ದುಪ್ಪಟ್ಟು ಬೆಲೆಗೆ ಮಾಸ್ಕ್ ಮಾರಾಟ-ಜನಾಕ್ರೋಶ


Team Udayavani, Mar 15, 2020, 12:04 PM IST

ದುಪ್ಪಟ್ಟು ಬೆಲೆಗೆ ಮಾಸ್ಕ್ ಮಾರಾಟ-ಜನಾಕ್ರೋಶ

ಸಾಂದರ್ಭಿಕ ಚಿತ್ರ

ಬಾಗಲಕೋಟೆ: ಮಹಾ ಮಾರಿ ಕೊರೊನಾ ವೈರಸ್‌ ಭೀತಿಯೇ ಇವರಿಗೆ ದೊಡ್ಡ ವರವಾಗಿ ಪರಿಣಮಿಸಿದೆ. ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಖಾಸಗಿ ಔಷಧ ಅಂಗಡಿಗಳಲ್ಲಿ ಲೂಟಿ ನಡೆಯುತ್ತಿದೆ. ಕೇವಲ ಏಳು ರೂ.ಗೆ ದೊರೆಯುವ ಮಾಸ್ಕ್ಗೆ 20 ರೂ. ಪಡೆಯುತ್ತಿದ್ದಾರೆ. ಇದರಿಂದ ಸಾರ್ವಜನಿಕರು ರೋಸಿ ಹೋಗಿದ್ದಾರೆ.

ಹೌದು, ಕೊರೊನಾ ವೈರಸ್‌ ಕುರಿತು ಎಲ್ಲೆಡೆ ಜಾಗೃತಿ ನಡೆಯುತ್ತಿದ್ದರೆ, ಖಾಸಗಿ ಔಷಧ ಅಂಗಡಿಗಳ ಮಾಲಿಕರು, ತಮ್ಮ ಮನಸೋಇಚ್ಛೆ ಹಣ ವಸೂಲಿ ಮಾಡುತ್ತಿದ್ದಾರೆ. ಈ ಕುರಿತು ಜಿಲ್ಲಾಡಳಿತದ ಗಮನಕ್ಕೂ ಬಂದಿದ್ದು, ಆ ರೀತಿ ಹೆಚ್ಚಿನ ಹಣ ವಸೂಲಿ ಮಾಡುವವರ ಕುರಿತು ಮಾಹಿತಿ ನೀಡಲು ಕೋರಿದೆ.

ದುಪ್ಪಟ್ಟು ಬೆಲೆಗೆ ಮಾರಾಟ: ಖಾಸಗಿ ಔಷಧ ಅಂಗಡಿಗಳ ಮಾಲೀಕರು, ಮಾಸ್ಕ್ ಮಾರಾಟವೇ ಒಂದು ದೊಡ್ಡ ದಂಧೆಯಂತೆ ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೇ ಜಿಲ್ಲೆಗೆ ಮಾಸ್ಕ್ಗಳ ಪೂರೈಕೆ ಮಾಡುವ ಕಂಪನಿಯವರೂ ಔಷಧ ಅಂಗಡಿಗಳಿಗೆ ಹೆಚ್ಚುವರಿ ಹಣ ಕೊಟ್ಟಾ ಗಲೇ ಪೂರೈಕೆ ಮಾಡುತ್ತಿದ್ದಾರೆ ಎಂದು ಔಷಧ ಅಂಗಡಿಗಳ ಮಾಲೀಕರು ಹೇಳುತ್ತಿದ್ದಾರೆ.

