ಭ್ರಷ್ಟಾಚಾರಕ್ಕೆ ಮನುಷ್ಯನ ದುರಾಸೆ ಕಾರಣ: ಅನಿತಾ ಹದ್ದಣ್ಣವರ

ಪೋಷಕರು ಹೆಣ್ಣು ಮತ್ತು ಗಂಡು ಮಕ್ಕಳ ನಡುವೆ ತಾರತಮ್ಯ ಮಾಡುವುದು ಇದಕ್ಕೆ ಕಾರಣವಾಗಿದೆ.

Team Udayavani, Nov 1, 2021, 6:17 PM IST

ಭ್ರಷ್ಟಾಚಾರಕ್ಕೆ ಮನುಷ್ಯನ ದುರಾಸೆ ಕಾರಣ: ಅನಿತಾ ಹದ್ದಣ್ಣವರ

ಬಾಗಲಕೋಟೆ: ಭ್ರಷ್ಟಾಚಾರ ನಿರ್ಮೂಲನೆ ಬಗ್ಗೆ ಯುವ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವುದು ಅವಶ್ಯವಾಗಿದೆ. ಯಾವುದೇ ರೂಪದಲ್ಲಿ ತನ್ನ ಸ್ವಂತ ಲಾಭಕ್ಕಾಗಿ ಅ ಕಾರವನ್ನು ದುರುಪಯೋಗ ಪಡಿಸಿಕೊಳ್ಳುವುದು ಭ್ರಷ್ಟಾಚಾರವಾಗುತ್ತದೆ ಎಂದು ಲೋಕಾಯುಕ್ತ ಪೊಲೀಸ್‌ ಅಧಿಧೀಕ್ಷಕಿ ಅನಿತಾ ಹದ್ದಣ್ಣವರ ಹೇಳಿದರು.

ನವನಗರದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಭ್ರಷ್ಟಾಚಾರ ವಿರೋಧಿ  ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಭ್ರಷ್ಟಾಚಾರ ನಿರ್ಮೂಲನೆಯಲ್ಲಿ ಯುವಕರ ಪಾತ್ರ ಕುರಿತು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ
ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಆಸೆ ಇರಬೇಕೆ ಹೊರತು ದುರಾಸೆ ಇರಬಾರದು. ಯಾವಾಗ ದುರಾಸೆ ಉತ್ಪತ್ತಿಯಾಗುತ್ತದೆಯೋ ಆಗ ಭ್ರಷ್ಟಾಚಾರ ಉಂಟಾಗುತ್ತದೆ. ಭ್ರಷ್ಟಾಚಾರವನ್ನು ಸರಕಾರವು ಹಿಂದಿನಿಂದ ತಡೆಗಟ್ಟುತ್ತ ಬಂದಿದ್ದು, 1988ರಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಪ್ರಾರಂಭಿಸಿ ಸದರಿ ಸಂಸ್ಥೆಯ ಮೂಲಕ ಯಾರು ಭ್ರಷ್ಟಚಾರದಲ್ಲಿ ತೊಡಗುವರೋ ಅವರಿಗೆ ಕಠಿಣ ಶಿಕ್ಷೆ ಮತ್ತು ಕಾನೂನನ್ನು ಜಾರಿಗೆ ತಂದಿದೆ. ಲಂಚ ಕೊಡುವವರು ಮತ್ತು ತೆಗೆದುಕೊಳ್ಳುವವರು ಮಾತ್ರವಲ್ಲದೇ ಯಾರು ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಗೊತ್ತಿರುವ ಮಾಹಿತಿಯನ್ನು ನೀಡುವದಿಲ್ಲವೋ ಅವರೂ ಸಹ ಭ್ರಷ್ಟಾಚಾರದಲ್ಲಿ ತೊಡಗಿದಂತೆಯೇ ಎಂದು ತಿಳಿಸಿದರು. ಈಚೆಗಿನ ದಿನಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ.

