ಸಾಮಾಜಿಕ ನ್ಯಾಯದಡಿ ತೇರದಾಳ ಮತ ಕ್ಷೇತ್ರದ ಬಿಜೆಪಿ ಟಿಕೇಟ್ ಆಕಾಂಕ್ಷಿ: ಮನೋಹರ ಶಿರೋಳ     


Team Udayavani, Sep 26, 2022, 3:32 PM IST

13

ಮಹಾಲಿಂಗಪುರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಾನು ತೇರದಾಳ ಮತಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಆಕಾಂಕ್ಷಿತ ಅಭ್ಯರ್ಥಿಯಾಗಿದ್ದೇನೆ ಎಂದು ರಾಜ್ಯ ಬಿಜೆಪಿ ನೇಕಾರ ಮುಖಂಡ ಮನೋಹರ ಶಿರೋಳ ಹೇಳಿದರು.

ಸೋಮವಾರ ಪಟ್ಟಣದ ಕಾನಿಪ ಸಂಘದ ಕಾರ್ಯಾಲಯದಲ್ಲಿ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿಯೇ ಅತಿ ಹೆಚ್ಚು ನೇಕಾರರನ್ನು ಹೊಂದಿರುವ ಜಿಲ್ಲೆ ಬಾಗಲಕೋಟೆ. ಅದರಲ್ಲಿಯೂ ವಿಶೇಷವಾಗಿ ತೇರದಾಳ ಮತಕ್ಷೇತ್ರದಲ್ಲಿ ಅತಿ ಹೆಚ್ಚು ನೇಕಾರ ಮತದಾರರಿದ್ದು, ತೇರದಾಳ ಮತಕ್ಷೇತ್ರ “ನೇಕಾರ ಕ್ಷೇತ್ರ”ಎಂದೇ ಬಿಂಬಿತವಾಗಿದೆ ಎಂದರು.

1983 ರಲ್ಲಿ ಬಾಗಲಕೋಟೆ ಜಿಲ್ಲೆಯ ಇತಿಹಾಸದಲ್ಲಿಯೇ ಬಿಜೆಪಿ ಮೊದಲನೆಯ ಶಾಸಕನಾಗಿ ಆಯ್ಕೆಯಾಗಿದ್ದು, ಆಗಿನ ಗುಳೇದಗುಡ್ಡ ಕ್ಷೇತ್ರದಿಂದ ನೇಕಾರ ಸಮಾಜದ ಮಲ್ಲಿಕಾರ್ಜುನ ಬನ್ನಿ ಎಂಬುದನ್ನು ಯಾರು ಮರೆಯುವಂತಿಲ್ಲ. ಅಂದಿನಿಂದ ಈಗಿನವರೆಗೂ ಜಿಲ್ಲೆಯ ನೇಕಾರರೆಲ್ಲ ನಿಷ್ಠೆಯಿಂದ ಬಿಜೆಪಿ ಪಕ್ಷಕ್ಕೆ ಮತ ನೀಡುತ್ತಾ ಬಂದಿದ್ದರೂ ಸಾಮಾಜಿಕ ನ್ಯಾಯದ ಅಡಿಯಲ್ಲಿ ಇಲ್ಲಿಯವರೆಗೂ ನೇಕಾರ ಸಮಾಜದ ಯಾರಿಗೂ ವಿಧಾನ ಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಪಕ್ಷದಿಂದ ಅವಕಾಶ ದೊರೆತಿಲ್ಲ ಎಂದು ಹೇಳಿದರು.

ಹಿಂದುಳಿದ ವರ್ಗದ ನೇಕಾರ ಸಮಾಜದವನಾದ ನಾನು ಬಿಜೆಪಿ ನಿಷ್ಠಾವಂತ ಕಾರ್ಯಕರ್ತನಾಗಿ, 2001 ರಲ್ಲಿ ಮಹಾಲಿಂಗಪುರ ಪುರಸಭೆ ಸದಸ್ಯನಾಗಿ, ಚೇರಮನ್ ಆಗಿ, 2006 ರಿಂದ 2009 ರವರೆಗೆ ಬಿಜೆಪಿ ಬಾಗಲಕೋಟೆ ಜಿಲ್ಲಾ ಕಾರ್ಯದರ್ಶಿಯಾಗಿ, 2010 ರಿಂದ 2013 ರ ವರೆಗೆ ಬಿಜೆಪಿ ನೇಕಾರ ಮೋರ್ಚಾ ಜಿಲ್ಲಾ ಅಧ್ಯಕ್ಷನಾಗಿ, 2014 ರಿಂದ 2019 ರ ವರೆಗೆ 2 ಅವಧಿಗೆ ಬಿಜೆಪಿ ನೇಕಾರ ಪ್ರಕೋಷ್ಠ ರಾಜ್ಯ ಸಂಚಾಲಕನಾಗಿ ರಾಜ್ಯಾದ್ಯಾಂತ ಪ್ರವಾಸ ಮಾಡಿ ಪಕ್ಷ ನೀಡಿದ ಎಲ್ಲ ಜವಾಬ್ದಾರಿಗಳನ್ನು ನಿರ್ವಹಿಸಿ ಪಕ್ಷ ಮತ್ತು ನೇಕಾರ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ ಎಂದರು.