ಮಾಸ್ಕ ಪೂರೈಸುವ ಕಂಪನಿಯವರ ಹೆಚ್ಚುವರಿ ವಸೂಲಿಗೆ ಕೆಲ ಪ್ರಾಮಾಣಿಕ ಔಷಧ ವ್ಯಾಪಾರಸ್ಥರು ರೋಸಿ ಹೋಗಿದ್ದಾರೆ. ಮೊದಲೆಲ್ಲ ಬಲ್ಕ್ನಲ್ಲಿ ಅತ್ಯಂತ ಕಡಿಮೆ ಬೆಲೆಗೆ (ಮೂಲ ಮಾರಾಟ ಬೆಲೆಗೆ) ನೀಡುತ್ತಿದ್ದ ಮಾಸ್ಕ್ಗಳನ್ನು ಈಗ ಮನಸ್ಸಿಗೆ ಬಂದ ದರಕ್ಕೆ ಕೊಡುತ್ತಿದ್ದು, ಕೆಲ ಔಷಧ ಅಂಗಡಿಯವರು ಅವುಗಳನ್ನು ಪಡೆಯುತ್ತಿಲ್ಲ. ಇದೇ ಉತ್ತಮ ಅವಕಾಶವೆಂದು ಭಾವಿಸಿದ ಕೆಲವರು, ಹೆಚ್ಚಿನ ಬೆಲೆಗೆ ಪಡೆದು, ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿರುವುದು ನಗರದಲ್ಲಿ ಕಂಡು ಬಂದಿದೆ.

ಇನ್ನೂ ತುಟ್ಟಿ ಆಗತಾವು: ಸಾಮಾನ್ಯ ಜನರು, ಕೊರೊನಾ ವೈರಸ್‌ಗೆ ಹೆದರಿ, ಹೇಗಾದರೂ ಅದರಿಂದ ಬಚಾವಾದರೆ ಸಾಕು ಎಂದು ಭಾವಿಸಿದ್ದಾರೆ. ಮಾಸ್ಕ್ ಧರಿಸಿದರೆ ಕೊರೊನಾ ವೈರಸ್‌ ಬರಲ್ಲ ಎಂಬ ತಪ್ಪು ಕಲ್ಪನೆಯಲ್ಲಿದ್ದಾರೆ. ಹೀಗಾಗಿ ಎಷ್ಟೇ ಹಣ ಪಡೆದರೂ ಪರವಾಗಿಲ್ಲ. ಹಣಕ್ಕಿಂತ ಜೀವ ಮುಖ್ಯ ಎಂದು ಜನರು, ದುಪ್ಪಟ್ಟು ಬೆಲೆ ತೆತ್ತು ಮಾಸ್ಕ ಖರೀದಿ ಮಾಡುತ್ತಿದ್ದಾರೆ. ಕೆಲ ಔಷಧ ಮಾರಾಟಗಾರರು, ಜನರನ್ನು ಮತ್ತಷ್ಟು ಭೀತಿಗೊಳಿಸಿಯೇ ಮಾರಾಟ ಮಾಡುತ್ತಿದ್ದಾರೆ. ಏಳು ರೂ.ನ ಮಾಸ್ಕ್ ಈಗ 20 ರೂಪಾಯಿಗಾದರೂ ಸಿಗುತ್ತಿದೆ. ಇನ್ನೆರಡು ದಿನ ಬಿಟ್ಟರೆ 100 ರೂ. ದಾಟುತ್ತದೆ. ಈಗಲೇ ತೆಗೆದುಕೊಳ್ಳಿ ಎಂದು ಹೇಳುತ್ತಿರುವುದು ಕೇಳಿ ಬಂದಿದೆ.

ಬೇಕಿದೆ ನಿಯಂತ್ರಣ: ಎರಡು ತೆರನಾದ ಮಾಸ್ಕಗಳಿದ್ದು, ಸಾಮಾನ್ಯ ಮಾಸ್ಕ್ 7 ರೂ.ಗೆ ದೊರೆಯುತ್ತವೆ. ಇನ್ನು ಉತ್ತಮ ದರ್ಜೆಯ ಮಾಸ್ಕಗಳೂ ಇದ್ದು, ಅವುಗಳನ್ನು ಮೂಲ ಬೆಲೆಗೆ ಮಾರಾಟ ಮಾಡಬೇಕು. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮಾಸ್ಕ್ ಮಾರಾಟವೇ ಒಂದು ದಂಧೆ ಮಾಡಿಕೊಂಡ ಔಷಧ ಅಂಗಡಿಗಳ ಮೇಲೆ ಹಠಾತ್‌ ದಾಳಿ ನಡೆಸಿ, ಕಠಿಣ ಕ್ರಮ ಕೈಗೊಳ್ಳಬೇಕಿದೆ. ಇನ್ನೂ ಕೆಲವು ಅಂಗಡಿಕಾರರು, ತಮ್ಮಲ್ಲಿ ಮಾಸ್ಕ್ಗಳಿದ್ದರೂ ಸಂಗ್ರಹ (ಸ್ಟಾಕ್‌) ಇಲ್ಲ ಎಂದು ಹೇಳಿ ಕಳುಹಿಸುತ್ತಿದ್ದಾರೆ. ಹೀಗಾಗಿ ಜನರು, ಮಾಸ್ಕಗಾಗಿ ಔಷಧ ಅಂಗಡಿಯಿಂದ ಮತ್ತೂಂದು ಅಂಗಡಿಗೆ ಅಲೆದಾಡುವ ಪ್ರಸಂಗ ಬಾಗಲಕೋಟೆ ನಗರದಲ್ಲೇ ನಡೆಯುತ್ತಿದೆ.