ಪೋಷಕರು ಹೆಣ್ಣು ಮತ್ತು ಗಂಡು ಮಕ್ಕಳ ನಡುವೆ ತಾರತಮ್ಯ ಮಾಡುವುದು ಇದಕ್ಕೆ ಕಾರಣವಾಗಿದೆ. ಈ ರೀತಿ ತಾರತಮ್ಯ ಮಾಡುವುದರಿಂದ ಹೆಣ್ಣು ಮಕ್ಕಳಲ್ಲಿ ಕೀಳರಿಮೆ ಬೆಳೆಯುತ್ತದೆ. ಶಿಕ್ಷಣ, ರಕ್ಷಣೆ ಒಳಗೊಂಡು ಎಲ್ಲ ರೀತಿಯ ಕ್ಷೇತ್ರಗಳಲ್ಲಿ ಹೆಣ್ಣು ಮಕ್ಕಳು ದುರ್ಬಲರು ಎಂಬುವಂತೆ ಬಿಂಬಿಸುವುದರಿಂದ ತಮ್ಮ ರಕ್ಷಣೆ ಮಾಡಿಕೊಳ್ಳುವಷ್ಟರ ಮಟ್ಟಿಗೆ ದುರ್ಬಲರಾಗುತ್ತಾರೆ
ಎಂದರು.

ಭಾಷಣ ಸ್ಪರ್ಧೆಯಲ್ಲಿ ಒಟ್ಟು 30 ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಪ್ರಥಮ ಸ್ಥಾನವನ್ನು ರೂಪಾ ಸಮೀರ, ದ್ವಿತೀಯ ಸ್ಥಾನ ಸೃಷ್ಠಿ ಗಡದ ಹಾಗೂ ತೃತೀಯ ಸ್ಥಾನ ರೂಷನಿ ಮನಿಯಾರ ಪಡೆದುಕೊಂಡರು. ವಿಜಯಪುರದ ಕರ್ನಾಟಕ ಲೋಕಾಯುಕ್ತ ಇಲಾಖೆಯ ಪೊಲೀಸ್‌ ಅ ಧೀಕ್ಷಕಿ ಅನಿತಾ ಹದ್ದಣ್ಣವರ ವಿಜೇತರಿಗೆ ಬಹುಮಾನ ವಿತರಿಸಿದರು. ವಿದ್ಯಾರ್ಥಿಗಳಾದ ಶ್ರೇಯಾ ಜೈನ್‌ ಮತ್ತು ಶಾಹಿನ ಅಂತಾಪುರ ಭ್ರಷ್ಟಾಚಾರ ವಿರೋಧಿ  ವಿಷಯದ ಬಗ್ಗೆ ಭಾಷಣ ಮಾಡಿದರು.

ಕೇಶವ ಸಾಲಮಂಟಪಿ, ಅಲ್ಪಸಂಖ್ಯಾತರ ಇಲಾಖೆಯ ಉಪ ನಿರ್ದೇಶಕ ಎಂ.ಎನ್‌. ಮೇಲಿನಮನಿ, ಪೊಲೀಸ್‌ ಉಪಾಧೀಕ್ಷಕಿ ಅರುಣ ನಾಯಕ, ಪೊಲೀಸ್‌ ನಿರೀಕ್ಷಕ ಎಂ.ಎಚ್‌. ಬಿದರಿ, ಪೊಲೀಸ್‌ ನಿರೀಕ್ಷಕ ಮಹೇಂದ್ರಕುಮಾರ ನಾಯಕ, ಅಲ್ಪ ಸಂಖ್ಯಾತ ರ ಮೊರಾರ್ಜಿ ದೇಸಾಯಿ ಪದವಿ
ಪೂರ್ವ ಕಾಲೇಜಿನ ಪ್ರಾಚಾರ್ಯ ಎಂ.ಎನ್‌.ಗರಗ ಉಪಸ್ಥಿತರಿದ್ದರು. ರಾಜಶೇಖರ ಬುಳ್ಳಾ ನಿರೂಪಿಸಿದರು. ಸಂತೋಷ ವಟಾರ ವಂದಿಸಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.