ಪಂಚಾಯತಿಯಿಂದ ಹಿಡಿದು ಲೋಕಸಭೆ ಚುನಾವಣೆಗಳಲ್ಲಿ ಪಕ್ಷದ ಪರ ಎಲ್ಲ ಹೋರಾಟಗಳಲ್ಲಿ ಭಾಗಿಯಾಗಿ ಎಲ್ಲ ಚುನಾವಣೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿ ಪಕ್ಷದ ಪರ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂಬ ಹೆಮ್ಮೆ ನನಗೆ ಇದೆ ಎಂದು ಹೇಳಿದರು.     ‌‌‌‌‌‌‌‌‌‌‌      ‌‌‌‌‌‌ ‌‌

‌‌‌ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ದೀನ ದಯಾಳ ಉಪಾಧ್ಯಾಯರ ಆಶಯದಂತೆ  ಸಾಮಾಜಿಕ ನ್ಯಾಯಕ್ಕೆ ಬದ್ದರಾದ ಬಿಜೆಪಿಯ ಜಿಲ್ಲೆಯ, ರಾಜ್ಯ ಮತ್ತು ರಾಷ್ಟ್ರಿಯ ನಾಯಕರು ಹಾಗೂ ಸಂಘಟನೆಯ ಪ್ರಮುಖರು ಹಿಂದುಳಿದ ನೇಕಾರ ಸಮಾಜದವನಾದ ನಾನು ಪಕ್ಷದಲ್ಲಿ ನಿರ್ವಹಿಸಿದ ಜವಾಬ್ದಾರಿಯನ್ನು ಪರಿಗಣಿಸಿ  “ನೇಕಾರ ಮತಕ್ಷೇತ್ರ”ಎಂದು ಬಿಂಬಿತವಾದ ತೇರದಾಳ ಮತಕ್ಷೇತ್ರದಿಂದ ಸ್ಪರ್ಧಿಸಲು ತನಗೆ ಅವಕಾಶ ಮಾಡಿ ಕೊಡುತ್ತಾರೆಂಬ ಸಂಪೂರ್ಣ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಒಂದು ವೇಳೆ ಪಕ್ಷದ ಟಿಕೇಟ್ ಸಿಗದಿದ್ದರೇ ನಿಮ್ಮ ಮುಂದಿನ ನಡೆ ಏನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಇರುತ್ತೇನೆ ಎಂದರು.

‌‌‌‌ನೇಕಾರ ಮುಖಂಡ ಮಹಾಲಿಂಗಪ್ಪ ಬಸಪ್ಪ ಕಲ್ಲೋಳ್ಳಿ ಮಾತನಾಡಿ, ನಮ್ಮ ಕುರುಹಿನಶೆಟ್ಟಿ ನೇಕಾರ ಸಮುದಾಯವು ಮೊದಲಿನಿಂದ ಬಿಜೆಪಿ ಪಕ್ಷಕ್ಕೆ ನಿಷ್ಟಾವಂತರಾಗಿದ್ದೇವೆ. ಈ ಕ್ಷೇತ್ರದಲ್ಲಿ ನೇಕಾರ ಸಂಖ್ಯೆ ಅಧಿಕವಾಗಿರುವದರಿಂದ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಥಳೀಯ ನೇಕಾರರಿಗೆ ಅವಕಾಶ ನೀಡಬೇಕು ಎಂದರು.

ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ನಾವು ಹಾಲಿ ಶಾಸಕ ಸಿದ್ದು ಸವದಿ ಅವರ ವಿರೋಧಿಗಳಲ್ಲ, ನಮ್ಮವರೇ ಜಾಸ್ತಿ ಇರುವ ತೇರದಾಳ ಮತಕ್ಷೇತ್ರದಲ್ಲಿ ಸಾಮಾಜಿಕ ನ್ಯಾಯದಡಿಯಲ್ಲಿ ನಮ್ಮ ನೇಕಾರ ಸಮುದಾಯದ ಸ್ಥಳೀಯ ಮುಖಂಡ ಮನೋಹರ ಶಿರೋಳ ಅವರಿಗೆ ಈ ಬಾರಿಯ ಬಿಜೆಪಿ ಟಿಕೇಟ್ ನೀಡಬೇಕೆಂದು ಪಕ್ಷದ ಮುಖಂಡರಿಗೆ ವಿನಂತಿಸಿಕೊಳ್ಳುತ್ತೇವೆ ಎಂದರು.

ಬಿಜೆಪಿ ಹಿಂದುಳಿದ ವರ್ಗಗಳ ಮುಖಂಡ ಹಣಮಂತ ಜಮಾದಾರ ಮಾತನಾಡಿ, 2008 ರಲ್ಲಿ ರಚನೆಯಾದ ತೇರದಾಳ ಮತಕ್ಷೇತ್ರದಲ್ಲಿ ಇಲ್ಲಿಯವರೆಗೆ ಜಮಖಂಡಿ, ಬೆಂಗಳೂರು ಸೇರಿದಂತೆ ಹೊರಗಿನವರೇ ಶಾಸಕರಾಗಿದ್ದಾರೆ. ಈ ಬಾರಿ ಸ್ಥಳೀಯ ಅಭ್ಯರ್ಥಿ, ನೇಕಾರ ಮುಖಂಡ ಮನೋಹರ ಶಿರೋಳ ಅವರಿಗೆ ಅವಕಾಶ ನೀಡಬೇಕೆಂದು ಬಿಜೆಪಿ ರಾಜ್ಯ ಮತ್ತು ಜಿಲ್ಲಾ ಮುಖಂಡರಿಗೆ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ನೇಕಾರ ಸಮುದಾಯದ ಮುಖಂಡರಾದ ಜಿ.ಎಸ್.ಬರಗಿ, ಸುದರ್ಶನ ಸುಣಧೋಳಿ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.