ನಗರವೊಂದರಲ್ಲೇ ಸುಮಾರು 192 ಔಷಧ ಮಾರಾಟ ಅಂಗಡಿಗಳಿದ್ದು, ಬಹುತೇಕ ಅಂಗಡಿಗಳಲ್ಲೂ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ. ಈ ಕುರಿತು ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕಿದೆ.

ಮಾಸ್ಕ್ ಮಾರಾಟವೇ ದಂಧೆಯನ್ನಾಗಿ ಮಾಡಿಕೊಂಡರೆ ತಕ್ಷಣ ಮಾಹಿತಿ ನೀಡಬೇಕು. ಯಾವುದೇ ಅಂಗಡಿಯವರು ಹೆಚ್ಚಿನ ಹಣಕ್ಕೆ ಮಾರಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಆರೋಗ್ಯ ಇಲಾಖೆಯಲ್ಲಿ ಔಷಧ ಮಾರಾಟ ನಿಯಂತ್ರಣ-ಪರಿಶೀಲನೆಗಾಗಿಯೇ ಪ್ರತ್ಯೇಕ ವಿಭಾಗವಿದ್ದು, ಆ ತಂಡದಿಂದ ಎಲ್ಲೆಡೆ ದಾಳಿ ನಡೆಸಲು ಸೂಚಿಸಲಾಗಿದೆ. ಸ್ಟಾಕ್‌ ಇದ್ದರೂ ಕೊಡದಿದ್ದರೆ, ಹೆಚ್ಚಿನ ಹಣಕ್ಕೆ ಮಾರಾಟ ಮಾಡಿದರೆ ಪ್ರಕರಣ ದಾಖಲಿಸಲಾಗುವುದು.-ಕ್ಯಾಪ್ಟನ್‌ ಡಾ|ಕೆ. ರಾಜೇಂದ್ರ, ಜಿಲ್ಲಾಧಿಕಾರಿ

ನಗರದ ಅಂಗಡಿಯೊಂದರಲ್ಲಿ ಮಾಸ್ಕ್ ಖರೀದಿಸಲು ಹೋಗಿದ್ದೆ. ಸಾಮಾನ್ಯ ಮಾಸ್ಕಗೆ 20 ರೂ. ಹೇಳಿದರು. ಪ್ರಶ್ನಿಸಿದರೆ ಬೇಕಾದರೆ ತಗೆದುಕೊಳ್ಳಿ, ಬೇಡವಾದರೆ ಬಿಡಿ ಎಂದು ಹೇಳಿ, ಇನ್ನೆರಡು ದಿನ ಬಿಟ್ಟರೆ 20 ರೂಪಾಯಿಗೂ ಸಿಗಲ್ಲ ಎಂದು ಹೇಳುತ್ತಿದ್ದಾರೆ. ಜನರೆಲ್ಲ ಭೀತಿಯಲ್ಲಿದ್ದರೆ ಔಷಧ ಅಂಗಡಿಯವರು ಅದನ್ನೇ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸಾಮಾನ್ಯ ಜನರಿಂದ ಹಣ ಸುಲುಗೆ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. -ಸಂತೋಷ ಹಂಜಗಿ, ನಗರದ ಯುವಕ

 

-ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.