್ಲ. ಧರ್ಮ ರಕ್ಷಕರಿಗೆ ಆಪತ್ತು ಖಚಿತ ಎಂಬಂತಾಗಿದೆ. ಗೋವಿನ ರಕ್ಷಣೆಗೆ ನಿಂತವರ ಮೇಲೆ ಆಕ್ರಮಣ ನಡೆಯುತ್ತಿದೆ. ಆಕ್ರಮಣ ಮಾಡುವವರಿಗೆ ಸರ್ಕಾರಿ ಯಂತ್ರ ಪೋಷಕವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